ಸಂಧಾನ ಸಭೆ ಯಶಸ್ವಿː ವೈದ್ಯರ ಮುಷ್ಕರ ಅಂತ್ಯ
ಬೆಂಗಳೂರು, ಅ.29: ಮೂರು ದಿನಗಳ ಕಾಲ ಜಗ್ಗಾಡಿದ ವೈದ್ಯರ ರಾಜೀನಾಮೆ ಪ್ರಹಸನಕ್ಕೆ ಅಂತೂ ಇಂತೂ ತೆರೆಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ವೈದ್ಯರ 14 ಬೇಡಿಕೆಗಳ ಪೈಕಿ 10ನ್ನು ನೆರವೇರಿಸಲು ಸರ್ಕಾರ ಒಪ್ಪಿಕೊಂಡಿದೆ.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಆರೋಗ್ಯ ಸಚಿವ ಯು.ಟಿ.ಖಾದರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್, ಸರ್ಕಾರಿ ವೈದ್ಯರ ಸಂಘದ ಗೌರವಾಧ್ಯಕ್ಷ ರವೀಂದ್ರ, ಅಧ್ಯಕ್ಷ ವೀರಭದ್ರಯ್ಯ ಪಾಲ್ಗೊಂಡಿದ್ದರು.[ರಾಜೀನಾಮೆ ನೀಡಿದ ಸರಕಾರಿ ವೈದ್ಯರ ಅಳಲುಗಳು]

ಸಭೆ ಬಳಿಕ ಮಾತನಾಡಿದ ಸಿಎಂ, ಜನರಿಗೆ ಸಮಸ್ಯೆಯಾಗಬಾರದು ಎಂಬ ಹಿನ್ನೆಲೆಯಲ್ಲಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲಾಗಿದೆ. ವೈದ್ಯರು ಇಂಥ ಕಠಿಣ ಕ್ರಮ ಯಾಕೆ ತೆಗೆದುಕೊಂಡರೋ ತಿಳಿಯದು. ಆದರೆ ಮುಂದೆ ಮತ್ತೆ ಇಂಥ ಕ್ರಮ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಸರ್ಕಾರಿ ವೈದ್ಯರ ಸಂಘದ ಅಧ್ಯಕ್ಷ ವೀರಭದ್ರಯ್ಯ ಮಾತನಾಡಿ, ನಾವು ರಾಜೀನಾಮೆ ನೀಡಿ ತಪ್ಪು ಮಾಡಿಬಿಟ್ಟೆವು. ಯಾವುದೇ ಸಮಸ್ಯೆಯಿದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದೇ ಉತ್ತಮವಾಗಿತ್ತು ಎಂದು ಹೇಳಿದರು.[ವೈದ್ಯರ ರಾಜೀನಾಮೆː ಸರ್ಕಾರಕ್ಕೆ ಹೈಕೋರ್ಟ್ ಚಾಟಿ]
ಸಿಬ್ಬಂದಿ ನೇಮಕ, ಔಷಧ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸಭೆಯಲ್ಲಿ ವಿಸ್ತ್ರತ ಚರ್ಚೆ ನಡೆಯಿತು. ಒಟ್ಟಿನಲ್ಲಿ ವೈದ್ಯರ ಮುಷ್ಕರ ಕೊನೆಗೊಂಡಿರುವುದರಿಂದ ಗ್ರಾಮೀಣ ಭಾಗದ ಬಡವರು ಮತ್ತು ಮಧ್ಯಮ ವರ್ಗದ ಜನ ನಿಟ್ಟುಸಿರು ಬಿಡುವಂತಾಗಿದೆ.
-
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications