Karnataka SSLC Result 2022: ಮೇ. 19 ಕ್ಕೆ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು, ಮೇ. 17: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಮೇ. 19 ರಂದು ಮಧ್ಯಾಹ್ನ 1 ಗಂಟೆ ವೇಳೆಗೆ ಹೊರ ಬೀಳಲಿದೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು 2021-22 ನೇ ಶೈಕ್ಷಣಿಕ ಸಾಲಿನ ಫಲಿತಾಂಶವನ್ನು ಪ್ರಕಟ ಮಾಡಲಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.
ಪ್ರತಿ ಸೆಕೆಂಡಿಗೆ ಇಬ್ಬರ ಫಲಿತಾಂಶ ಸಂದೇಶ: ರಾಜ್ಯದಲ್ಲಿಎಸ್ಎಸ್ಎಲ್ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶ ಪ್ರಕಟವಾಗಲಿದೆ. ಪ್ರತಿ ಸೆಕೆಂಡಿಗೆ ಇಬ್ಬರಿಗೆ ಫಲಿತಾಂಶದ ವಿವರ ಮೊಬೈಲ್ಗೆ ರವಾನೆಯಾಗಲಿದೆ. ಮೇ. 19 ಸಂಜೆ ವೇಳೆಗೆ ಫಲಿತಾಂಶದ ವಿವರಗಳು ವಿದ್ಯಾರ್ಥಿಗಳ ಮೊಬೈಲ್ ಗಳಿಗೆ ಹೋಗಲಿದೆ.
ವೆಬ್ ತಾಣದಲ್ಲಿ ಪ್ರಕಟ: ಎಸ್ಎಸ್ಎಲ್ಸಿ ಫಲಿತಾಂಶ ಕುರಿತು ಅಧಿಕೃತ ವೆಬ್ ತಾಣ https://sslc.karnataka.gov.in/ ಹಾಗೂ https://karresults.nic.in/ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಅಧಿಕೃತವಾಗಿ ಫಲಿತಾಂಶ ಪ್ರಕಟವಾದ ಕೂಡಲೇ ವೆಬ್ ತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಸರ್ಕಾರದ ಈ ಅಧಿಕೃತ ವೆಬ್ ತಾಣದಲ್ಲಿ ವಿದ್ಯಾರ್ಥಿಗಳ ಹಾಲ್ ಟಿಕೆಟ್ ನಂಬರ್ ಹಾಕಿದರೆ ಸಾಕು ವಿಷಯವಾರು ಫಲಿತಾಂಶ ಹಾಗೂ ಗಳಿಸಿದ ಒಟ್ಟು ಅಂಕದ ವಿವರ ಪ್ರಕಟವಾಗಲಿದೆ. ಒಂದೇ ಸಲ ವಿದ್ಯಾರ್ಥಿಗಳು ಫಲಿತಾಂಶದ ವಿವರ ನೋಡುವ ಕಾರಣಕ್ಕೆ ಕೆಲವೊಮ್ಮೆ ಫಲಿತಾಂಶ ತೋರಿಸದಿದ್ದರೂ, ವಿದ್ಯಾರ್ಥಿಗಳು ತಾಳ್ಮೆ ಕಳೆದುಕೊಳ್ಳಬಾರದು. ಮಿಗಿಲಾಗಿ ಮೇ. 20 ರಂದೇ ಫಲಿತಾಂಶದ ವಿವರಗಳು ಆಯಾ ಶಾಲೆಗಳಿಗೆ ರವಾನೆಯಾಗಲಿದೆ.
8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು: ಕೋವಿಡ್ ನಡುವೆಯೂ ಕರ್ನಾಟಕದಲ್ಲಿ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ 8.73 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಮಾ. 28 ರಿಂದ ಏ. 11 ರ ವರೆಗೆ ಪರೀಕ್ಷೆ ನಡೆದಿತ್ತು. ಹದಿನೈದು ಸಾವಿರ ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇನ್ನೆರಡು ದಿನದಲ್ಲಿ ಸಮಗ್ರ ವಿವರ ಲಭ್ಯವಾಗಲಿದೆ.

ಮೌಲ್ಯಮಾಪನ ವಿಳಂಬ: ಎಸ್ಎಸ್ಎಲ್ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಸಾವಿರಾರು ಶಿಕ್ಷಕರು ಗೈರು ಹಾಜರಾಗಿದ್ದರು. ಈಗಾಗಿ ಫಲಿತಾಂಶ ಪ್ರಕಟದಲ್ಲಿ ಸ್ವಲ್ಪ ವಿಳಂಬವಾಗಿದೆ. ಮೌಲ್ಯಮಾಪನ ಪೂರ್ಣ ಮುಗಿಸಿದ್ದು, ಫಲಿತಾಂಶದ ವಿವರಗಳನ್ನು ಸಹ ಅಧಿಕೃತ ವೆಬ್ ತಾಣಕ್ಕೆ ಅಪ್ಲೋಡ್ ಮಾಡಲಾಗಿದೆ. ಇನ್ನು ಶಿಕ್ಷಣ ಸಚಿವರು ಅಧಿಕೃತವಾಗಿ ಕರ್ನಾಟಕ ರಾಜ್ಯದ ಫಲಿತಾಂಶ ಪ್ರಕಟಿಸಿದ ಕೂಡಲೇ ವೆಬ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶದಲ್ಲಿ ಯಾವುದೇ ತಾಂತ್ರಿಕ ದೋಷ ಕಾಣದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪರೀಕ್ಷಾ ಮಂಡಳಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
-
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications