ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಫೇಲಾದವರಿಗೆ ಮತ್ತೊಂದು ಅವಕಾಶ
ಬೆಂಗಳೂರು , ಜೂನ್ 07: ಎಸ್ಎಸ್ಎಲ್ಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮತ್ತೊಂದು ಅವಕಾಶವನ್ನು ನೀಡಿದೆ. ಜೂನ್ 2022ರ ಪೂರಕ ಪರೀಕ್ಷೆಯನ್ನು ಅಂತಮವಾಗಿ ದಿನಾಂಕವನ್ನು ವಿಸ್ತರಣೆ ಮಾಡಿ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ.
ಕೋವಿಡ್ ನಂತರದಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಅನುತ್ತೀರ್ಣರಾದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ನೊಂದಾಯಿಸಿಕೊಳ್ಳಲು ಮೇ 30 ವರೆಗೂ ಅವಕಾಶವನ್ನು ಕಲ್ಪಿಸಲಾಗಿತ್ತು. ಆದರೂ ಪೋಷಕರು ಮತ್ತು ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಎರಡು ಸಲ ಪರೀಕ್ಷೆಗೆ ನೊಂದಾಯಿಸಿಕೊಳ್ಳಲು ಸಮಯಾವಕಾಶವನ್ನು ನೀಡಿ ದಿನಾಂಕವನ್ನು ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ದಿನಾಂಕವನ್ನು ಮುಂದೂಡಿ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದ್ದು ಇದು ಕೊನೆಯ ಅವಕಾಶ ಎಂದು ತಿಳಿಸಿದೆ.
ವಿದ್ಯಾರ್ಥಿಗಳು ಶಾಲಾ ಲಾಗಿನ್ ಮೂಲಕ ನೊಂದಾಯಿಸಿಕೊಳ್ಳಲು ಜೂನ್ 9, ಭೌತಿಕವಾಗಿ ಮಂಡಳಿಯ ಚಲನ್ ಮೂಲಕ ನೊಂದಾಯಿಸಿಕೊಳ್ಳಲು ಜೂನ್ 10, ಎಂದು ತನ್ನ ಆದೇಶದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ತಿಳಿಸಿದೆ. ಇನ್ನು ಪೂರಕ ಪರೀಕ್ಷೆಯ ವೇಳಾಪಟ್ಟಿಯೂ ಬಿಡುಗಡೆಯಾಗಿದ್ದು. ಜೂನ್ 2022 ಪರೀಕ್ಷೆಗೆ ವಿದ್ಯಾರ್ಥಿಗಳು ತಯಾರಾಗಲು ಅನುಕೂಲವಾಗಲಿದೆ.

ಪೂರಕ ಪರೀಕ್ಷೆಯ ವೇಳಾಪಟ್ಟಿ:
ಜೂನ್ 2022 ಪೂರಕ ಪರೀಕ್ಷೆ ವೇಳಾಪಟ್ಟಿ
ದಿನಾಂಕ 27.06.2022(ಸೋಮವಾರ) - ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ.
ದಿನಾಂಕ 28.06.2022(ಮಂಗಳವಾರ) -ಪ್ರಥಮ ಭಾಷೆ (ಕನ್ನಡ, ತೆಲುಗು,ಹಿಂದಿ,ಮರಾಠಿ,ಉರ್ದು, ಇಂಗ್ಲೀಷ್, ಸಂಸ್ಕೃತ)
ದಿನಾಂಕ 29.06.2022(ಬುಧವಾರ) - ದ್ವಿತೀಯ ಭಾಷೆ(ಇಂಗ್ಲಿಷ್,ಕನ್ನಡ)
ದಿನಾಂಕ 30.06.2022(ಗುರುವಾರ) - ಸಮಾಜ ವಿಜ್ಞಾನ

ದಿನಾಂಕ 01.07.2022(ಶುಕ್ರವಾರ) - ತೃತೀಯ ಭಾಷೆ (ಹಿಂದಿ, ಕನ್ನಡ ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)
ಎನ್.ಎಸ್.ಕ್ಯೂ.ಎಫ್ ಪರೀಕ್ಷಾ ವಿಷಯಗಳು(ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್)
ದಿನಾಂಕ 02.07.2022(ಶನಿವಾರ) ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2,ಇಂಜಿನಿಯರ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ದಿನಾಂಕ 03.07.2022(ಭಾನುವಾರ) ರಜೆ ದಿನ
ದಿನಾಂಕ 04.07.2022(ಸೋಮವಾರ) ಗಣಿತ, ಸಮಾಜ ಶಾಸ್ತ್ರ
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್












Click it and Unblock the Notifications