SSLC Result: ಎಸ್ಎಸ್ಎಲ್ಸಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳೇ.. ದುಡುಕಬೇಡಿ.!-ಅವಕಾಶದ ದಾರಿ ಇಲ್ಲಿವೆ
SSLC Rusult: ಈಗಾಗಲೇ ರಾಜ್ಯದಲ್ಲಿ ಮೇ 09 ರಂದು ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆಯಾಗಿದ್ದು, ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಜೂನ್ 07ರಿಂದ ಎಸ್ಎಸ್ಎಲ್ಸಿ ಪರೀಕ್ಷೆ 2024-2 ಆರಂಭವಾಗಲಿದೆ. ಆದ್ದರಿಂದ ಫೇಲ್ ಆದ ವಿದ್ಯಾರ್ಥಿಗಳು ದುಡುಕಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳದೇ ಮುಂದಿನ ಪರೀಕ್ಷೆಗೆ ತಯಾರಾಗಿ.
ಇತ್ತಿಚೀಗಷ್ಟೇ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹೊಸದುರ್ಗ ಕೊಬ್ಬರಿಪೇಟೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಾಲ್ಕು ವಿಷಯಗಳಲ್ಲಿ ವಿಧ್ಯಾರ್ಥಿನಿ ಫೇಲ್ ಆಗಿದ್ದರು. ಬಳಿಕ ಮಗಳು ಫೇಲ್ ಆದರೂ ಪೋಷಕರು ಆತ್ಮಸ್ಥೈರ್ಯ ತುಂಬಿದ್ದರು.
ಆದರೂ ಮನನೊಂದ ವಿಧ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಇನ್ನೂ ಘಟನಾ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅದೇನೇ ಪರೀಕ್ಷೆಗಳು ಇರಲಿ ಹೆದರಿಸುತ್ತೇನೆ ಎನ್ನುವ ಧೈರ್ಯ ವಿದ್ಯಾರ್ಥಿಗಳಲ್ಲಿ ಬರಬೇಕು. ಅದರಲ್ಲೂ ಪರೀಕ್ಷೆಗಳಲದಲಿ ಫೇಲ್ ಆದ ವಿದ್ಯಾರ್ಥಿಗಳು ಎದೆಗುಂದದೇ ಮತ್ತೊಂದು ಅವಕಾಶವನ್ನು ಬಳಸಿಕೊಂಡು ಉತ್ತಮ ದಾರಿಯಲ್ಲಿ ಸಾಗುವ ಛಲವನ್ನು ಹೊಂದಿರಬೇಕು.
ಸಾಧಿಸುವ ಛಲವೊಂದೇ ತಲೆಯಲ್ಲಿ ಇರಬೇಕೇ ಹೊರತು, ಪರೀಕ್ಷೆಯಲ್ಲಿ ಫೇಲ್ ಆದೆನೆಂದು ಕೊರಗಬಾರದು. ಮುಂದಿನ ಸಾಧನೆಯ ದಾರಿಯನ್ನು ಕಂಡುಕೊಳ್ಳುವ ದೈರ್ಯದಲ್ಲಿ ಇರಬೇಕು. ಈ ಮೂಲಕ ಇನ್ನಿತರ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾದರಿಯಾಗುವಂತಿರಬೇಕು ಎನ್ನುವುದೇ ನಮ್ಮ ಆಶಯವಾಗಿದೆ.
ಉದಾಹರಣಗೆ ಮಂಗಳೂರು ಜಿಲ್ಲೆಯಲ್ಲೊಬ್ಬ ವಿದ್ಯಾರ್ಥಿ ಜಸ್ಟ್ ಪಾಸ್ ಆಗಿದ್ದಕ್ಕೆ ಆತನ ಬ್ಯಾನರ್ ಕಟ್ಟಿ ಸಂಭ್ರಮಿಸಿದ್ದಾರೆ. ಸಾಮಾನ್ಯವಾಗಿ ಈ ವಿದ್ಯಾರ್ಥಿ ಇನ್ನಿತರ ಕಡಿಮೆ ಅಂಕ ಪಡೆದ ಹಾಗೂ ಫೇಲ್ ಆದ ವಿದ್ಯಾರ್ಥಿಗಳಿಗೆ ಮಾದರಿ ಎಂದರೆ ತಪ್ಪಾಗಲಾರದು. ಅದೆಷ್ಟೇ ಅಂಕಗಳು ಬರಲಿ, ಫೇಲ್ ಆಗಿರಲಿ ನೀವು ನಿಮ್ಮ ಮುಂದಿನ ಭವಿಷ್ಯದ ಬಗ್ಗೆ ನಿರ್ಧರಿಸಬೇಕಾಗುತ್ತದೆ ಹೊರತು, ಆತ್ಮಹತ್ಯೆಯ ದಾರಿಯನ್ನು ಹಿಡಿಯಬಾರದು ಎನ್ನುವುದೇ ಹಲವು ಸಾಧಕರು ಹೇಳುವ ಆದರ್ಶದ ಮಾತುಗಳಾಗಿವೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications