ಶುಕ್ರವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಸೂಚನೆಗಳು
ಬೆಂಗಳೂರು, ಜೂನ್ 24 : ಹಲವಾರು ಹಂತದ ಚರ್ಚೆ, ಸರಣಿ ಸಭೆಗಳ ಬಳಿಕ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. ಜೂನ್ 25ರ ಶುಕ್ರವಾರಿಂದ ಜುಲೈ 4ರ ತನಕ ಪರೀಕ್ಷೆ ನಡೆಯಲಿದೆ.
Recommended Video
ಎಸ್ಎಸ್ಎಲ್ಸಿ ಪರೀಕ್ಷೆಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಕಲ ರೀತಿಯಲ್ಲಿ ಸಜ್ಜಾಗಿದೆ. ರಾಜ್ಯಾದ್ಯಂತ 8,48,169 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 8,500 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಕೊನೆ ಕ್ಷಣದ ಸಿದ್ಧತೆಗಳು ನಡೆಯುತ್ತವೆ.
ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾರ್ಯಗಳನ್ನು ಈಗಾಗಲೇ ಮಾಡಲಾಗಿದೆ. ಸಾಮಾಜಿಕ ಅಂತರದ ನಿಯಮದೊಂದಿಗೆ ಆಸನ ವ್ಯವಸ್ಥೆ, ವಿದ್ಯಾರ್ಥಿಗಳು, ಪರೀಕ್ಷಾ ಸಿಬ್ಬಂದಿ, ಅಧಿಕಾರಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಬಳಕೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ-1973ರ ಕಲಂ 144 ರನ್ವಯ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ನಿರ್ದೇಶನಗಳು ಇಲ್ಲಿವೆ.

ವಿದ್ಯಾರ್ಥಿಗಳಿಗೆ ಸೂಚನೆ
* ಪ್ರತಿ ವಿದ್ಯಾರ್ಥಿಯೂ ಆರೋಗ್ಯ ತಪಾಸಣೆಗೆ ಒಳಪಡುವುದರಿಂದ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕಿಂತ ಒಂದೂವರೆ ಗಂಟೆ ಮೊದಲು ಹಾಜರಾಗಬೇಕು.
* ಆರೋಗ್ಯ ತಪಾಸಣೆಗೂ ಮುನ್ನ ಕೈಗಳನ್ನು ಸ್ಯಾನಿಟೈಸರ್ನಿಂದ ಸ್ವಚ್ಛಮಾಡಿಕೊಳ್ಳಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
* ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದನ್ನು ಮರೆತಿದ್ದಲ್ಲಿ ಆರೋಗ್ಯ ತಪಾಸಣೆ ವೇಳೆ ಮಾಸ್ಕ್ ನೀಡಲಾಗುತ್ತದೆ.

ಪರೀಕ್ಷಾ ಕೇಂದ್ರಕ್ಕೆ ಹೋಗಬಹುದು
* ಆರೋಗ್ಯ ತಪಾಸಣೆಯ ನಂತರ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ತೆರಳಲು ಅನುಮತಿಯನ್ನು ನೀಡಲಾಗುತ್ತದೆ.
* ಕೆಮ್ಮುವಾಗ/ಸೀನುವಾಗ ನಿಮ್ಮ ಕರವಸ್ತ್ರಗಳನ್ನು ಉಪಯೋಗಿಸಿ
* ಅನಾರೋಗ್ಯ ಹೊಂದಿರುವ/ಕೋವಿಡ್ -19 ಸೋಂಕಿನ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ವಿದ್ಯಾರ್ಥಿಗಳು ಕೈ ಕುಲಕಬೇಡಿ
* ಇತರೆ ವಿದ್ಯಾರ್ಥಿಗಳೊಂದಿಗೆ ಕೈ ಕುಲುಕುವುದು, ಅಪ್ಪಿಕೊಳ್ಳುವುದು, ಮುಟ್ಟುವುದು ಮತ್ತು ಎಲ್ಲೆಂದರಲ್ಲಿ ಉಗುಳುವುದು ಮಾಡಬೇಡಿ.
* ಬಾಗಿಲು, ಕಿಟಕಿ ಹಾಗೂ ಇತರ ಯಾವುದೇ ವಸ್ತುಗಳನ್ನು ಅನಗತ್ಯವಾಗಿ ಮುಟ್ಟಬೇಡಿ. ಸಹ ವಿದ್ಯಾರ್ಥಿಗಳಿಂದ ಯಾವುದೇ ವಸ್ತು ಪಡೆಯಬೇಡಿ, ನೀವು ಸಹ ನೀಡಬೇಡಿ.
* ಪರೀಕ್ಷೆ ಬರೆಯುವಾಗ ಅನಾರೋಗ್ಯದ ಲಕ್ಷಣ ಕಂಡು ಬಂದಲ್ಲಿ ಮೇಲ್ವಿಚಾರಕರಿಗೆ ತಿಳಿಸಬೇಕು.

ನೀರು, ಆಹಾರ ತನ್ನಿ
* ವಿದ್ಯಾರ್ಥಿಗಳು ತಮ್ಮದೇ ಆದ ಪ್ರತ್ಯೇಕ ಬ್ಯಾಗ್ನಲ್ಲಿ ನೀರಿನ ಬಾಟಲಿ, ಆಹಾರದ ಡಬ್ಬಿ ತರುವುದು
* ಪರೀಕ್ಷೆಗೆ ಅಗತ್ಯವಾದ ಪ್ರವೇಶ ಪತ್ರ ಹಾಗೂ ಇತರ ಸಲಕರಣೆಗಳನ್ನು ತಪ್ಪದೇ ತರುವುದು
* ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಹಂತದಿಂದ ನಿರ್ಗಮಿಸುವ ಹಂತದ ತನಕ ದೈಹಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು.
-
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್











Click it and Unblock the Notifications