ಬ್ರಾಹ್ಮಣ, ಆರ್ಯ ವೈಶ್ಯ ಸಮಾಜದ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಮಾಹಿತಿ ತಿಳಿಯಿರಿ
ಬೆಂಗಳೂರು, ಫೆಬ್ರವರಿ 27: ಬ್ರಾಹ್ಮಣ ಹಾಗೂ ಆರ್ಯ ವೈಶ್ಯ ಸಮಾಜದ 4,067 ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಮಂಗಳವಾರ 5.53 ಕೋಟಿ ರೂ ವಿದ್ಯಾರ್ಥಿ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆಗೊಳಿಸಿದರು.
ಹಣ ವರ್ಗಾವಣೆ ನಂತರ ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಚಿವರು, 'ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಬ್ರಾಹ್ಮಣ ಮತ್ತು ಆರ್ಯ ವೈಶ್ಯ ಅಭಿವೃದ್ಧಿ ನಿಗಮದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸ್ ಅಧ್ಯಯನ ನಡೆಸುತ್ತಿರುವ ಎರಡೂ ಸಮಾಜದ 4 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಈಗಾಗಲೇ ನೇರ ನಗದು ವರ್ಗಾವಣೆ ಮೂಲಕ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಸಮಾಜಕ್ಕೆ ಬೆಳಕಾಗಬೇಕು' ಎಂದರು.

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವಿದ್ಯಾರ್ಥಿ ವೇತನದ ವಿವರ
2023-24ನೇ ಸಾಲಿನಲ್ಲಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 2710 ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಲಾಗಿದೆ.
ಪದವಿಪೂರ್ವ (ಪಿಯುಸಿ) ವ್ಯಾಸಾಂಗ ಮಾಡುತ್ತಿರುವ 758 ಬ್ರಾಹ್ಮಣ ವಿದ್ಯಾರ್ಥಿಗಳಿಗೆ 15,000 ರೂ. ಎಂಬಂತೆ 1.13 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಲಾಗಿದೆ. ವೃತ್ತಿಪರ ಕೋರ್ಸ್ ವ್ಯಾಸಾಂಗದ 1952 ವಿದ್ಯಾರ್ಥಿಗಳಿಗೆ ಅವರ ಒಟ್ಟು ಶುಲ್ಕದ 2/3 ಭಾಗ ವಿದ್ಯಾರ್ಥಿ ವೇತನವಾಗಿ 2.65 ಕೋಟಿ ರೂ ಎಂಬಂತೆ ಒಟ್ಟು 3.78 ಕೋಟಿ ರೂ. ನಿಗಮದ ಮೂಲಕ ಪಾವತಿಸಲಾಗಿದೆ.
ಆರ್ಯ ವೈಶ್ಯ ಅಭಿವೃದ್ಧಿ ನಗಮ ವಿದ್ಯಾರ್ಥಿ ವೇತನದ ವಿವರ:
2023-24ನೇ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 1,357 ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಲಾಗಿದೆ.
ವೃತ್ತಿಪರ ಪದವಿ ಮತ್ತು ಸ್ನಾತ್ತಕೋತ್ತರ ಪದವಿಗಳಿಗೆ ಗರಿಷ್ಠ 1.20 ಲಕ್ಷ ರೂ. ವರೆಗೆ ಹಾಗೂ ಪದವಿ-ಪದವಿಪೂರ್ವ ವಿದ್ಯಾರ್ಥಿಗಳಿಗೆ ಗರಿಷ್ಠ 30,000 ರೂ. ಗಳವರೆಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಒಟ್ಟಾರೆ ಈ ಸಾಲಿನಲ್ಲಿ 1357 ವಿದ್ಯಾರ್ಥಿಗಳಿಗೆ 1.75 ಕೋಟಿ ರೂ. ಹಣವನ್ನು ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ಜಮಾಗೊಳಿಸಲಾಗಿದೆ ಎಂದು ನಿಗಮದ ಅಧಿಕಾರಿಗಳು ವಿವರಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿಯಾದ ಪೂರ್ಣಿಮಾ .ಪಿ.ವಿ ಹಾಗೂ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾದ ದೀಪಶ್ರೀ .ಕೆ ರವರು ಉಪಸ್ಥಿತರಿದ್ದರು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್












Click it and Unblock the Notifications