Hubballi Train: ಹುಬ್ಬಳ್ಳಿಯಿಂದ ಇಲ್ಲಿಗೆ ಸಾಪ್ತಾಹಿಕ ರೈಲು ಸೇವೆ ವಿಸ್ತರಣೆ, ವೇಳಾಪಟ್ಟಿ
ಬೆಂಗಳೂರು, ಜೂನ್ 15: ಕಾರ್ಯಾಚರಣೆ ನಿರ್ಬಂಧ, ರಾಮನಾಥಪುರಂ ಸಂಚಾರ ಗಮನದಲ್ಲಿಟ್ಟುಕೊಂಡು ರೈಲ್ವೆ ಮಂಡಳಿಯು 07355/07356 ಸಂಖ್ಯೆಯ ಹುಬ್ಬಳ್ಳಿ-ರಾಮೇಶ್ವರಂ-ಹುಬ್ಬಳ್ಳಿ ಎಸ್ಎಸ್ಎಸ್ ನಿಲ್ದಾಣ ಮಧ್ಯ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಈ ರೈಲು ಇನ್ನು ಮುಂದೆ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣ ಕೊನೆಗೊಳಿಸುತ್ತದೆ ಎಂದು ನೈಋತ್ಯ ರೈಲ್ವೆ ವಲಯ ತಿಳಿಸಿದೆ.
ಈ ಹಿಂದೆ ರಾಮೇಶ್ವರಂನಲ್ಲಿ ಕೊನೆಗೊಳ್ಳುತ್ತಿದ್ದ ರೈಲು (07355) ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಈಗ ರಾಮನಾಥಪುರಂನಲ್ಲಿ ಕೊನೆಗೊಳ್ಳಲಿದೆ, ಈ ಪರಿಷ್ಕೃತ ಸೇವೆ ಜುಲೈ 5 ರಿಂದ 26, 2025 ರವರೆಗೆ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ. ಇದರೊಂದಿಗೆ ರೈಲು (07356) ರಾಮೇಶ್ವರಂ-ಹುಬ್ಬಳ್ಳಿ ಎಸ್ಎಸ್ಎಸ್ ನಿಲ್ದಾಣ ಸಾಪ್ತಾಹಿಕ ರೈಲು ಎಕ್ಸ್ಪ್ರೆಸ್ ರೈಲು ರಾಮೇಶ್ವರಂ ಬದಲಿಗೆ ರಾಮನಾಥಪುರದಿಂದ ಜುಲೈ 6 ರಿಂದ 27, 2025 ರವರೆಗೆ ತನ್ನ ಪ್ರಯಾಣ ಪ್ರಾರಂಭಿಸುತ್ತದೆ.

ರೈಲು ಸಂಚಾರ ಸಮಯ
ಈ ಹುಬ್ಬಳಿ ಎಸ್ಎಸ್ಎಸ್ ನಿಲ್ದಾಣದಿಂದ ರೈಲು (07355) ಬೆಳಗ್ಗೆ 06:50 ಸಂಚಾರ ಆರಂಭಿಸುತ್ತದೆ. ಮರುದಿನ ಬೆಳಗ್ಗೆ 05:00 ಗಂಟೆಗೆ ರಾಮನಾಥವುರಂ ತಲುಪುತ್ತದೆ. ಅಲ್ಲಿ ಮರಳಿ ಪ್ರಯಾಣವನ್ನು ರೈಲು (07356) ರಾತ್ರಿ 22: ಗಂಟೆಗೆ ಆರಂಬಿಸಿ, ಮರುದಿನ ಸಂಜೆ 19:40 ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣ ಬಂದು ತಲುಪಲಿದೆ. ಈ ರೈಲುಗಳು ತಮ್ಮ ಹಿಂದಿನ ಎಲ್ಲಾ ನಿಗದಿತ ನಿಲುಗಡೆ ನಿಲ್ದಾಣಗಳಲ್ಲಿ ನಿಲ್ಲಲಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರೈಲಿನ ಪರಿಷ್ಕೃತ ಮಾಹಿತಿ
ಈ ಹಿಂದಿನ ಸೂಚನೆ ಪ್ರಕಾರ ನೋಡುವುದಾದರೆ, ಎಸ್ಎಸ್ಎಸ್ ಹುಬ್ಬಳ್ಳಿ-ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು (07355) ಜೂನ್ 28ರವರೆಗೆ ಹಾಗೂ ರಾಮೇಶ್ವರಂ -ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ರೈಲು (07356) ಜೂನ್ 29ರವರೆಗೆ ಸಂಚರಿಸಲು ಸೂಚನೆ ನೀಡಲಾಗಿತ್ತು. ಅದರಂತೆ ಈ ರೈಲು ನಿಗದಿತ ಸೂಚನೆಯಂತೆ ಕಾರ್ಯ ನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ನೈಋತ್ಯ ರೈಲ್ವೆ ವಲಯ ತಿಳಿಸಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications