ವಿಶ್ವವಿದ್ಯಾಲಯಗಳಲ್ಲೂ ನಾಡಗೀತೆ ಹಾಡುವುದು ಕಡ್ಡಾಯ
ಬೆಂಗಳೂರು. ಡಿ. 3 : ಇನ್ನು ಮುಂದೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ. ನಾಡಗೀತೆಯನ್ನು ವಿವಿಗಳಲ್ಲೂ ಕಡ್ಡಾಯ ಮಾಡಬೇಕು ಎಂದು ಉನ್ನತ ಶಿಕ್ಷಣ ಪರಿಷತ್ ನಿರ್ಣಯ ಕೈಗೊಂಡಿದೆ.
ಪ್ರತಿ ದಿನ ತರಗತಿಗಳನ್ನು ನಾಡಗೀತೆ ಮೂಲಕ ಆರಂಭಿಸಬೇಕು ಎಂದು ಪರಿಷತ್ ತಿಳಿಸಿದೆ. ಸೋಮವಾರ ನಡೆದ ಪರಿಷತ್ ಸಭೆಯಲ್ಲಿ ವಿವಿಧ ವಿವಿಗಳ ಕುಲಪತಿಗಳು ಭಾಗವಹಿಸಿದ್ದರು. ಇಲ್ಲಿಯವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಾತ್ರ ನಾಡಗೀತೆ ಕಡ್ಡಾಯವಾಗಿತ್ತು.[ನಾಡಗೀತೆ ಕತ್ತರಿ ಪ್ರಯೋಗಕ್ಕೆ ಭುಗಿಲೆದ್ದ ಆಕ್ರೋಶ]

ನಾಡಗೀತೆ ಕತ್ತರಿ ವಿವಾದ ಏನಾಯ್ತು?
ರಾಜ್ಯ ಸರ್ಕಾರದ ನಾಡಗೀತೆ ಕತ್ತರಿ ಪ್ರಯೋಗಕ್ಕೆ ಮುಂದಾಗಿದ್ದಾಗ ಸಾಹಿತಿಗಳು, ಚಿಂತಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಇನ್ನು ಅಂತಿಮ ನಿರ್ಧಾರಕ್ಕೆ ಬರಲಾಗಿಲ್ಲ. ರಾಜ್ಯದ ಹಿರಿಯ ಸಾಹಿತಿಗಳು, ಕವಿಗಳ ಅಭಿಪ್ರಾಯ ಪಡೆದು, ಎಲ್ಲರ ಹಿತಾಸಕ್ತಿ ಗಮನದಲ್ಲಿರಿಸಿಕೊಂಡು ಮುಂದಿನ ಹೆಜ್ಜೆ ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.[ನಾಡಗೀತೆಗೆ ಕತ್ತರಿ ಪ್ರಯೋಗ ವಾಗಲಿದೆಯೇ?]
ಏಕರೂಪದ ಆಂತರಿಕ ಮೌಲ್ಯಮಾಪನ
ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ಏಕರೂಪದ ಆಂತರಿಕ ಮೌಲ್ಯಮಾಪನ ಪದ್ಧತಿ ಜಾರಿಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಎಲ್ಲ ಕಾಲೇಜುಗಳು 30 ಅಂಕಗಳನ್ನು ಆಂತರಿಕ ಮೌಲ್ಯಮಾಪನಕ್ಕೆ ಮೀಸಲಿಡಲಿವೆ. ಉಳಿದ 70 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಈ ಪದ್ಧತಿ ಜಾರಿ ತರುವಂತೆ ಬೆಂಗಳೂರು ವಿವಿ ಕುಲಪತಿ ಪ್ರೊ. ತಿಮ್ಮೇಗೌಡ ನೇತೃತ್ವದ ಸಮಿತಿ ಶಿಫಾರಸು ಮಾಡಿತ್ತು.
ಪ್ರತಿ ಸೆಮಿಸ್ಟರ್ನಲ್ಲಿ ಎರಡು ಪರೀಕ್ಷೆ
ಪ್ರತಿ ಸೆಮಿಸ್ಟರ್ನಲ್ಲಿ ಎರಡು ಕಿರು ಪರೀಕ್ಷೆಗಳನ್ನು ನಡೆಸಲು ಸಮಿತಿ ಶಿಫಾರಸು ಮಾಡಿತ್ತು. ಇದಕ್ಕೆ 20 ಅಂಕಗಳು ಮೀಸಲಿಡಲಾಗಿದ್ದರೆ, ಉಳಿದ 10 ಅಂಕಗಳು ಉಪನ್ಯಾಸ ಅಥವಾ ಪ್ರಬಂಧ ಮಂಡನೆಯಿಂದ ಸಿಗಲಿವೆ. ನಿರ್ದಿಷ್ಟ ವಿಷಯದ ಅಡಿಯಲ್ಲಿ ಉಪ ವಿಷಯಗಳನ್ನು ಪ್ರಮುಖ ವಿಷಯಕ್ಕೆ ಸರಿ ಸಮನಾಗಿ ಪರಿಗಣಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ. (ಉದಾಹರಣೆಗೆ, ಎಂಎಸ್ಸಿ ಕೆಮಿಸ್ಟ್ರಿ (ಇನ್ ಆರ್ಗಾನಿಕ್) ವಿಷಯವನ್ನು 'ಎಂಎಸ್ಸಿ ಕೆಮಿಸ್ಟ್ರಿ' ಎಂದೇ ಪರಿಗಣಿಸುವುದು).
ಇತರ ಪ್ರಮುಖ ನಿರ್ಣಯಗಳು
- ಪದವಿ ಕಾಲೇಜುಗಳಲ್ಲಿ ಐಚ್ಛಿಕ ವಿಷಯವಾಗಿ ದೈಹಿಕ ಶಿಕ್ಷಣ
- ಎಂಬಿಎ ಕೋರ್ಸ್ಗಳ ಗುಣಮಟ್ಟ ತಪಾಸಣೆಗೆ ಸಮಿತಿ
- ಕೃತಿಚೌರ್ಯದ ಪತ್ತೆಗೆ ಸಮಿತಿ
- ಉತ್ತರಪತ್ರಿಕೆ ಮೌಲ್ಯಮಾಪಕರ ಸಂಭಾವನೆಗೆ ಏಕರೂಪದ ಮಾರ್ಗದರ್ಶಿ ಸೂತ್ರ
- ವಿದೇಶಿ ವಿದ್ಯಾರ್ಥಿಗಳಿಗೆ ಏಕರೂಪದ ಶುಲ್ಕ
- ವಿವಿಗಳಲ್ಲಿ ವೃತ್ತಿಪರ ಕೋರ್ಸ್, ಬ್ರೈಲ್ ಲಿಪಿ ಕೇಂದ್ರ ಆರಂಭ
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications