SSLC Result 2022: ಕೂಲಿ ಕೆಲಸದಾಕೆಯ ಮಗ ಅಮಿತ್ ಮಾದರ್ ರಾಜ್ಯಕ್ಕೆ ಪ್ರಥಮ
ಬೆಂಗಳೂರು, ಮೇ 19: ಆ ಬಾಲಕ ಕೂಲಿ ಕೆಲಸದಾಕೆಯ ಮಗ. ತಂದೆಯ ನೆನಪೇ ಇಲ್ಲ. ತಾಯಿಯ ಆರೈಕೆ ಮತ್ತು ಜತನದಲ್ಲಿ ಬೆಳೆದು, ಸರ್ಕಾರಿ ಶಾಲೆಯಲ್ಲಿಯೇ ಓದಿ ಈಗ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾನೆ.
ವಿಜಯಪುರ ಜಿಲ್ಲೆ, ವಿಜಯಪುರ ಗ್ರಾಮಾಂತರ ತಾಲ್ಲೂಕಿನ ಜುಮನಾಳ ಎಂಬ ಗ್ರಾಮದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಅಮಿತ್ ಮಾದರ್ಗೆ ಗುರುವಾರ ಅಚ್ಚರಿ ಕಾದಿತ್ತು. 2022ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ 145 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿದ್ದರು. ಅದರಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ 21 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿದ್ದರು. ಅದರಲ್ಲಿ ಅಮಿತ್ ಮಾದರ್ ಟಾಪರ್ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ ನೀಡಿದೆ. ಇದರ ಬೆನ್ನಲ್ಲೆ ಆಮಿತ್ ಸಂಖ್ಯೆಗೆ ಶಿಕ್ಷಕರು, ಜಿಲ್ಲಾ ಶಿಕ್ಷಣಾಧಿಕಾರಿಗಳು ಕರೆ ಮಾಡಿ ವಿಷಯ ತಿಳಿಸಿದಾಗ ಅಮಿತ್ ಕುಟುಂಬ ಅತೀವ ಆನಂದ ವ್ಯಕ್ತಪಡಿಸಿದೆ.
ತಾಯಿಯೇ ಆಧಾರ:
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಅಮಿತ್ಗೆ ತಾಯಿಯೇ ಸರ್ವಸ್ವ. ಹುಟ್ಟಿದ ಕೆಲವೇ ತಿಂಗಳುಗಳಲ್ಲಿ ತಂದೆಯನ್ನು ಕಳೆದುಕೊಂಡಿದ್ದ. ಅಂದಿನಿಂತ ತಾಯಿಯ ಆರೈಕೆಯಲ್ಲಿಯೇ ಬೆಳೆದು ಬಂದಿದ್ದಾನೆ. ಈತನ ತಾಯಿ ಮಾದೇವಿ ಜುಮನಾಳ ಗ್ರಾಮದಲ್ಲಿ ಕೂಲಿ ಮಾಡಿ ಮಕ್ಕಳನ್ನು ಸಾಕುತ್ತಿದ್ದಾಳೆ. ಮಾದೇವಿಗೆ ಅಮಿತ್ ಸಹಿತ ಮೂವರು ಮಕ್ಕಳು. ತಾನು ಕೂಲಿ ಮಾಡಿದರೂ ಸರಿ ಮಕ್ಕಳು ವಿದ್ಯಾವಂತರಾಗಬೇಕು ಎಂದು ದಿನಕ್ಕೆ 200 ರೂಪಾಯಿ ಕೂಲಿ ಸಿಕ್ಕರೂ ಸಹ ಮಕ್ಕಳನ್ನು ಓದಿಸುವುದರಲ್ಲಿ ಹಿಂದೆ ಬಿದ್ದಿಲ್ಲ. ಹಿರಿಯ ಮಗಳು ಪದವಿ ಅಂತಿಮ ವರ್ಷದಲ್ಲಿ, ಎರಡನೇ ಮಗ ಪದವಿ ಪ್ರಥಮ ವರ್ಷ ಓದುತ್ತಿದ್ದರೆ, ಈಗ ಅಮಿತ್ ಎಸ್ಎಸ್ಎಲ್ಸಿ ಮುಗಿಸಿ ರಾಜ್ಯಕ್ಕೆ ಪ್ರಥಮ ಬರುವ ಮೂಲಕ ತಾಯಿಯ ಶ್ರಮವನ್ನು ಸಾರ್ಥಕ ಮಾಡಿದ್ದಾನೆ.

ಶಾಲೆಯಲ್ಲಿ ಬಹಳ ಚೂಟಿ ಹುಡುಗ:
ಅಮಿತ್ ಮಾದಾರ್ ತನ್ನ ವಯಸ್ಸಿಗೂ ಮೀರಿದಂತೆ ಯೋಚನೆ ಮಾಡುತ್ತಿದ್ದ. ಬಾಲ್ಯದ ಎಲ್ಲ ಹುಡುಗಾಟಗಳನ್ನು ಬದಿಗಿರಿಸಿ ಓದಿನಲ್ಲಿಯೇ ತಲ್ಲೀನ ಆಗುತ್ತಿದ್ದನಂತೆ. ದಿನಕ್ಕೆ 8-10 ತಾಸು ಓದುತ್ತಿದ್ದ. ಅವನ ಶ್ರಮ ನಮ್ಮೆಲ್ಲರಿಗೂ ಹೆಮ್ಮೆ ತಂದಿದೆ ಎಂದು ಆತನ ಸಹೋದರಿ ಹೇಳಿದ್ದಾರೆ.

"ಲಾಕ್ಡೌನ್ ವೇಳೆ ಶಾಲೆಗಳಿಗೆ ರಜೆ ನೀಡಿದ್ದ ಸಂದರ್ಭದಲ್ಲಿಯೂ ಸಹ ಸ್ಮಾರ್ಟ್ಫೋನ್ ಹೊಂದಿಸಿಕೊಂಡು ಶಿಕ್ಷಕರಿಗೆ ವಿಡಿಯೋ ಕರೆಗಳನ್ನು ಮಾಡುವ ಮೂಲಕ ಪಾಠಗಳನ್ನು ಕೇಳಿಸಿಕೊಳ್ಳುತ್ತಿದ್ದ. ತಾನೇ ಮುಂದೆ ನಿಂತು ಎಲ್ಲ ಸ್ನೇಹಿತರನ್ನು ಸೇರಿಸಿ ವಾಟ್ಸ್ಆ್ಯಪ್ ಗ್ರೂಪ್ ರಚಿಸಿ ಶಿಕ್ಷರನ್ನು ಪಾಠ ಮಾಡುವಂತೆ ದುಂಬಾಲು ಬೀಳುತ್ತಿದ್ದ," ಎಂದು ಆತನ ಹೈಸ್ಕೂಲ್ ಶಿಕ್ಷಕ ಪಿ.ಎ. ರುದ್ರಪ್ಪಗೌಡರ 'ಒನ್ಇಂಡಿಯಾ ಕನ್ನಡ'ಕ್ಕೆ ತಿಳಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications