SSLC Exam Results 2026: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ 'ಟಿವಿ–ಮೊಬೈಲ್ ಸ್ವಿಚ್ ಆಫ್' ಟಾಸ್ಕ್
SSLC Exam Results 2026: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ಉದ್ದೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ವಿವಿಧ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ಇದೀಗ ಹೊಸ ರೀತಿಯ ಟಾಸ್ಕ್ ಒಂದನ್ನು ಪರಿಚಯಿಸಿದೆ. ವಿದ್ಯಾರ್ಥಿಗಳ ಗಮನವನ್ನು ಓದಿನತ್ತ ಕೇಂದ್ರೀಕರಿಸಲು 'ಟಿವಿ ಮತ್ತು ಮೊಬೈಲ್ ಸ್ವಿಚ್ ಆಫ್' ಎಂಬ ಅಭಿಯಾನಕ್ಕೆ ಚಾಲನೆ ನೀಡಲು ಇಲಾಖೆ ಮುಂದಾಗಿದೆ.
ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆ, ಪ್ರತಿದಿನ ಸಂಜೆ 7ರಿಂದ 9 ಗಂಟೆಯವರೆಗೆ ಎರಡು ಗಂಟೆಗಳ ಕಾಲ ವಿದ್ಯಾರ್ಥಿಗಳು ಮೊಬೈಲ್ ಫೋನ್ ಹಾಗೂ ಟಿವಿಯನ್ನು ಬಳಸದಂತೆ ಇರಬೇಕೆಂದು ಸೂಚಿಸಲಾಗಿದೆ. ಮೊಬೈಲ್ ಗೀಳು ವಿದ್ಯಾರ್ಥಿಗಳ ಅಧ್ಯಯನಕ್ಕೆ ಅಡ್ಡಿ ಆಗುತ್ತಿರುವುದರಿಂದ, ಈ ಸಮಯವನ್ನು ಓದಿಗೆ ಮೀಸಲಿಡುವಂತೆ ಇಲಾಖೆ ಸಲಹೆ ನೀಡಿದೆ.

ಫಲಿತಾಂಶ ಸುಧಾರಣೆಗೆ ಹೊಸ ಅಭಿಯಾನ: ಈ ಅಭಿಯಾನ ಯಶಸ್ವಿ ಆಗಲು ಪೋಷಕರ ಸಹಕಾರವೂ ಅಗತ್ಯ ಆಗಿದ್ದು, ಪಿಡಿಓಗಳ ಮಟ್ಟದಲ್ಲಿಯೇ ಪೋಷಕರಿಗೆ ಜಾಗೃತಿ ಮೂಡಿಸುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ಮುಖ್ಯಶಿಕ್ಷಕರು ಸಹ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಬೇಕು. ಅಗತ್ಯ ಇದ್ದರೆ ಡಂಗೂರ ಸಾರುವ ಮೂಲಕವೂ ಜಾಗೃತಿ ಮೂಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕ್ರಮದಿಂದ ವಿದ್ಯಾರ್ಥಿಗಳ ಓದಿನ ಮೇಲೆ ಹೆಚ್ಚು ಗಮನ ಕೇಂದ್ರೀಕೃತವಾಗಲಿದೆ ಎಂಬ ನಿರೀಕ್ಷೆ ಶಿಕ್ಷಣ ಇಲಾಖೆಯದ್ದಾಗಿದೆ.
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ಉದ್ದೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಹೊಸ ಕ್ರಮಗಳನ್ನು ಜಾರಿಗೆ ತರುತ್ತಿದೆ. ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೆಚ್ಚಿಸುವುದು, ಓದಿನ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸುವುದು ಹಾಗೂ ಪರೀಕ್ಷಾ ಭಯವನ್ನು ಕಡಿಮೆ ಮಾಡುವುದು ಈ ಕ್ರಮಗಳ ಪ್ರಮುಖ ಗುರಿಯಾಗಿದೆ.
ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆ ಶಾಲೆಗಳಲ್ಲಿ ಹೆಚ್ಚುವರಿ ತರಗತಿಗಳು, ಪುನರಾವರ್ತನಾ ಪಾಠಗಳು ಹಾಗೂ ಮಾದರಿ ಪರೀಕ್ಷೆಗಳ ಆಯೋಜನೆಗೆ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಕಷ್ಟಕರ ವಿಷಯಗಳನ್ನು ಗುರುತಿಸಿ ಸುಧಾರಿಸಿಕೊಳ್ಳಲು ಶಿಕ್ಷಕರು ವೈಯಕ್ತಿಕವಾಗಿ ಮಾರ್ಗದರ್ಶನ ನೀಡುತ್ತಿದ್ದಾರೆ.
ಹಾಗೆಯೇ ಇದೀಗ ಶಿಕ್ಷಣ ಇಲಾಖೆ 'ಟಿವಿ ಮತ್ತು ಮೊಬೈಲ್ ಸ್ವಿಚ್ ಆಫ್' ಎಂಬ ಅಭಿಯಾನವನ್ನೂ ಆರಂಭಿಸಿದೆ. ಪ್ರತಿದಿನ ಸಂಜೆ 7ರಿಂದ 9 ಗಂಟೆಯವರೆಗೆ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಟಿವಿ ಬಳಕೆಯನ್ನು ತಪ್ಪಿಸಿ ಓದಿಗೆ ಸಮಯ ಮೀಸಲಿಡುವಂತೆ ಸೂಚನೆ ನೀಡಲಾಗಿದೆ. ಇದರಿಂದ ಮೊಬೈಲ್ ಗೀಳು ಕಡಿಮೆಯಾಗುತ್ತದೆ ಮತ್ತು ಓದಿನ ಮೇಲೆ ಗಮನ ಹೆಚ್ಚುತ್ತದೆ ಎಂಬ ನಿರೀಕ್ಷೆಯಿದೆ.
ಪೋಷಕರ ಪಾತ್ರವೂ ಮಹತ್ವವಾಗಿರುವುದರಿಂದ, ಅವರಿಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಮಕ್ಕಳ ಓದಿನ ಬಗ್ಗೆ ಗಮನ ವಹಿಸುವಂತೆ ಹಾಗೂ ಮನೆಮಟ್ಟದಲ್ಲಿಯೇ ಸಹಕಾರ ನೀಡುವಂತೆ ಇಲಾಖೆ ಮನವಿ ಮಾಡಿದೆ. ಈ ಎಲ್ಲಾ ಕ್ರಮಗಳ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಸುಧಾರಣೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ.
-
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
SSLC: ಹಿಂದಿ ಪರೀಕ್ಷೆಯಲ್ಲಿ ಅಂಕ ಲೆಕ್ಕಕ್ಕೆ ಇಲ್ಲ: ವಿದ್ಯಾರ್ಥಿಗಳ ಹೊರೆ ಇಳಿಕೆ, ಸರ್ಕಾರದ ನಿರ್ಧಾರಕ್ಕೆ ಬೆಂಬಲ ಕೊಟ್ಟ ಕರವೇ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications