ಎಸ್ಎಸ್ಎಲ್ಸಿ ಫಲಿತಾಂಶ: ಬಿಬಿಎಂಪಿಯಿಂದ 25 ಸಾವಿರ ಪ್ರೋತ್ಸಾಹ ಧನ
ಬೆಂಗಳೂರು, ಮೇ20: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ವಿದ್ಯಾ ಇಲಾಖೆಯಲ್ಲಿ ಒಟ್ಟು 33 ಪ್ರೌಢಶಾಲೆಗಳಿದ್ದು, 2021-2ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 1,991 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 1,419 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 71 ರಷ್ಟು ಫಲಿತಾಂಶ ಬಂದಿದೆ. ಈ ಪೈಕಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 144 ವಿದ್ಯಾರ್ಥಿಗಳಿಗೆ 25,000 ರೂ. ಪ್ರೋತ್ಸಾಹ ಧನ ನೀಡಿದೆ.
ಉಜ್ವಲ.ಎಂ.ಸಿ 625ಕ್ಕೆ 616 ಅಂಕಗಳಿಕೆ
ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 1,991 ವಿದ್ಯಾರ್ಥಿಗಳ ಪೈಕಿ 742 ಗಂಡು ಮಕ್ಕಳಲ್ಲಿ 41 ಹಾಗೂ 1,249 ಹೆಣ್ಣು ಮಕ್ಕಳಲ್ಲಿ 103 ವಿದ್ಯಾರ್ಥಿಗಳು ಸೇರಿದಂತೆ 144 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಪೈಕಿ ಬಿಬಿಎಂಪಿ ಶ್ರೀರಾಮಪುರ ಬಾಲಕಿಯರ ಪ್ರೌಢಶಾಲೆಗಳಲ್ಲಿ ಉಜ್ವಲ.ಎಂ.ಸಿ ಎಂಬ ವಿದ್ಯಾರ್ಥಿನಿಯು 625ಕ್ಕೆ 616 ಅಂಕಗಳನ್ನು ಪಡೆದು ಪಾಲಿಕೆ ಪ್ರೌಢಶಾಲೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿರುತ್ತಾರೆ.
ಪಾಲಿಕೆಯ ಶಾಂತಿನಗರ ಪ್ರೌಢಶಾಲೆಯು ಶೇ. 100 ರಷ್ಟು ಫಲಿತಾಂಶ
ಪಾಲಿಕೆಯ ಶಾಂತಿನಗರ ಪ್ರೌಢಶಾಲೆಯು ಶೇ. 100 ರಷ್ಟು ಫಲಿತಾಂಶವನ್ನು ನೀಡಿ ಮೊದಲ ಸ್ಥಾನ, ಭೈರವೇಶ್ವರ ನಗರ ಪ್ರೌಢಶಾಲೆಯು ಶೇ. 91.52 ರಷ್ಟು ಫಲಿತಾಂಶವನ್ನು ನೀಡಿ ಎರಡನೇ ಸ್ಥಾನ, ಹೇರೋಹಳ್ಳಿ ಪ್ರೌಢಶಾಲೆಯು ಶೇ. 90.12 ರಷ್ಟು ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದಿರುತ್ತದೆ. ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 144 ವಿದ್ಯಾರ್ಥಿಗಳಿಗೂ ಪಾಲಿಕೆ ವತಿಯಿಂದ ತಲಾ 25,000 ರೂ. ಗಳ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುತ್ತದೆ ಎಂದು ಪಾಲಿಕೆಯ ವಿದ್ಯಾ ಇಲಾಖೆಯು ತಿಳಿಸಿರುತ್ತದೆ.
ಆಯುಕ್ತ, ಆಡಳಿತಾಧಿಕಾರಿಯಿಂದ ಅಭಿನಂದನೆ:
ಬಿಬಿಎಂಪಿಯ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಬಿಬಿಎಂಪಿ ಶಿಕ್ಷಣ ಇಲಾಖೆಯಲ್ಲಿ ಒಟ್ಟು 33 ಪ್ರೌಢಶಾಲೆಗಳಿದ್ದು, 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ. 71.27 ರಷ್ಟು ಫಲಿತಾಂಶ ಬಂದಿರುತ್ತದೆ. ಈ ಉನ್ನತ ಸಾಧನೆಗಾಗಿ ಎಲ್ಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಮತ್ತು ಅಧಿಕಾರಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಟ್ವಿಟ್ ಮಾಡಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಶುಭಕೋರಿದ್ದಾರೆ.
Recommended Video