ಕಾಡಾನೆ ಹಾವಳಿ ತಪ್ಪಿಸಲು ಆನೆಗಳಿಗೆ ರೆಡಿಯೋ ಕಾಲರ್ ಅಳವಡಿಕೆ
ಬೆಂಗಳೂರು, ಆಗಸ್ಟ್ 22: ಕರ್ನಾಟಕದಲ್ಲಿ ಕಳೆದ ಹತ್ತು ದಿನಗಳಲ್ಲಿ ಆನೆ ದಾಳಿಯಿಂದಾಗಿ ಒಟ್ಟು ಐದು 5 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಮಾನವ ಮತ್ತು ಕಾಡುಪ್ರಾಣಿಗಳ ಸಂಘರ್ಷ ತಡೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸಚಿವರು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಮಾನವ ಮತ್ತು ಕಾಡು ವನ್ಯಜೀವಿಗಳ ಸಂಘರ್ಷ ಕುರಿತು ಜಾಗೃತಿ ಮೂಡಿಸಬೇಕು. ಪ್ರಾಣಿಗಳ ದಾಳಿಯಿಂದ ಮನುಷ್ಯರ ಜೀವನ ಹಾನಿಯಾದರೆ, ಮಾನವ ಹಾಕುವ ವಿದ್ಯುತ್ ಬೇಲಿ ಸ್ಪರ್ಶದಿಂದ ಮತ್ತಿತರರ ಕಾರಣದಿಂದ ಪ್ರಾಣಿಗಳು ಸಾವಿಗೀಡಾಗುತ್ತವೆ. ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಆನೇಗಳಗೆ ರೇಡಿಯೋ ಕಾಲರ್ ಅಳವಡಿಕೆ
ಸಭೆಯಲ್ಲಿ ಸಚಿವರಿಗೆ ಮಾಹಿತಿ ನೀಡಿರುವ ಅರಣ್ಯ ಅಧಿಕಾರಿಗಳು ಕಾಡಿನಲ್ಲಿರುವ ಎಲ್ಲ ಆನೆಗಳೂ ನಾಡಿಗೆ ಬರುವುದಿಲ್ಲ. ಕೆಲವು ಆನೆಗಳು ಪದೇ ಪದೆ ಜನರ ವಾಸಸ್ಥಾನಕ್ಕೆ ಬಂದು ದಾಂಗುಡಿ ಇಡುತ್ತಿವೆ. ಹಾನಿ ಮಾಡಿ, ಕೆಲವೊಮ್ಮೆ ಜೀವ ಹಾನಿ ಸಹ ಮಾಡುತ್ತವೆ. ಇಂತಹ ಆನೆಗಳನ್ನು ಗುರುತಿಸಿ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಕರ್ನಾಟಕದಲ್ಲಿ ಇದುವರೆಗೆ ದಾಂಗುಡಿ ಇಡುವ 14 ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗಿದೆ. ಇದರಿಂದ ಆನೆಗಳ ಚಲನವಲನದ ಬಗ್ಗೆ ಸಂಪೂರ್ಣ ನಿಗಾ ಇಡಲಿ, ಮಾಹಿತಿ ಪಡೆಯಲ ಅನುಕೂಲವಾಗಲಿದೆ. ಇಲಾಖೆಯಲ್ಲಿ ಪ್ರಸ್ತುತ 30 ರೇಡಿಯೋ ಕಾಲರ್ ಲಭ್ಯವಿದೆ.
ಪುಂಡಾನೆಗಳನ್ನು ಸೆರೆ ಹಿಡಿದು ಕಾಡಿಗೆ ಬಿಡುವ ಮೊದಲು ಅವುಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ. ಹಿಂದೆ ವಿಶ್ವ ವನ್ಯಜೀವಿ ನಿಧಿಗಾಗಿ ಕಾಯಿದೆ, ಇಲಾಖೆ ಈಗ ರೇಡಿಯೋ ಕಾಲರ್ ಖರೀದಿ ಮಾಡಲಾಗುತ್ತಿದೆ. ಪ್ರತಿ ರೇಡಿಯೋ ಕಾಲರ್ ಗೆ ಸುಮಾರು 7 ಲಕ್ಷ ವೆಚ್ಚವಾಗುತ್ತದೆ ಎಂಬುದನ್ನು ಸಭೆಯ ಗಮನಕ್ಕೆ ತಂದರು.

ಜನವಸತಿಗಳ ಸಮೀಪ, ರೈತರ ಜಮೀನು-ತೋಟಗಳಿಗೆ, ಹೊಲ ಗದ್ದೆಗಳಿಗೆ ಆನೆಗಳು ಕಾಣಿಸಿಕೊಂಡ ಸಂದರ್ಭದಲ್ಲಿ ಜನರು ತ್ವರತವಾಗಿ ಆಕಾಡಿಗೆ ಮರಳಿಸಲು ಅರಣ್ಯ ಇಲಾಖೆಗೆ ಸಹಕರಿಸಬೇಕು. ವಾಟ್ಸ್ ಅಪ್, ಸಂದೇಶಗಳ ಮೂಲಕ ಮಾಹಿತಿ ನೀಡಬೇಕು. ಇದರಿಂದ ಸಂಭವನೀಯ ಜೀವ ಹಾನಿ ತಪ್ಪಲಿದೆ ಎಂದು ಅವರು ಮನವರಿಕೆ ಮಾಡಿಕೊಟ್ಟರು.
ಕರ್ನಾಟಕದಲ್ಲಿ ಆನೆಗಳ ಹಾವಳಿ ಹೆಚ್ಚಾಗಿರುವ ಚಾಮರಾಜನಗರ ಜಿಲ್ಲೆ ಹಾಗೂ ಕೊಡಗು ಭಾಗದಲ್ಲಿ ಹಾವಳಿ ತಪ್ಪಿಸಲು ಸದ್ಯ ಕಾರ್ಯ ನಿರ್ವಹಿಸುತ್ತಿರುವ ಆನೆ ಕ್ಷಿಪ್ರ ಕಾರ್ಯಪಡೆಯ ಗುಂಪುಗಳನ್ನು ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications