Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್
ಬೆಂಗಳೂರು: ರಾಜ್ಯದಲ್ಲಿ ದ್ವಿಭಾಷಾ ನೀತಿ ಭಾಗವಾಗಿ ಎಸ್ಎಸ್ಎಲ್ಸಿಯಲ್ಲಿ ಹಿಂದಿ ಪರೀಕ್ಷೆಯ ಅಂಕಗಳನ್ನು ಪರಿಗಣಿಸದಿರಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಗೆ ವಿಪಕ್ಷ ಬಿಜೆಪಿ ಕೆಂಡವಾಗಿದೆ. 'ತೃತೀಯ ಭಾಷೆ ಹಿಂದಿಯನ್ನು ರದ್ದು ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಮಕ್ಕಳ ಬದುಕಿಗೆ ಕಲ್ಲು ಹಾಕಿದೆ. ಕನ್ನಡದ ಮೇಲಿನ ಪ್ರೀತಿಯಿಂದ ಸರ್ಕಾರ ಈ ತೀರ್ಮಾನ ಮಾಡಿಲ್ಲ. ಇದು ಕೇವಲ ರಾಜಕಾರಣ' ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯಿಂದ ಏಕಾಏಕಿ ತೃತೀಯ ಭಾಷೆ ಹಿಂದಿಯನ್ನು ತೆಗೆದುಹಾಕಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿರುವ ಸಮಯದಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ಹಿಂದಿ ಪಾಠ ಓದಿ ಅಭ್ಯಾಸ ಮಾಡಿದ್ದಾರೆ. ಈಗ ದಿಢೀರನೆ ಈ ನಿರ್ಧಾರ ಕೈಗೊಂಡಿರುವುದು ದೊಡ್ಡ ಸಮಸ್ಯೆಯಾಗಿದೆ. 1918 ರಲ್ಲಿ ಮಹಾತ್ಮ ಗಾಂಧೀಜಿ ಹಿಂದಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದರು. ದಕ್ಷಿಣ ಭಾರತದಲ್ಲೂ ಅವರೇ ಈ ಸಮಿತಿ ಆರಂಭಿಸಿದರು. ಈ ಇತಿಹಾಸ ಗೊತ್ತಿಲ್ಲದ ಕಾಂಗ್ರೆಸ್ ನಾಯಕರು ಏಕಾಏಕಿ ಹಿಂದಿ ರದ್ದು ಮಾಡಿದ್ದಾರೆ. ಮಕ್ಕಳ ವಿಚಾರದಲ್ಲಿ ನಾವು ಸೂಕ್ಷ್ಮವಾಗಿರಬೇಕು ಎಂದು ಹೇಳಿದರು.

ಇಂಗ್ಲಿಷ್ ಸಂವಹನ ಭಾಷೆಯಾಗಿದೆ. ಎಲ್ಲ ದೇಶಗಳಲ್ಲಿ ಬಳಕೆಯಲ್ಲಿದೆ. ಉರ್ದು ಕೂಡ ನಮ್ಮ ದೇಶದ್ದಲ್ಲವಾದರೂ ಅದನ್ನು ನಾವು ಕಲಿಯಬೇಕಿದೆ. ತಮಿಳು, ಮಲಯಾಳಂ, ತೆಲುಗು ಎಲ್ಲವೂ ನಮ್ಮ ದೇಶದ ಭಾಷೆಯಾಗಿದೆ. ಹಿಂದಿ ಓದಿ ಅದರಲ್ಲಿ ಹೆಚ್ಚು ಅಂಕ ಗಳಿಸಬೇಕೆಂಬ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದ ನಿರ್ಧಾರದಿಂದ ನಿರಾಸೆಯಾಗಿದೆ. ಇದು ಸರ್ಕಾರ ತೋರಿದ ಹೇಡಿತನ ಹಾಗೂ ಮಹಾತ್ಮ ಗಾಂಧೀಜಿಗೆ ಮಾಡಿರುವ ಅಪಮಾನ ಎಂದರು.
ನರೇಗಾದಲ್ಲಿ ಮಹಾತ್ಮ ಗಾಂಧೀಜಿ ಹೆಸರು ತೆಗೆದಾಕ್ಷಣ ಏನೋ ಅನಾಹುತವಾಗಿದೆ ಎಂದು ಕಾಂಗ್ರೆಸ್ ನಾಯಕರು ಬಾಯಿ ಬಡಿದುಕೊಂಡರು. ಆದರೆ ಈಗ ಯಾರೂ ಮಾತಾಡುತ್ತಿಲ್ಲ. ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರು ತ್ರಿಭಾಷಾ ಸೂತ್ರ ತಂದಿದ್ದರು. ಮುಂದೆ ಇಂದಿರಾಗಾಂಧಿ ಅದಕ್ಕೆ ಇನ್ನಷ್ಟು ಒತ್ತು ನೀಡಿದ್ದರು. ತಮಿಳುನಾಡಿನಲ್ಲಿ ಹೀಗೆ ಮಾಡಿದ್ದಾರೆ ಎಂದಾಕ್ಷಣ ಇಲ್ಲೂ ಅದನ್ನೇ ಜಾರಿ ಮಾಡುತ್ತೇವೆ ಎಂದಿದ್ದಾರೆ. ತಮಿಳುನಾಡು ಮುಸ್ಲಿಮರು ಶುದ್ಧ ತಮಿಳು ಮಾತಾಡುತ್ತಾರೆ ಹಾಗೂ ಕೇರಳದಲ್ಲಿ ಮುಸ್ಲಿಮರು ಶುದ್ಧ ಮಲಯಾಳಂ ಮಾತಾಡುತ್ತಾರೆ. ಆದರೆ ಕರ್ನಾಟಕದ ಮುಸ್ಲಿಮರು ಸ್ವಚ್ಛವಾಗಿ ಕನ್ನಡ ಮಾತಾಡುವುದಿಲ್ಲ. ಇನ್ನು ನಮ್ದೂಕೆ ನಿಮ್ದೂಕೆ ಎಂದೇ ಅವರು ಹೇಳುತ್ತಾರೆ. ಇಂತಹವರು ಶುದ್ಧ ಕನ್ನಡ ಮಾತಾಡಲಿ ಎಂಬ ಉದ್ದೇಶ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ ಎಂದು ತಿಳಿಸಿದರು.
ಕನ್ನಡದ ಮಕ್ಕಳು ಐಎಎಸ್, ಐಪಿಎಸ್ ಓದಿ ಹಿಂದಿ ರಾಜ್ಯಗಳಿಗೆ ಹೋದರೆ ಅಲ್ಲಿ ಯಾವ ಭಾಷೆ ಮಾತಾಡುತ್ತಾರೆ? ಕೇವಲ ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ಸಿಟ್ಟಿಗೆ ಹೀಗೆ ಮಾಡಿದ್ದಾರೆ. ಇದು ಕೇವಲ ಮತ ರಾಜಕಾರಣ ಹಾಗೂ ಮಕ್ಕಳ ಬದುಕಿಗೆ ಕಲ್ಲು ಹಾಕುವ ಕೆಲಸ. ಮುಂದೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬಿಜೆಪಿ ಜಾರಿ ಮಾಡಲಿದೆ. ಇದರಲ್ಲಿ ಭಾಷೆಯ ಆಯ್ಕೆಗಳಿವೆ ಎಂದರು.
ಉಪ ಚುನಾವಣೆ: ಎರಡು ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು
ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ದಾವಣಗೆರೆಯಲ್ಲಿ ಮುಸ್ಲಿಮರು ಕಾಂಗ್ರೆಸ್ಗೆ ವಿರುದ್ಧವಾಗಿದ್ದಾರೆ. ಬಾಗಲಕೋಟೆಯಲ್ಲೂ ಜನರು ಕಾಂಗ್ರೆಸ್ಗೆ ವಿರುದ್ಧ ಇದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಕುರ್ಚಿ ಭಯ ಇರುವುದರಿಂದ ಪ್ರಚಾರಕ್ಕೆ ಖುದ್ದಾಗಿ ಹೋಗುತ್ತಿದ್ದಾರೆ. ಸಚಿವ ಜಮೀರ್ ಪ್ರಚಾರದಲ್ಲಿ ಭಾಗವಹಿಸುತ್ತಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಭಯದಲ್ಲಿದ್ದಾರೆ ಎಂದು ಕಾಲೆಳೆದರು.
ಕುಕ್ಕರ್ ಬಾಂಬ್ ಬ್ಲಾಸ್ಟ್: ಕಾಂಗ್ರೆಸ್ ಸ್ಪಷ್ಟನೆಗೆ ಆಗ್ರಹ
ಧರ್ಮಸ್ಥಳ ಹಾಗೂ ಕದ್ರಿ ದೇವಸ್ಥಾನದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಮಾಡಲು ಪ್ಲಾನ್ ಮಾಡಿದ್ದ ಭಯೋತ್ಪಾದಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈತನನ್ನು ಹೀ ಈಸ್ ಮೈ ಬ್ರದರ್ ಎಂದಿದ್ದರು. ಮಂಜುನಾಥನನ್ನು ಕಂಡರೆ ಕಾಂಗ್ರೆಸ್ಗೆ ಆಗಲ್ಲ. ಆದ್ದರಿಂದ ಈಗ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕಿದೆ. ಮತಕ್ಕಾಗಿ ದೇಶದ ವಿರುದ್ಧ ಹೋದರೂ ಅವರನ್ನು ಬ್ರದರ್ ಎನ್ನುತ್ತಾರೆ ಎಂದು ಕಿಡಿ ಕಾರಿದರು.
-
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
Kannada Vs Hindi: ಭಾಷಾ ಶಿಕ್ಷಣ–ಸಮಸ್ಯೆ ಇರುವುದು ಫೈನ್ ಟ್ಯೂನಿಂಗ್ನಲ್ಲಿ: ರಾಜಾರಾಂ ತಲ್ಲೂರು ಬರಹ -
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ













Click it and Unblock the Notifications