SSLC ಫಲಿತಾಂಶ 2022: ಸಾಮಾನ್ಯ ಮಕ್ಕಳ ದಾಖಲೆ ಪುಡಿಗಟ್ಟಿದ ದಿವ್ಯಾಂಗ ಮಕ್ಕಳು!
ಬೆಂಗಳೂರು, ಮೇ. 19: ರಾಜ್ಯದಲ್ಲಿ 2021-22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸಾಮಾನ್ಯ ವಿದ್ಯಾರ್ಥಿಗಳಿಗೆ ಹೋಲಿಸಿದರೆ, ದಿವ್ಯಾಂಗ ವಿದ್ಯಾರ್ಥಿಗಳು (ದೃಷ್ಟಿ ದೋಷ ಉಳ್ಳವರ ವರ್ಗಕ್ಕೆ ಸೇರಿದವರು) ಹೆಚ್ಚಿನ ಸಾಧನೆ ಮಾಡಿದ್ದಾರೆ!
ಅಚ್ಚರಿಯಾದರೂ ಸತ್ಯ. ಬೆಂಗಳೂರಿನಲ್ಲಿ ಗುರುವಾರ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶದ ವಿವರಗಳನ್ನು ಪ್ರಕಟಿಸಿದರು. ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ತೆಗೆದುಕೊಂಡಿದ್ದ ಸಾಮಾನ್ಯ ವಿದ್ಯಾರ್ಥಿಗಳು ಶೇ. 85 ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ. ದಿವ್ಯಾಂಗ ಮಕ್ಕಳು ಅದರಲ್ಲೂ ದೃಷ್ಟಿ ದೋಷ ಉಳ್ಳವರ ವರ್ಗಕ್ಕೆ ಸೇರಿದ ಮಕ್ಕಳು ಶೇ. 91 ರಷ್ಟು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಸಾಮಾನ್ಯ ವಿದ್ಯಾರ್ಥಿಗಳ ದಾಖಲೆಗಳನ್ನು ಪುಡಿ ಮಾಡಿದ್ದಾರೆ.
ಎಸ್ಎಸ್ಎಲ್ ಸಿ ಪರೀಕ್ಷೆ ತೆಗೆದುಕೊಂಡಿದ್ದ ಸಾಮಾನ್ಯ ವಿದ್ಯಾರ್ಥಿಗಳು ನೂರಕ್ಕೆ ಸರಾಸರಿ 85 ಮಂದಿ ಉತ್ತೀರ್ಣರಾಗಿದ್ದಾರೆ. ಆದರೆ, ದಿವ್ಯಾಂಗ ವಿದ್ಯಾರ್ಥಿಗಳಲ್ಲಿ (ದೃಷ್ಟಿ ದೋಷ ಉಳ್ಳವರ ವರ್ಗಕ್ಕೆ ಸೇರಿದವರು) 100 ಕ್ಕೆ 91 ಮಂದಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ (ಸಾಮಾನ್ಯ ವರ್ಗದ ಬಾಲಕರ ಸಾಧನೆ 100 ಕ್ಕೆ 80, ಸಾಮಾನ್ಯ ವರ್ಗದ ಬಾಲಕಿಯರು 100 ಕ್ಕೆ 90 ) ದಾಖಲೆ ಸೃಷ್ಟಿಸಿದ್ದಾರೆ.

ಎಸ್ಎಸ್ಎಲ್ ಸಿ ಪರೀಕ್ಷೆ ತೆಗೆದುಕೊಂಡಿದ್ದ ದೃಷ್ಟಿದೋಷ ಉಳ್ಳವರ ವರ್ಗಕ್ಕೆ ಸೇರಿದ ವಿಕಲಾಚೇತನ 634 ವಿದ್ಯಾರ್ಥಿಗಳ ಪೈಕಿ 577 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ. 91 ರಷ್ಟು ಪ್ರಮಾಣದ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಒಟ್ಟಾರೆ ವಿವಿಧ ಸಾಮರ್ಥ್ಯವುಳ್ಳ ಒಟ್ಟು 4667 ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ತೆಗೆದುಕೊಂಡಿದ್ದರು. ಅದರಲ್ಲಿ ಒಟ್ಟು 3762 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ಶೇಕಡವಾರು ಫಲಿತಾಂಶ 80. 61 ರಷ್ಟು ಸಾಧನೆ ಮಾಡಿದ್ದಾರೆ.

ವಿಕಲಚೇತನ ವರ್ಗದ ಮಕ್ಕಳು: ಹಾಜರಿ ಉತ್ತೀರ್ಣ ಫಲಿತಾಂಶ ಶೇ.
ಮಾನಸಿಕ ಅಸ್ವಸ್ಥ ವರ್ಗ 731 487 66.48
ದೃಷ್ಟಿದೋಷ ಉಳ್ಳವರು 634 577 91.01
ಶ್ರವಣದೋಷ ಉಳ್ಳವರು 950 799 84.11
ಡೈಸ್ಲೇಕ್ಸಿಯಾ 10 9 90
ದಿವ್ಯಾಂಗ ಮಕ್ಕಳು 1184 955 80.66
ಎಲ್ಲಾ ವರ್ಗಕ್ಕೆ ಸೇರಿದವರು 4667 3762 80.61
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications