ವಿಧಾನಮಂಡಲದ ಜಂಟಿ ಅಧಿವೇಶನ ಫೆಬ್ರವರಿ 2 ರಿಂದ
ಬೆಂಗಳೂರು, ಜ.15: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಫೆ. 2ರಿಂದ ಆರಂಭವಾಗಲಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು ವಿವಿಧ ವಿಷಯಗಳು ಚರ್ಚೆಗೆ ಬರಲಿವೆ.
ರಾಜ್ಯ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡು ಪ್ರಸ್ತಾವನೆಯನ್ನು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗುತ್ತದೆ. ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ವಜುಭಾಯಿ ರೂಡಾಭಾಯಿ ವಾಲಾ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರಾಗಿ ವಾಲಾ ಆಗಮಿಸಿದ ನಂತರ ಇದೇ ಮೊದಲ ಬಾರಿಗೆ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.[ಕಡತಯಜ್ಞ, ಭಾನುವಾರವೂ ನೌಕರರ ಕೆಲಸ]

ವಿಧಾನಸೌಧದಲ್ಲಿ ನವೀಕರಣ ಕಾರ್ಯ ನಡೆಯುತ್ತಿದ್ದು ಜನವರಿ 25ರೊಳಗೆ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಜನವರಿಯಲ್ಲೇ ನಡೆಸಬೇಕಾಗಿದ್ದ ಜಂಟಿ ಅಧಿವೇಶನವನ್ನು ಫೆಬ್ರವರಿಗೆ ಮುಂದೂಡಲಾಗಿತ್ತು. ಫೆ. 2 ರಂದು ವಿಧಾನಸಭೆ ಸಭಾಂಗಣದಲ್ಲಿ ಉಭಯ ಸದನಗಳನ್ನುದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.
ಸರ್ಕಾರದ ನಿಲುವು ಹಾಗೂ ಮುಂದಿನ ಒಂದು ವರ್ಷದ ಅವಧಿಯಲ್ಲಿ ಕೈಗೊಳ್ಳಲಿರುವ ಯೋಜನೆ ಹಾಗೂ ಕಾರ್ಯಕ್ರಮಗಳ ರೂಪುರೇಷೆ ಕುರಿತು ರಾಜ್ಯಪಾಲರು ಭಾಷಣ ಮಾಡುವರು.[ಇನ್ಮುಂದೆ 'ಘನವೆತ್ತ' ರಾಜ್ಯಪಾಲರು ಅನ್ನೋ ಹಾಗಿಲ್ಲ]
ಜಂಟಿ ಅಧಿವೇಶನದ ವೇಳೆ ಕಬ್ಬು ಬೆಳೆಗಾರರ ಬಾಕಿ ಹಣ, ಸಿಇಟಿ ಕಾಯ್ದೆ ಗೊಂದಲ, ಕೇಂದ್ರ ಸರ್ಕಾರದ ಭೂ ಸ್ವಾಧೀನ ಕಾಯ್ದೆ, ವಿದ್ಯುತ್ ಅಭಾವ ಮತ್ತಿತರ ಸಮಸ್ಯೆಗಳ ಬಗ್ಗೆ ಬಗ್ಗೆ ಚರ್ಚೆ ನಡೆಯಲಿದೆ. ಫೆ. 2ರಂದು ಆರಂಭವಾಗುವ ಅಧಿವೇಶನ ರಜಾ ದಿನಗಳನ್ನು ಹೊರತುಪಡಿಸಿ 10 ದಿನಗಳ ಕಾಲ ನಡೆಯಲಿದ್ದು ಫೆ. 13ರಂದು ಮುಕ್ತಾಯವಾಗಲಿದೆ.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications