ಎಸ್ಸೆಸ್ಸೆಲ್ಸಿ: ಸಾಮೂಹಿಕ ನಕಲಿಗೆ ಅಧಿಕಾರಿಗಳ ಸಾಥ್
ವಿಜಯಪುರ, ಮಾ. 31: ಪರೀಕ್ಷಾ ಕೇಂದ್ರದ ಕಿಟಕಿಗಳ ಮೂಲಕ ಕಾಪಿ ಚೀಟಿಗಳು, ಪುಸ್ತಕಗಳು ತೂರಿ ಬರುತ್ತಿದ್ದವು. ಇದನ್ನು ಪ್ರಶ್ನಿಸಬೇಕಾದ ಅಧಿಕಾರಿಗಳು, ನಿಯೋಜನೆಗೊಂಡಿದ್ದ ಪೊಲೀಸರು ಕೈ ಕಟ್ಟಿ ನಿಂತಿದ್ದರು.
ಇದು ಬಿಹಾರದ ಕತೆಯಲ್ಲ. ನಮ್ಮದೇ ರಾಜ್ಯದ ವಿಜಯಪುರದ ನೈಜ ಚಿತ್ರಣ. ಮುದ್ದೇಬಿಹಾಳದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ಸೋಮವಾರ ಸಂತೆಯಂತೆ ಕಂಡುಬಂದಿತು. ಮಕ್ಕಳಿಕೆ ನಕಲು ಮಾಡಲು ನೆರವಾಗುತ್ತಿದ್ದ ಪಾಲಕರು ಮತ್ತು ಸ್ನೇಹಿತರಿಗೆ ಪೊಲೀಸ್ ಅಧಿಕಾರಿಗಳೇ ಸಹಕಾರ ನೀಡುತ್ತಿದ್ದರು.[ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ]

ಪ್ರಥಮ ಭಾಷೆ 'ಕನ್ನಡ' ಪರೀಕ್ಷೆಯಲ್ಲೇ ವ್ಯಾಪಕ ನಕಲು ನಡೆದಿದೆ. ಜಿಲ್ಲಾಧಿಕಾರಿ ಡಿ. ರಣ್ ದೀಪ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ ನಿಷೇಧಾಜ್ಞೆ ಇದ್ದರೂ ಸ್ಥಳದ ಸುತ್ತ ಜನ ಸೇರಿರುವುದು ಕಂಡುಬಂದಿದೆ. ಸ್ಥಳದಲ್ಲಿದ್ದ ಅಧಿಕಾರಿಗಳು, ಪೊಲೀಸರು ಅಸಹಾಯಕರಾಗಿ ನಿಂತಿದ್ದರು. ಈ ಬಗ್ಗೆ ಪ್ರಶ್ನಿಸಿದ ಅಧಿಕಾರಿಯೊಬ್ಬರಿಗೆ ಜನರು 'ನಿಮ್ಮ ಕೆಲಸ ನೋಡಿಕೊಳ್ಳಿ' ಎಂಬ ರೀತಿಯಲ್ಲಿ ಉತ್ತರ ನೀಡಿದ್ದಾರೆ.
ಜನರು ಪರೀಕ್ಷಾ ಕೇಂದ್ರದ ಕಿಟಕಿಗಳಲ್ಲಿ ಕಾಪಿ ಚೀಟಿಗಳನ್ನು, ಪುಸ್ತಕಗಳನ್ನು ಒಳಗಡೆಗೆ ಎಸೆಯುತ್ತಿದ್ದರು. ಪರೀಕ್ಷಾ ಮೇಲ್ವಿಚಾರಕರು ಸಹ ಸಾಮೂಹಿಕ ನಕಲಿಗೆ ನೆರವು ನೀಡುತ್ತಿದ್ದರು.[2015ರಿಂದ ಎಸೆಸ್ಸೆಲ್ಸಿಯಲ್ಲಿ 'ಕ್ಲಾಸ್' ಬದಲಿಗೆ 'ಗ್ರೇಡ್']
ವಿಬಿಸಿ ಮತ್ತು ಜ್ಞಾನ ಭಾರತಿ ಶಾಲೆ ಸೇರಿದಂತೆ ಅನೇಕ ಕೇಂದ್ರಗಳಲ್ಲಿ ವ್ಯಾಪಕ ಸಾಮೂಹಿಕ ನಕಲು ನಡೆದ ವರದಿಯಾಗಿದ್ದು ಈ ಬಗ್ಗೆ ಸಕಲ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರಣ್ ದೀಪ್ ಮಾಹಿತಿ ನೀಡಿದ್ದಾರೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications