CP Yogeshwar: ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ ಗ್ಯಾರಂಟಿ: ಸಿಪಿ ಯೋಗೇಶ್ವರ್ ಭವಿಷ್ಯ
ಆನೇಕಲ್ ಮಾರ್ಚ್ 18: ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮೇಲ್ಮನೆ ಸದಸ್ಯ ಸಿಪಿ ಯೋಗೇಶ್ವರ್ ಭವಿಷ್ಯ ನುಡಿದಿದ್ದು, ಆಡಳಿತಾರೂಢ ಕಾಂಗ್ರೆಸ್ ವಿರುದ್ಧವೇ ಪಕ್ಷದ ಶಾಸಕರಿದ್ದು ಅದು ಬೂದಿ ಮುಚ್ಚಿದ ಕೆಂಡದಂತಿದೆ ಎಂದು ಹೇಳಿದರು.
ಅವರು ಅನೇಕಲ್ ತಾಲೂಕಿನ ಚಂದಾಪುರದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಬಿಜೆಪಿ ಮತ್ತು ಜೆಡಿಎಸ್ ಜಂಟಿ ಸಮಾವೇಶ ಹಾಗೂ ಪ್ರಚಾರ ಸಭೆಯಲ್ಲಿ ಸಹಸ್ರಾರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಈ ಬಾರಿ 400+ ಎಂಬ ಧ್ಯೆಯದೊಂದಿಗೆ ದೇಶಾದ್ಯಂತ ಬಿಜೆಪಿ ಹಾಗೂ ಎನ್ಡಿಎ ಕಾರ್ಯ ಕರ್ತರು ಟೊಂಕ ಕಟ್ಟಿ ಓಡಾಡುತ್ತಿದ್ದಾರೆ.

ನಮ್ಮ ರಾಜ್ಯದಿಂದ 28 ಕ್ಷೇತ್ರಗಳನ್ನೂ ಬಿಜೆಪಿ ಮಡಿಲಿಗೆ ತುಂಬಬೇಕೆಂದು ಕಾರ್ಯಕರ್ತರನ್ನು ಹುರಿದುಂಬಿಸಿದರು. ಬಿಜೆಪಿ ಶಾಸಕ ಮುನಿರತ್ನ ಮಾತನಾಡಿ, ಡಾ.ಮಂಜುನಾಥ್ರವರು ಯಶಸ್ವಿ ವೈದ್ಯರಾಗಿದ್ದು, ತಮ್ಮ ಪಾಲಿನ ಕರ್ತವ್ಯವನ್ನು ಚೆನ್ನಾಗಿ ನಿರ್ವಹಿಸಿ ರಾಜ್ಯದ ಜನ ಮಾನಸದಲ್ಲಿ ನೆಲೆಸಿದ್ದಾರೆ.
ಕರ್ತವ್ಯ ನಿಷ್ಠೆಗೆ ಹೆಸರಾಗಿರುವ ಅವರು ಸಿದ್ದರಾಮಯ್ಯನವರ ಆದಿಯಾಗಿ ಎಲ್ಲಾ ಮುಖಂಡರರಿಂದ ಪ್ರಶಂಸೆಗೆ ಒಳಗಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ರವರ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಿ ಅತಿ ಹೆಚ್ಚು ಮತಗಳಿಂದ ಗೆಲ್ಲಿಸಬೇಕು. ಅವರು ಇನ್ನೂ ಹೆಚ್ಚಿನ ಸ್ಥಾನ ಪಡೆದು ದೇಶಾಸ್ಯಂತ ಬಡ ಜನಗಳ ಸೇವೆ ಸಲ್ಲಿಸಲೂ ಅವಕಾಶ ಒದಗಿಬರಬಹದೆಂದು ಹೇಳಿದರು.
ಇನ್ನೂ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರ ಸವಾವಲೇನಿದ್ದರೂ ಸ್ವೀಕರಿಸಿ ನಾನೇ ರಾಮನಗರಕ್ಕೂ, ಕನಕಪುರಕ್ಕೋ ಬರುವೆ ಎಂದವರು ಸವಾಲೆಸೆದರು. ಇನ್ನು, ಮಾಗಡಿ ಬಾಲಕೃಷ್ಣರವರ ಬಗ್ಗೆ ಮಾತನಾಡಿ ರಾಜಕಾರಣ ಒಬ್ಬರ ಸ್ವತ್ತಲ್ಲ. ಕ್ಷೇತ್ರ ಪರಿಚಯ, ಸೇವೆ ಮಾಡುವುದು ಅವರ ಇಚ್ಚಾಶಕ್ತಿಯನ್ನು ಅಲವಂಬಿಸುತ್ತದೆ. ತೆಗಳಿಕೆ ಹೊಗಳಿಕೆ ಮಾನದಂಡವಲ್ಲ ಎಂದು ಹೇಳಿದರು.
ವೇದಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಇದೇ ವೇಳೆ ಕೆಪಿ ರಾಜು ಬಿಜೆಪಿ ಸೇರ್ಪಡೆಯಾದರು.
ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಸ್ಪರ್ಧೆ ಮಾಡದೇ ಈಗಲೂ ನನಗೆ ಬೆಂಬಲ ನೀಡಿದ್ದಾರೆಂಬ ಡಿಕೆ.ಸುರೇಶ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ತಿರುಗೇಟು ನೀಡಿದ್ದಾರೆ. 5 ವರ್ಷದ ಹಿಂದೆ ನಾನು ಸ್ಪರ್ಧೆ ಮಾಡಿದ್ದರೆ ಡಿ.ಕೆ.ಸುರೇಶ್ ಗೆಲ್ತಿರಲಿಲ್ಲ. ಹಾಗಾಗಿ ಈ ಬಾರಿ ಬುಡಸಮೇತ ತೆಗೆಯಬೇಕು ಅಂತ ಮಂಜುನಾಥ್ ರನ್ನ ತಂದಿದ್ದೇವೆ ಎಂದು ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾಜಿ ಸಚಿವ ಯೋಗೇಶ್ವರ್ ಹೇಳಿದರು.
ನಾನು ಪಾರ್ಲಿಮೆಂಟ್ಗೆ ಹೋಗಬಾರದೆಂದು ನಿರ್ಧಾರ ಮಾಡಿದ್ದೇನೆ. ರಾಜ್ಯ ರಾಜಕೀಯದಲ್ಲಿ ಇರಬೇಕೆಂದು ನನ್ನ ನಿಲುವು. ಡಿ.ಕೆ.ಸುರೇಶ್ ಹತಾಶೆಯಿಂದ ಮಾತನಾಡ್ತಿದ್ದಾರೆ. ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ ಎಂದು ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications