SSLC Result 2024: ಎಸ್ಎಸ್ಎಲ್ಸಿಯಲ್ಲಿ ಸಾಂಸ್ಕೃತಿಕನಗರಿ ಮೈಸೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಎರಡನೇ ಟಾಪರ್.!
SSLC Result 2024: ಮೇ 9ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಿದ್ದು, ಈ ವೇಳೆ ತಮಗೆ ಕಡಿಮೆ ಅಂಕಗಳು ಬಂದಿವೆ ಎಂದು ಮೈಸೂರಿನ ವಿದ್ಯಾರ್ಥಿನಿಯೊಬ್ಬರು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದರು. ಇದೀಗ ಮರು ಮೌಲ್ಯಮಾಪನ ಫಲಿತಾಂಶ ಪ್ರಕಟವಾಗಿದ್ದು, ಈ ವಿದ್ಯಾರ್ಥಿನಿ ರಾಜ್ಯದಲ್ಲೇ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿನಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗಾದರೆ ಈ ವಿದ್ಯಾರ್ಥಿನಿ ಪಡೆದ ಅಂಕಗಳೆಷ್ಟು ಹಾಗೂ ಹಿನ್ನೆಲೆ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2024ನೇ ಸಾಲಿನ ಎಸ್ಎಸ್ಎಲ್ಸಿ ಮರು ಮೌಲ್ಯಮಾಪನ ಫಲಿತಾಂಶವನ್ನು ಪ್ರಕಟ ಮಾಡಿದ್ದು, ಸಾಂಸ್ಕೃತಿಕನಗರಿ ಮೈಸೂರಿನ ವಿದ್ಯಾರ್ಥಿನಿ ಸುದೀಕ್ಷಾ ಎಂ.ಡಿ. ಅವರು 625ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದಲ್ಲೇ ಎರಡನೇ ಟಾಪರ್ ಎಂಬ ಪಟ್ಟಕ್ಕೆ ಪಾತ್ರರಾಗಿದ್ದಾರೆ.

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟದಾಗ ವಿದ್ಯಾರ್ಥಿನಿ ಸುದೀಕ್ಷಾ ಎಂ.ಡಿ ಅವರಿಗೆ 625ಕ್ಕೆ 620 ಅಂಕಗಳು ಬಂದಿದ್ದವು. ಐದು ವಿಷಯಗಳಲ್ಲಿ 100ಕ್ಕೆ 100 ಅಂಕ ಪಡೆದಿದ್ದ ಸುದೀಕ್ಷ ಎಂ.ಡಿ ಅವರಿಗೆ ಗಣಿತ ವಿಷಯದಲ್ಲಿ 95 ಅಂಕಳು ಬಂದಿದ್ದವು.
ಸಂಸ್ಕೃತ 125 ಇಂಗ್ಲಿಷ್ 100 ಕನ್ನಡ 100 ವಿಜ್ಞಾನ 100 ಸಮಾಜ 100 ಗಣಿತದಲ್ಲಿ 95 ಅಂಕ ಬಂದಿತ್ತು. ನಂತರ ಸುದೀಕ್ಷಾ ಗಣೀತ ವಿಷಯವನ್ನು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದರು. ಇಂದು (ಜೂ.05) ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು, ಸುಧೀಕ್ಷಾ ಗಣಿತದಲ್ಲಿ 99 ಅಂಕ ಪಡೆದಿದ್ದಾರೆ. ಇದೀಗ 625ಕ್ಕೆ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ಟಾಪರ್ ಆಗಿದ್ದಾರೆ.
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ವಿವರ
* ಅಂಕಿತಾ ಬಸಪ್ಪ ಕೊನ್ನೂರು (ಬಾಗಲಕೋಟೆ) - 625ಕ್ಕೆ 625
* ಮೈಸೂರಿನ ಸುದೀಕ್ಷಾ ಎಂ.ಡಿ - 625ಕ್ಕೆ 624
* ಬೆಂಗಳೂರಿನ ಮೇದಾ ಪಿ ಶೆಟ್ಟಿ - 625ಕ್ಕೆ 624
* ಹರ್ಷಿತಾ ಡಿ.ಎಂ (ಮಧುಗಿರಿ) - 625ಕ್ಕೆ 624
* ಚಿನ್ಮಯ್ (ದಕ್ಷಿಣ ಕನ್ನಡ) 625ಕ್ಕೆ 624
* ಸಿದ್ದಾಂತ್ (ಚಿಕ್ಕೊಡಿ) 625ಕ್ಕೆ 624
* ದರ್ಶನ್ (ಶಿರಸಿ) 625ಕ್ಕೆ 624
* ಚಿನ್ಮಯ್ (ಶಿರಸಿ) 625ಕ್ಕೆ 624
* ಶ್ರೀರಾಮ್ (ಶಿರಸಿ) 625ಕ್ಕೆ 624
* ಸುದೀಕ್ಷಾ (ಮೈಸೂರು) 625ಕ್ಕೆ 624
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications