SSLC ಫಲಿತಾಂಶ 2022: ಸಾಮಾನ್ಯ ಮಕ್ಕಳ ದಾಖಲೆ ಪುಡಿಗಟ್ಟಿದ ದಿವ್ಯಾಂಗ ಮಕ್ಕಳು!
ಬೆಂಗಳೂರು, ಮೇ. 19: ರಾಜ್ಯದಲ್ಲಿ 2021-22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸಾಮಾನ್ಯ ವಿದ್ಯಾರ್ಥಿಗಳಿಗೆ ಹೋಲಿಸಿದರೆ, ದಿವ್ಯಾಂಗ ವಿದ್ಯಾರ್ಥಿಗಳು (ದೃಷ್ಟಿ ದೋಷ ಉಳ್ಳವರ ವರ್ಗಕ್ಕೆ ಸೇರಿದವರು) ಹೆಚ್ಚಿನ ಸಾಧನೆ ಮಾಡಿದ್ದಾರೆ!
ಅಚ್ಚರಿಯಾದರೂ ಸತ್ಯ. ಬೆಂಗಳೂರಿನಲ್ಲಿ ಗುರುವಾರ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶದ ವಿವರಗಳನ್ನು ಪ್ರಕಟಿಸಿದರು. ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ತೆಗೆದುಕೊಂಡಿದ್ದ ಸಾಮಾನ್ಯ ವಿದ್ಯಾರ್ಥಿಗಳು ಶೇ. 85 ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ. ದಿವ್ಯಾಂಗ ಮಕ್ಕಳು ಅದರಲ್ಲೂ ದೃಷ್ಟಿ ದೋಷ ಉಳ್ಳವರ ವರ್ಗಕ್ಕೆ ಸೇರಿದ ಮಕ್ಕಳು ಶೇ. 91 ರಷ್ಟು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಸಾಮಾನ್ಯ ವಿದ್ಯಾರ್ಥಿಗಳ ದಾಖಲೆಗಳನ್ನು ಪುಡಿ ಮಾಡಿದ್ದಾರೆ.
ಎಸ್ಎಸ್ಎಲ್ ಸಿ ಪರೀಕ್ಷೆ ತೆಗೆದುಕೊಂಡಿದ್ದ ಸಾಮಾನ್ಯ ವಿದ್ಯಾರ್ಥಿಗಳು ನೂರಕ್ಕೆ ಸರಾಸರಿ 85 ಮಂದಿ ಉತ್ತೀರ್ಣರಾಗಿದ್ದಾರೆ. ಆದರೆ, ದಿವ್ಯಾಂಗ ವಿದ್ಯಾರ್ಥಿಗಳಲ್ಲಿ (ದೃಷ್ಟಿ ದೋಷ ಉಳ್ಳವರ ವರ್ಗಕ್ಕೆ ಸೇರಿದವರು) 100 ಕ್ಕೆ 91 ಮಂದಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ (ಸಾಮಾನ್ಯ ವರ್ಗದ ಬಾಲಕರ ಸಾಧನೆ 100 ಕ್ಕೆ 80, ಸಾಮಾನ್ಯ ವರ್ಗದ ಬಾಲಕಿಯರು 100 ಕ್ಕೆ 90 ) ದಾಖಲೆ ಸೃಷ್ಟಿಸಿದ್ದಾರೆ.

ಎಸ್ಎಸ್ಎಲ್ ಸಿ ಪರೀಕ್ಷೆ ತೆಗೆದುಕೊಂಡಿದ್ದ ದೃಷ್ಟಿದೋಷ ಉಳ್ಳವರ ವರ್ಗಕ್ಕೆ ಸೇರಿದ ವಿಕಲಾಚೇತನ 634 ವಿದ್ಯಾರ್ಥಿಗಳ ಪೈಕಿ 577 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ. 91 ರಷ್ಟು ಪ್ರಮಾಣದ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಒಟ್ಟಾರೆ ವಿವಿಧ ಸಾಮರ್ಥ್ಯವುಳ್ಳ ಒಟ್ಟು 4667 ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ತೆಗೆದುಕೊಂಡಿದ್ದರು. ಅದರಲ್ಲಿ ಒಟ್ಟು 3762 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ಶೇಕಡವಾರು ಫಲಿತಾಂಶ 80. 61 ರಷ್ಟು ಸಾಧನೆ ಮಾಡಿದ್ದಾರೆ.

ವಿಕಲಚೇತನ ವರ್ಗದ ಮಕ್ಕಳು: ಹಾಜರಿ ಉತ್ತೀರ್ಣ ಫಲಿತಾಂಶ ಶೇ.
ಮಾನಸಿಕ ಅಸ್ವಸ್ಥ ವರ್ಗ 731 487 66.48
ದೃಷ್ಟಿದೋಷ ಉಳ್ಳವರು 634 577 91.01
ಶ್ರವಣದೋಷ ಉಳ್ಳವರು 950 799 84.11
ಡೈಸ್ಲೇಕ್ಸಿಯಾ 10 9 90
ದಿವ್ಯಾಂಗ ಮಕ್ಕಳು 1184 955 80.66
ಎಲ್ಲಾ ವರ್ಗಕ್ಕೆ ಸೇರಿದವರು 4667 3762 80.61
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Udupi: ಉಡುಪಿ ಜಿಲ್ಲೆಗೆ 'ಸಂಪೂರ್ಣ ಸಾಕ್ಷರತಾ' ಸ್ಥಾನಮಾನ, ಶೀಘ್ರವೇ ಘೋಷಣೆ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications