ವಿಶ್ವವಿದ್ಯಾಲಯಗಳಲ್ಲೂ ನಾಡಗೀತೆ ಹಾಡುವುದು ಕಡ್ಡಾಯ
ಬೆಂಗಳೂರು. ಡಿ. 3 : ಇನ್ನು ಮುಂದೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ. ನಾಡಗೀತೆಯನ್ನು ವಿವಿಗಳಲ್ಲೂ ಕಡ್ಡಾಯ ಮಾಡಬೇಕು ಎಂದು ಉನ್ನತ ಶಿಕ್ಷಣ ಪರಿಷತ್ ನಿರ್ಣಯ ಕೈಗೊಂಡಿದೆ.
ಪ್ರತಿ ದಿನ ತರಗತಿಗಳನ್ನು ನಾಡಗೀತೆ ಮೂಲಕ ಆರಂಭಿಸಬೇಕು ಎಂದು ಪರಿಷತ್ ತಿಳಿಸಿದೆ. ಸೋಮವಾರ ನಡೆದ ಪರಿಷತ್ ಸಭೆಯಲ್ಲಿ ವಿವಿಧ ವಿವಿಗಳ ಕುಲಪತಿಗಳು ಭಾಗವಹಿಸಿದ್ದರು. ಇಲ್ಲಿಯವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಾತ್ರ ನಾಡಗೀತೆ ಕಡ್ಡಾಯವಾಗಿತ್ತು.[ನಾಡಗೀತೆ ಕತ್ತರಿ ಪ್ರಯೋಗಕ್ಕೆ ಭುಗಿಲೆದ್ದ ಆಕ್ರೋಶ]

ನಾಡಗೀತೆ ಕತ್ತರಿ ವಿವಾದ ಏನಾಯ್ತು?
ರಾಜ್ಯ ಸರ್ಕಾರದ ನಾಡಗೀತೆ ಕತ್ತರಿ ಪ್ರಯೋಗಕ್ಕೆ ಮುಂದಾಗಿದ್ದಾಗ ಸಾಹಿತಿಗಳು, ಚಿಂತಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಇನ್ನು ಅಂತಿಮ ನಿರ್ಧಾರಕ್ಕೆ ಬರಲಾಗಿಲ್ಲ. ರಾಜ್ಯದ ಹಿರಿಯ ಸಾಹಿತಿಗಳು, ಕವಿಗಳ ಅಭಿಪ್ರಾಯ ಪಡೆದು, ಎಲ್ಲರ ಹಿತಾಸಕ್ತಿ ಗಮನದಲ್ಲಿರಿಸಿಕೊಂಡು ಮುಂದಿನ ಹೆಜ್ಜೆ ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.[ನಾಡಗೀತೆಗೆ ಕತ್ತರಿ ಪ್ರಯೋಗ ವಾಗಲಿದೆಯೇ?]
ಏಕರೂಪದ ಆಂತರಿಕ ಮೌಲ್ಯಮಾಪನ
ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ಏಕರೂಪದ ಆಂತರಿಕ ಮೌಲ್ಯಮಾಪನ ಪದ್ಧತಿ ಜಾರಿಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಎಲ್ಲ ಕಾಲೇಜುಗಳು 30 ಅಂಕಗಳನ್ನು ಆಂತರಿಕ ಮೌಲ್ಯಮಾಪನಕ್ಕೆ ಮೀಸಲಿಡಲಿವೆ. ಉಳಿದ 70 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಈ ಪದ್ಧತಿ ಜಾರಿ ತರುವಂತೆ ಬೆಂಗಳೂರು ವಿವಿ ಕುಲಪತಿ ಪ್ರೊ. ತಿಮ್ಮೇಗೌಡ ನೇತೃತ್ವದ ಸಮಿತಿ ಶಿಫಾರಸು ಮಾಡಿತ್ತು.
ಪ್ರತಿ ಸೆಮಿಸ್ಟರ್ನಲ್ಲಿ ಎರಡು ಪರೀಕ್ಷೆ
ಪ್ರತಿ ಸೆಮಿಸ್ಟರ್ನಲ್ಲಿ ಎರಡು ಕಿರು ಪರೀಕ್ಷೆಗಳನ್ನು ನಡೆಸಲು ಸಮಿತಿ ಶಿಫಾರಸು ಮಾಡಿತ್ತು. ಇದಕ್ಕೆ 20 ಅಂಕಗಳು ಮೀಸಲಿಡಲಾಗಿದ್ದರೆ, ಉಳಿದ 10 ಅಂಕಗಳು ಉಪನ್ಯಾಸ ಅಥವಾ ಪ್ರಬಂಧ ಮಂಡನೆಯಿಂದ ಸಿಗಲಿವೆ. ನಿರ್ದಿಷ್ಟ ವಿಷಯದ ಅಡಿಯಲ್ಲಿ ಉಪ ವಿಷಯಗಳನ್ನು ಪ್ರಮುಖ ವಿಷಯಕ್ಕೆ ಸರಿ ಸಮನಾಗಿ ಪರಿಗಣಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ. (ಉದಾಹರಣೆಗೆ, ಎಂಎಸ್ಸಿ ಕೆಮಿಸ್ಟ್ರಿ (ಇನ್ ಆರ್ಗಾನಿಕ್) ವಿಷಯವನ್ನು 'ಎಂಎಸ್ಸಿ ಕೆಮಿಸ್ಟ್ರಿ' ಎಂದೇ ಪರಿಗಣಿಸುವುದು).
ಇತರ ಪ್ರಮುಖ ನಿರ್ಣಯಗಳು
- ಪದವಿ ಕಾಲೇಜುಗಳಲ್ಲಿ ಐಚ್ಛಿಕ ವಿಷಯವಾಗಿ ದೈಹಿಕ ಶಿಕ್ಷಣ
- ಎಂಬಿಎ ಕೋರ್ಸ್ಗಳ ಗುಣಮಟ್ಟ ತಪಾಸಣೆಗೆ ಸಮಿತಿ
- ಕೃತಿಚೌರ್ಯದ ಪತ್ತೆಗೆ ಸಮಿತಿ
- ಉತ್ತರಪತ್ರಿಕೆ ಮೌಲ್ಯಮಾಪಕರ ಸಂಭಾವನೆಗೆ ಏಕರೂಪದ ಮಾರ್ಗದರ್ಶಿ ಸೂತ್ರ
- ವಿದೇಶಿ ವಿದ್ಯಾರ್ಥಿಗಳಿಗೆ ಏಕರೂಪದ ಶುಲ್ಕ
- ವಿವಿಗಳಲ್ಲಿ ವೃತ್ತಿಪರ ಕೋರ್ಸ್, ಬ್ರೈಲ್ ಲಿಪಿ ಕೇಂದ್ರ ಆರಂಭ
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications