SSLC ಫಲಿತಾಂಶ ಸೋರಿಕೆ: ಶಿಕ್ಷಣ ಸಚಿವರ ಘೋಷಣೆ ಮುಂಚೆಯೇ APPನಲ್ಲಿ ಲಭ್ಯ
ಬೆಂಗಳೂರು, ಮೇ. 19: 2021-22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಶಿಕ್ಷಣ ಸಚಿವರ ಘೋಷಣೆ ಮೊದಲೇ ಮೊಬೈಲ್ ಆ್ಯಪ್ಗಳಲ್ಲಿ ಲಭ್ಯಾಗುತ್ತಿರುವುದು ಗೊಂದಲಕ್ಕೆ ಎಡೆಮಾಡಿದೆ.
ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಮೇ. 19 ರಂದು ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಈ ಹಿಂದೆ ಸ್ಪಷ್ಟಪಡಿಸಿದ್ದರು. ಅದರ ಪ್ರಕಾರ ಇಂದು ಮಧ್ಯಾಹ್ನ 12. 30 ರ ನಂತರ ಫಲಿತಾಂಶವನ್ನು ಘೋಷಣೆ ಮಾಡಿದ ಬಳಿಕ ಅಧಿಕೃತ ವೆಬ್ ತಾಣಗಳಲ್ಲಿ ಫಲಿತಾಂಶ ಪ್ರಕಟವಾಗಬೇಕಿತ್ತು.
ಇದೇ ವಿಚಾರವಾಗಿ ಗುರುವಾರ ಮಧ್ಯಾಹ್ನ 12.30 ಗಂಟೆಗೆ ಈ ಕುರಿತು ವಿವರ ನೀಡುವ ಸಂಬಂಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ. ಸುದ್ದಿಗೋಷ್ಠಿ ನಡೆಸುವ ಮೊದಲೇ ಫಲಿತಾಂಶ ವೆಬ್ ತಾಣದಲ್ಲಿ ಪ್ರಕಟವಾಗಿದೆ.

ಎಸ್ಎಸ್ಎಲ್ ಸಿ ಫಲಿತಾಂಶವನ್ನು ಶಿಕ್ಷಣ ಸಚಿವರು ಪ್ರಕಟಿಸಿದ ಅರ್ಧ ತಾಸಿನ ಬಳಿಕ ವೆಬ್ ತಾಣದಲ್ಲಿ ಪ್ರಕಟ ಮಾಡಬೇಕಿತ್ತು. ಈ ಹಿಂದೆ ಎಸ್ಎಸ್ಎಲ್ ಸಿ ಫಲಿತಾಂಶ ಘೋಷಣೆ ಮುನ್ನ ಆ್ಯಪ್ಗಳಲ್ಲಿ ಅಥವಾ ಸುದ್ದಿ ಮಾಧ್ಯಮಗಳಲ್ಲಿ ಫಲಿತಾಂಶ ಪ್ರಕಟ ಮಾಡಿದ್ದಲ್ಲಿ, ಅವರಿಗೆ ಸಮನ್ಸ್ ಜಾರಿ ಮಾಡಿ ಶಿಷ್ಠಾಚಾರ ಉಲ್ಲಂಘನೆ ಮಾಡಿದ್ದೀರಾ ಎಂದು ಎಚ್ಚರಿಕೆ ನೀಡುತ್ತಿದ್ದರು. ಆದರೆ ಈ ಭಾರಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಫಲಿತಾಂಶ ಘೋಷಣೆ ಎರಡು ತಾಸು ಮೊದಲೇ ಪ್ರಕಟ ಮಾಡಿದೆ.
ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯೊಬ್ಬ ಖಾಸಗಿ ಆ್ಯಪ್ನಲ್ಲಿ ಪರಿಶೀಲಿಸಿದಾಗ ಪ್ರಥಮ ದರ್ಜೆಯಲ್ಲಿ ಉತ್ತೀರ್ಣ ಆಗಿರುವುದು ಕಂಡು ಬಂದಿದೆ. ಫಲಿತಾಂಶ ಘೋಷಣೆ ಮೊದಲೇ ಫಲಿತಾಂಶವನ್ನು ಮಂಡಳಿಯೇ ಈ ರೀತಿ ಲಭ್ಯ ಆಗಿದ್ದು ಸಾರ್ವಜನಿಕ ಚರ್ಚೆಗೆ ನಾಂದಿ ಹಾಡಿದೆ. ಅಧಿಕೃತವಾಗಿ ಫಲಿತಾಂಶ ಪ್ರಕಟ ಆದ ಬಳಿಕವೂ ಇದೇ ಫಲಿತಾಂಶ ಇರುತ್ತದೆಯೇ ಎಂಬ ಸಂದೇಹ ಮೂಡಿಸಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications