SSLC Results 2025: ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಕನ್ನಡಕ್ಕೇ ಕುತ್ತು; ಮಾತೃಭಾಷೆಯಲ್ಲೇ 1.65 ಲಕ್ಷ ಮಕ್ಕಳು ಫೇಲ್
2024-25ರ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವು ರಾಜ್ಯದ ಶಿಕ್ಷಣ ವಲಯದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ನಾಡಿನ ಹೆಮ್ಮೆಯ ಭಾಷೆ ಕನ್ನಡದಲ್ಲೇ ಅಂದಾಜು 1.65 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದು ಶಿಕ್ಷಣ ವ್ಯವಸ್ಥೆಯ ಗುಣಮಟ್ಟದ ಮೇಲೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಐದನೇ ಒಂದು ಭಾಗದಷ್ಟು ವಿದ್ಯಾರ್ಥಿಗಳು ಫೇಲ್
ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾದ ಸುಮಾರು 8.42 ಲಕ್ಷ ವಿದ್ಯಾರ್ಥಿಗಳ ಪೈಕಿ, ಬರೋಬ್ಬರಿ 1,65,080 ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ ತೇರ್ಗಡೆಯಾಗಲು ವಿಫಲರಾಗಿದ್ದಾರೆ. ಅಂದರೆ, ಪರೀಕ್ಷೆ ಬರೆದ ಪ್ರತಿ ಐವರು ವಿದ್ಯಾರ್ಥಿಗಳಲ್ಲಿ ಒಬ್ಬರು ಕನ್ನಡದಲ್ಲಿ ಅನುತ್ತೀರ್ಣರಾಗಿದ್ದಾರೆ.

ಯಾವ ವಿಷಯಗಳಲ್ಲಿ ಅನುತ್ತೀರ್ಣ?
1. ಪ್ರಥಮ ಭಾಷೆ : ಕನ್ನಡವನ್ನೇ ಪ್ರಥಮ ಭಾಷೆಯಾಗಿ ಆರಿಸಿಕೊಂಡಿದ್ದ 1,32,175 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ.
2. ದ್ವಿತೀಯ ಭಾಷೆ: 30,913 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.
3. ತೃತೀಯ ಭಾಷೆ: 1,992 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.
ಕಾರಣ ಹುಡುಕಲು ತಜ್ಞರ ಸಮಿತಿ ರಚನೆ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರ ನೇತೃತ್ವದಲ್ಲಿ ಶಿಕ್ಷಣ ತಜ್ಞರು ಮತ್ತು ಭಾಷಾ ಪರಿಣಿತರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ವಿದ್ಯಾರ್ಥಿಗಳ ಕಳಪೆ ಸಾಧನೆಗೆ ನಿಖರವಾದ ಕಾರಣಗಳನ್ನು ಅಧ್ಯಯನ ನಡೆಸಿ, ಶೀಘ್ರದಲ್ಲೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ವರದಿ ಸಲ್ಲಿಸಲಿದೆ.
"ಪಠ್ಯಪುಸ್ತಕಗಳ ಪರಿಷ್ಕರಣೆ ಕೊರತೆ, ಭಾಷಾ ಬೋಧನಾ ಕೌಶಲ್ಯವಿರುವ ಶಿಕ್ಷಕರ ಕೊರತೆ ಮತ್ತು ಶಿಕ್ಷಕರಿಗೆ ನಿಯಮಿತ ಕೌಶಲ ತರಬೇತಿಯ ಅಭಾವವೇ ಈ ಫಲಿತಾಂಶಕ್ಕೆ ಪ್ರಮುಖ ಕಾರಣ," ಎಂದು ಪ್ರೊ. ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಭಾಗದಲ್ಲಿ ಕನ್ನಡ ಮಾತೃಭಾಷೆಯಾಗಿದ್ದರೂ ತೇರ್ಗಡೆ ಪ್ರಮಾಣ ಶೇ.68ರಷ್ಟಿದ್ದರೆ, ಕರಾವಳಿ ಜಿಲ್ಲೆಗಳಲ್ಲಿ (ದಕ್ಷಿಣ ಕನ್ನಡ, ಉಡುಪಿ) ಶೇ.90ಕ್ಕಿಂತ ಹೆಚ್ಚಿದೆ ಎಂಬುದು ಗಮನ ಸೆಳೆದಿದೆ.
ಪ್ರಾಥಮಿಕ ಹಂತದಲ್ಲೇ ಎಡವಟ್ಟು?
ತಜ್ಞರ ಪ್ರಕಾರ, ಸಮಸ್ಯೆಯ ಮೂಲ ಹೈಸ್ಕೂಲ್ನಲ್ಲಿಲ್ಲ, ಬದಲಾಗಿ ಪ್ರಾಥಮಿಕ ಹಂತದಲ್ಲಿದೆ. "ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಲಿಸಲು ನುರಿತ ಶಿಕ್ಷಕರ ಕೊರತೆಯಿದೆ. ಗಣಿತ, ವಿಜ್ಞಾನ ಶಿಕ್ಷಕರೇ ಕನ್ನಡವನ್ನೂ ಬೋಧಿಸುತ್ತಿದ್ದಾರೆ. 8ನೇ ತರಗತಿಗೆ ಬರುವ ಎಷ್ಟೋ ಮಕ್ಕಳಿಗೆ ಕನ್ನಡ ವರ್ಣಮಾಲೆಯೂ ಸರಿಯಾಗಿ ಬರುವುದಿಲ್ಲ," ಎಂದು ಬಳ್ಳಾರಿಯ ಶಿಕ್ಷಕರೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಿ, ಪ್ರಾಥಮಿಕ ಹಂತದಿಂದಲೇ ಭಾಷಾ ಕಲಿಕೆಯನ್ನು ಬಲಪಡಿಸಬೇಕಾದ ಅನಿವಾರ್ಯತೆ ಇದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications