ಲೇಖಕರ ಒಂದೂವರೆ ದಶಕಗಳ ಬೇಡಿಕೆ ಈಡೇರಿಸಿದ ರಾಜ್ಯ ಬಿಜೆಪಿ ಸರ್ಕಾರ!
ಬೆಂಗಳೂರು, ಫೆ. 22: ಲೇಖಕರು ಹಾಗೂ ಬರಹಗಾರರ ಒಂದೂವರೆ ದಶಕಗಳ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಈಡೇರಿಸಿದೆ. ಹೌದು ಸುಮಾರು 15 ವರ್ಷಗಳ ಬೇಡಿಕೆಯಾಗಿದ್ದ ಗ್ರಂಥಾಲಯ ಪುಸ್ತಕ ಖರೀದಿ ಮಿತಿಯನ್ನು ಹೆಚ್ಚಿಸಿ ಪ್ರಕಾಶಕರು ಮತ್ತು ಲೇಖಕರಿಗೆ ಪ್ರೋತ್ಸಾಹ ನೀಡುವ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ನಿರ್ಧಾರಕ್ಕೆ ಕಾರಣರಾದ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ಅವರನ್ನು ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಟನೆ ಅಭಿನಂದಿಸಿದೆ.
ಗ್ರಂಥಾಲಯ ಪುಸ್ತಕ ಖರೀದಿ ನೀತಿಯನ್ನು ಒಂದು ಲಕ್ಷದಿಂದ ಎರಡೂವರೆ ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಬಹಳ ವರ್ಷಗಳ ತರುವಾಯ ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ ಎಂದು ಸಂಘದ ಪದಾಧಿಕಾರಿಗಳು ಸೋಮವಾರ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಗೌರವಿಸಿ ಕೃತಜ್ಞತೆ ಸಲ್ಲಿಸಿದರು.

ಬರಹಗಾರರಿಗೆ ಪ್ರೇರಣೆ
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಕಾರ್ಯದರ್ಶಿ ಆರ್. ದೊಡ್ಡೇಗೌಡ, ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಹಾಗೂ ಗೌರವ ಸಲಹೆಗಾರರಾದ ಹಿರಿಯ ಸಾಹಿತಿ ಪ್ರೊ. ದೊಡ್ಡರಂಗೇಗೌಡ, ಈ ಬೇಡಿಕೆ ಬಹು ವರ್ಷದ ಬೇಡಿಕೆಯಾಗಿದ್ದು, ಈ ನಿರ್ಧಾರದಿಂದ ಪ್ರಕಾಶಕರು ಮತ್ತು ಬರಹಗಾರರಿಗೆ ಹೆಚ್ಚಿನ ಪ್ರೇರಣೆ ದೊರೆಯಲಿದೆ ಎಂದು ಹೇಳಿದರು.

ಪುಸ್ತಕ ಲೋಕದಲ್ಲಿ ಹೊಸ ದಿಸೆ
2005 ರಲ್ಲಿ 50 ಸಾವಿರದಿಂದ ಒಂದು ಲಕ್ಷ ರೂಪಾಯಿಹಳಿಗೆ ಹೆಚ್ಚಿಸಲಾಗಿತ್ತು. ಆ ನಂತರ ಎಲ್ಲ ಸರ್ಕಾರಗಳಿಗೂ ಹಲವು ಬಾರಿ ಮನವಿ ಮಾಡಿದರೂ ಯಾರೂ ಕಿವಿ ಮೇಲೆ ಹಾಕಿಕೊಂಡಿರಲಿಲ್ಲ. ಆದರೆ ತಮ್ಮ ಅವಧಿಯಲ್ಲಿ ಇಂತಹ ಒಂದು ಐತಿಹಾಸಿಕ ನಿರ್ಧಾರ ಕೈಗೊಂಡಿರುವುದು ಪುಸ್ತಕ ಲೋಕದಲ್ಲಿ ಒಂದು ಹೊಸ ದಿಸೆ ತೆರೆದುಕೊಳ್ಳಲಿದ್ದು, ಕನ್ನಡ ಬರಹಗಾರರಿಗೆ ಮತ್ತು ಪ್ರಕಾಶಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಪುಸ್ತಕ ಖರೀದಿಗೆ ಅನುಮೋದನೆ
ಹಾಗೆಯೇ 2020-21ನೇ ಸಾಲಿನ ಪುಸ್ತಕ ಖರೀದಿ ಆಯವ್ಯಯಕ್ಕೆ ಅನುಮೋದನೆ ನೀಡಿರುವುದು ಈ ಸರ್ಕಾರದ ಇನ್ನೊಂದು ಪ್ರಮುಖ ಹೆಜ್ಜೆಯಾಗಿದೆ ಎಂದು ನಿಡಸಾಲೆ ಪುಟ್ಟಸ್ವಾಮಯ್ಯ ಹೇಳಿದರು. ಕರೋನಾ ಹಿನ್ನೆಲೆಯಲ್ಲಿ ಈ ಸಾಲಿನ ಪುಸ್ತಕ ಖರೀದಿ ಅಯವ್ಯಯಕ್ಕೆ ಅನುಮೋದನೆ ದೊರೆಯದೇ ತೊಂದರೆಯಾಗಿತ್ತು, ಈ ಅನುಮೋದನೆಯಿಂದಾಗಿ ಪುಸ್ತಕ ಖರೀದಿಗೆ ಅವಕಾಶವಾಗಿದೆ ಎಂದು ಅವರು ಹೇಳಿದರು.
Recommended Video

ಸಂಘದ ಪದಾಧಿಕಾರಿಗಳು
ಸಂಘದ ಪದಾಧಿಕಾರಿಗಳು ಸಚಿವ ಸುರೇಶ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಸಂಘದ ಗೌರವ ಸಲಹೆಗಾರ ಪ್ರೊ. ಮಲ್ಲೇಪುರಂ ವೆಂಕಟೇಶ್, ಕಾರ್ಯದರ್ಶಿ ಆರ್. ದೊಡ್ಡೇಗೌಡ, ಸಾಹಿತಿಗಳಾದ ರಾ.ನಂ. ಚಂದ್ರಶೇಖರ, ಡಾ. ಸುಕನ್ಯಾ ಮಾರುತಿ, ಡಾ. ಮಾಲತಿ ಶೆಟ್ಟಿ, ಜಾಣಗೆರೆ ವೆಂಕಟರಾಮಯ್ಯ, ಭಾಗ್ಯಲಕ್ಷ್ಮಿ ಮಗ್ಗೆ, ವಿಜಯಲಕ್ಷ್ಮಿ ಸತ್ಯಮೂರ್ತಿ, ಡಾ. ಕೆ. ಷರೀಫಾ, ಗೌರಮ್ಮ, ವಿಜಯಾಗುರುರಾಜ್, ಪದ್ಮಿನಿ ನಾಗರಾಜ್, ಮುರಳಿ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications