ಲೇಖಕರ ಒಂದೂವರೆ ದಶಕಗಳ ಬೇಡಿಕೆ ಈಡೇರಿಸಿದ ರಾಜ್ಯ ಬಿಜೆಪಿ ಸರ್ಕಾರ!
ಬೆಂಗಳೂರು, ಫೆ. 22: ಲೇಖಕರು ಹಾಗೂ ಬರಹಗಾರರ ಒಂದೂವರೆ ದಶಕಗಳ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಈಡೇರಿಸಿದೆ. ಹೌದು ಸುಮಾರು 15 ವರ್ಷಗಳ ಬೇಡಿಕೆಯಾಗಿದ್ದ ಗ್ರಂಥಾಲಯ ಪುಸ್ತಕ ಖರೀದಿ ಮಿತಿಯನ್ನು ಹೆಚ್ಚಿಸಿ ಪ್ರಕಾಶಕರು ಮತ್ತು ಲೇಖಕರಿಗೆ ಪ್ರೋತ್ಸಾಹ ನೀಡುವ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ನಿರ್ಧಾರಕ್ಕೆ ಕಾರಣರಾದ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ಅವರನ್ನು ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಟನೆ ಅಭಿನಂದಿಸಿದೆ.
ಗ್ರಂಥಾಲಯ ಪುಸ್ತಕ ಖರೀದಿ ನೀತಿಯನ್ನು ಒಂದು ಲಕ್ಷದಿಂದ ಎರಡೂವರೆ ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಬಹಳ ವರ್ಷಗಳ ತರುವಾಯ ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ ಎಂದು ಸಂಘದ ಪದಾಧಿಕಾರಿಗಳು ಸೋಮವಾರ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಗೌರವಿಸಿ ಕೃತಜ್ಞತೆ ಸಲ್ಲಿಸಿದರು.

ಬರಹಗಾರರಿಗೆ ಪ್ರೇರಣೆ
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಕಾರ್ಯದರ್ಶಿ ಆರ್. ದೊಡ್ಡೇಗೌಡ, ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಹಾಗೂ ಗೌರವ ಸಲಹೆಗಾರರಾದ ಹಿರಿಯ ಸಾಹಿತಿ ಪ್ರೊ. ದೊಡ್ಡರಂಗೇಗೌಡ, ಈ ಬೇಡಿಕೆ ಬಹು ವರ್ಷದ ಬೇಡಿಕೆಯಾಗಿದ್ದು, ಈ ನಿರ್ಧಾರದಿಂದ ಪ್ರಕಾಶಕರು ಮತ್ತು ಬರಹಗಾರರಿಗೆ ಹೆಚ್ಚಿನ ಪ್ರೇರಣೆ ದೊರೆಯಲಿದೆ ಎಂದು ಹೇಳಿದರು.

ಪುಸ್ತಕ ಲೋಕದಲ್ಲಿ ಹೊಸ ದಿಸೆ
2005 ರಲ್ಲಿ 50 ಸಾವಿರದಿಂದ ಒಂದು ಲಕ್ಷ ರೂಪಾಯಿಹಳಿಗೆ ಹೆಚ್ಚಿಸಲಾಗಿತ್ತು. ಆ ನಂತರ ಎಲ್ಲ ಸರ್ಕಾರಗಳಿಗೂ ಹಲವು ಬಾರಿ ಮನವಿ ಮಾಡಿದರೂ ಯಾರೂ ಕಿವಿ ಮೇಲೆ ಹಾಕಿಕೊಂಡಿರಲಿಲ್ಲ. ಆದರೆ ತಮ್ಮ ಅವಧಿಯಲ್ಲಿ ಇಂತಹ ಒಂದು ಐತಿಹಾಸಿಕ ನಿರ್ಧಾರ ಕೈಗೊಂಡಿರುವುದು ಪುಸ್ತಕ ಲೋಕದಲ್ಲಿ ಒಂದು ಹೊಸ ದಿಸೆ ತೆರೆದುಕೊಳ್ಳಲಿದ್ದು, ಕನ್ನಡ ಬರಹಗಾರರಿಗೆ ಮತ್ತು ಪ್ರಕಾಶಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಪುಸ್ತಕ ಖರೀದಿಗೆ ಅನುಮೋದನೆ
ಹಾಗೆಯೇ 2020-21ನೇ ಸಾಲಿನ ಪುಸ್ತಕ ಖರೀದಿ ಆಯವ್ಯಯಕ್ಕೆ ಅನುಮೋದನೆ ನೀಡಿರುವುದು ಈ ಸರ್ಕಾರದ ಇನ್ನೊಂದು ಪ್ರಮುಖ ಹೆಜ್ಜೆಯಾಗಿದೆ ಎಂದು ನಿಡಸಾಲೆ ಪುಟ್ಟಸ್ವಾಮಯ್ಯ ಹೇಳಿದರು. ಕರೋನಾ ಹಿನ್ನೆಲೆಯಲ್ಲಿ ಈ ಸಾಲಿನ ಪುಸ್ತಕ ಖರೀದಿ ಅಯವ್ಯಯಕ್ಕೆ ಅನುಮೋದನೆ ದೊರೆಯದೇ ತೊಂದರೆಯಾಗಿತ್ತು, ಈ ಅನುಮೋದನೆಯಿಂದಾಗಿ ಪುಸ್ತಕ ಖರೀದಿಗೆ ಅವಕಾಶವಾಗಿದೆ ಎಂದು ಅವರು ಹೇಳಿದರು.
Recommended Video

ಸಂಘದ ಪದಾಧಿಕಾರಿಗಳು
ಸಂಘದ ಪದಾಧಿಕಾರಿಗಳು ಸಚಿವ ಸುರೇಶ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಸಂಘದ ಗೌರವ ಸಲಹೆಗಾರ ಪ್ರೊ. ಮಲ್ಲೇಪುರಂ ವೆಂಕಟೇಶ್, ಕಾರ್ಯದರ್ಶಿ ಆರ್. ದೊಡ್ಡೇಗೌಡ, ಸಾಹಿತಿಗಳಾದ ರಾ.ನಂ. ಚಂದ್ರಶೇಖರ, ಡಾ. ಸುಕನ್ಯಾ ಮಾರುತಿ, ಡಾ. ಮಾಲತಿ ಶೆಟ್ಟಿ, ಜಾಣಗೆರೆ ವೆಂಕಟರಾಮಯ್ಯ, ಭಾಗ್ಯಲಕ್ಷ್ಮಿ ಮಗ್ಗೆ, ವಿಜಯಲಕ್ಷ್ಮಿ ಸತ್ಯಮೂರ್ತಿ, ಡಾ. ಕೆ. ಷರೀಫಾ, ಗೌರಮ್ಮ, ವಿಜಯಾಗುರುರಾಜ್, ಪದ್ಮಿನಿ ನಾಗರಾಜ್, ಮುರಳಿ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications