SSLC Result: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಬಂಪರ್ ಬಹುಮಾನ ನೀಡಿದ ಸಿದ್ದರಾಮಯ್ಯ
ಬೆಂಗಳೂರು ಮೇ 15: 2023-2024 ನೇ ಸಾಲಿನ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ.
SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಹಾಗೂ ದ್ವಿತೀಯ Rank ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದರು. ಅಲ್ಲದೇ ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿಸಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸಿದರು.

ಇನ್ನೂ ಈ ಸಂದರ್ಭದಲ್ಲಿ ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ವುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು. ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೋಷಕರು ಸರ್ಕಾರದ ನೆರವಿಗೆ ಧನ್ಯತೆ ಅರ್ಪಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994 ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಅವರು ಹೇಳಿದರು.
ನಿಮ್ಮ ಸಾಧನೆಯೇ ನನಗೆ ಪ್ರೇರಣೆ: ಕುಮಾರಿ ಅಂಕಿತ
ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸಿದ ಬಳಿಕ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಮಾತನಾಡಿ, "ಸಾರ್ ನಿಮ್ಮ ಸಾಧನೆಗಳು, ನಿಮ್ಮ ಮಾತುಗಳು ನನ್ನ ಈ ಯಶಸ್ಸಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿದವು" ಎಂದು ತಿಳಿಸಿದರು. ಮುಂದೆ ಐಎಎಸ್ ಅಧಿಕಾರಿ ಆಗಬೇಕೆಂಬ ಬಯಕೆಯನ್ನು ಅಂಕಿತಾ ವ್ಯಕ್ತಪಡಿಸಿದರು. ಪಿಯುಸಿ ದಾಖಲಾತಿ ಸೇರಿದಂತೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವು ಒದಗಿಸುವುದಾಗಿ ಸಿಎಂ ಭರವಸೆ ನೀಡಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications