ಮುಗಿದ ಮೌಲ್ಯಮಾಪನ: ಮೇ 12ರಂದು ಎಸ್ಎಸ್ಎಲ್ಸಿ ಫಲಿತಾಂಶ?
ಬೆಂಗಳೂರು, ಮೇ 5: ವಿದ್ಯಾರ್ಥಿಗಳ ಜೀವನದಲ್ಲಿ ಎಸ್ಎಸ್ಎಲ್ಸಿ ಬಹು ಮುಖ್ಯವಾದ ಹಂತ. ಈಗಗಾಲೇ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಶೀಘ್ರವೇ ಫಲಿತಾಂಶ ಪ್ರಕಟವಾಗಲಿದೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು ಫಲಿತಾಂಶ ಪ್ರಕಟಣೆಗೆ ದಿನಗಣನೇ ಪ್ರಾರಂಭವಾಗಿದೆ.
ಎಸ್ ಎಸ್ ಎಲ್ ಸಿ ಮೌಲ್ಯಮಾಪನ ಮುಕ್ತಾಯ
SSLC ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳು ಬೇಸಿಗೆಯ ರಜೆಯನ್ನು ಅನುಭವಿಸುತ್ತಿದ್ದಾರೆ. ಈ ನಡುವೆ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳು ಮೌಲ್ಯಮಾಪನ ಸಂಪೂರ್ಣವಾಗಿ ಮುಗಿದಿದೆ. ಶಿಕ್ಷಕರು ಈಗಾಗಲೇ ವಿದ್ಯಾರ್ಥಿಗಳ ಅಂಕವನ್ನು ನಮೂದಿಸಿದ್ದಾರೆ.
ಮೇ 12 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ..?
ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ಈಗಾಗಲೇ ಮೌಲ್ಯಮಾಪನ ಮಾಡಿ ಮುಗಿಸಿರುವ ಶಿಕ್ಷಕರು ಅಂಕಗಳನ್ನು ನಮೂದಿಸಿದ್ದಾರೆ. ಶಿಕ್ಷಕರು ಯಾವ ವಿಷಯದ ಪೇಪರ್ ಅನ್ನು ನೀಡಿರುತ್ತಾರೋ ಆ ಪೇಪರ್ ಅನ್ನು ಮೌಲ್ಯಮಾಪನ ಮಾಡಿದ ಬಳಿಕ ಅಂಕಗಳನ್ನು ನಮೂದು ಮಾಡಿರುತ್ತಾರೆ. ಉತ್ತರ ಪತ್ರಿಕೆಯಲ್ಲಿ ನಮೂದಾಗಿರುವ ಅಂಕಗಳನ್ನು ರಿಜಿಸ್ಟರ್ ನಂಬರ್ ಸಹಿತ ಬೇರೊಂದು ಶೀಟ್ ನಲ್ಲಿ ಅಂಕಗಳನ್ನು ನಮೂದು ಮಾಡಲಾಗಿರುತ್ತದೆ. ಆ ಬಳಿಕ ಡಿಜಿಟಲ್ ಎಂಟ್ರಿಯೂ ಆಗಿರೋದರಿಂದ ಫಲಿತಾಂಶವನ್ನು ನೀಡುವುದ ತಡವಾಗುವುದಿಲ್ಲ. ಮೇ 12 ರಂದು ಫಲಿತಾಂಶವನ್ನು ನೀಡಲು ಎಸ್ಎಸ್ಎಲ್ಸಿ ಬೋರ್ಡ್ ಸಂಪೂರ್ಣವಾಗಿ ಸಜ್ಜಾಗುತ್ತಿದೆ.

SSLC ಪರೀಕ್ಷೆಯನ್ನು ಬರೆದವರೆಷ್ಟು..?
ಇನ್ನು ಎಸ್ಎಸ್ಎಲ್ಸಿ ಪರೀಕ್ಷೆಯ ಸಂದರ್ಭದಲ್ಲೂ ಹಿಜಾಬ್ ಗೊಂದಲ ಮುಂದುವರೆದಿತ್ತು. ಆದರೆೆ ಎಲ್ಲಿಯೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಿರಲಿಲ್ಲ. ಎಸ್ಎಸ್ಎಲ್ಸಿ ಪರೀಕ್ಷೆಯನ್ನು 8,73,846 ವಿದ್ಯಾರ್ತಿಗಳು ಪರೀಕ್ಷೆಯನ್ನು ಬರೆಯಲು ನೊಂದಣಿಯನ್ನು ಮಾಡಿಕೊಂಡಿದ್ದರು. ಇದರಲ್ಲಿ ಬಹುತೇಕರು ಪರೀಕ್ಷೆಗೆ ಹಾಜರಾಗಿದ್ದರೂ ಬೆರಳೆಣಿಕೆಯ ವಿದ್ಯಾರ್ಥಿಗಳಷ್ಟೇ ಗೈರು ಹಾಜರಾಗಿದ್ದರು.
ಸರಳೀಕೃತ ಪರೀಕ್ಷೆ.. ಸರಳೀಕೃತ ಮೌಲ್ಯಮಾಪನ
ಎಸ್ಎಸ್ಎಲ್ಸಿ ಪರೀಕ್ಷೆಯ ಆರಂಭದಿಂದಲೂ ಶಿಕ್ಷಣ ಸಚಿವ ಬಿಸಿ ನಾಗೇಶ್ ವಿದ್ಯಾರ್ಥಿಗಳಿಗೆ ಧೈರ್ಯವನ್ನು ತುಂಬುತ್ತಿದ್ದಾರೆ. ಮಕ್ಕಳಿಗೆ ಪರೀಕ್ಷೆಯ ಭಯ ಇರಬಾರದು ಮತ್ತು ಕೋವಿಡ್ ಕಾರಣದಿಂದಾಗಿ ಕೆಲವು ಶಾಲೆೆಗಳಲ್ಲಿ ಸರಿಯಾಗಿ ಪಠ್ಯವನ್ನು ಬೋಧನೆ ಮಾಡಿರಲಿಲ್ಲ ಆದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದರು. ಮಕ್ಕಳ ಆತಂಕವನ್ನು ದೂರ ಮಾಡಲು ಸರಳವಾದ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳು ಸುಲಭವಾದ ಪ್ರಶ್ನೆ ಪತ್ರಿಕೆಯಾದ್ದರಿಂದ ಸಂತಸಗೊಂಡಿದ್ದರು. ಇನ್ನು ಮೌಲ್ಯ ಮಾಪನದ ವೇಳೆಯು ಶಿಕ್ಷಕರು ಕಠಿಣ ದೋರಣೆ ತೋರದೆ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮೌಲ್ಯಮಾಪನ ಕಾರ್ಯವನ್ನು ಮುಗಿಸಿದ್ದಾರೆ.

ಕರ್ನಾಟಕ ಸೆಕೆಂಡರಿ ಎಜುಕೇಷನ್ ಬೋರ್ಡ್ ನ ವೆಬ್ ನಲ್ಲಿ ರಿಸಲ್ಟ್.
ಇನ್ನು ಕರ್ನಾಟಕ ಸೆಕೆಂಡರಿ ಎಜುಕೇಷನ್ ಬೋರ್ಡ್ (KSEEB) ವೆಬ್ ನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟವಾಗಲಿದೆ. ಮೊದಲು ಶಿಕ್ಷಣ ಸಚಿವರಾದ ಬಿಸಿ ನಾಗೇಶ್ ರವರು ಫಲಿತಾಂಶವನ್ನು ಘೋಷಣೆ ಮಾಡಲಿದ್ದಾರೆ. ಎಷ್ಟು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ. ಡಿಸ್ಟಿಂಕ್ಷನ್, ಪ್ರಥಮ ಶ್ರೇಣಿ, ದ್ವಿತೀಯ ಶ್ರೇಣಿ ಪಡೆದವರರು ಎಷ್ಟು ವಿದ್ಯಾರ್ಥಿಗಳು ಪಡೆದಿದ್ದಾರೆ. ಯಾವ ಯಾವ ಜಿಲ್ಲೆ ಪ್ರಥಮ ಎಂಬದನ್ನೆಲ್ಲಾ ಫಲಿತಾಂಶದ ವೇಳೆ ಶಿಕ್ಷಣ ಸಚಿವರು ವಿವರಿಸಲಿದ್ದಾರೆ. ಬಳಿಕ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ನೋಡುವುದು ಹೇಗೆ..?
ವಿದ್ಯಾರ್ಥಿಗಳು KSEEB ವೆಬ್ ಸೈಟ್ ನಲ್ಲಿ sslc result ಅನ್ನು ಆಯ್ಕೆಮಾಡಬೇಕು. ಆ ಬಳಿಕ ನಿಮ್ಮ ನೊಂದಣಿ ಸಂಖ್ಯೆ (ರಿಜಿಸ್ಟರ್ ನಂಬರ್) ಅನ್ನು ನಮೂದಿಸಬೇಕು. ವಿದ್ಯಾರ್ಥಿಯ ಪ್ರವೇಶ ಪತ್ರ (Hall ticket) ನಮೂದಾಗಿರುವ ಜನ್ಮದಿನಾಂಕವನ್ನು ಎಂಟ್ರಿ ಮಾಡಬೇಕು. ಆ ಬಳಿಕ View Your Result ಎಂಬುದರ ಮೇಲೆ ಕ್ಲಿಕ್ ಮಾಡಿದ್ರೆ ಫಲಿತಾಂಶ ಕಾಣಲಿದೆ.
Recommended Video
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ -
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ











Click it and Unblock the Notifications