Government Employees: "ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರ ಬದ್ಧ"
ಚಿಕ್ಕಮಗಳೂರು, ಡಿಸೆಂಬರ್ 15: ಸರ್ಕಾರಿ ನೌಕರರ ಬೇಡಿಕೆಗೆ ರಾಜ್ಯ ಸರ್ಕಾರ ಬದ್ದವಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ 6 ಮತ್ತು7ನೇ ವೇತನ ಆಯೋಗವನ್ನು ಜಾರಿ ಮಾಡುವ ಮೂಲಕ ನಮ್ಮ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೌಕರರ ಕಲ್ಯಾಣಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದು ಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್.ಆನಂದ್ ಹೇಳಿದರು.
ಕಡೂರು ತಾಲೂಕಿನಲ್ಲಿ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಎಸ್.ಆನಂದ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ನಡುವೆಯೂ ನೌಕರರ ನಿರೀಕ್ಷೆಗೂ ಮೀರಿ ತ್ವರಿತವಾಗಿ 7ನೇ ವೇತನ ಆಯೋಗದ ಶಿಫಾರಸ್ಸನ್ನು ಜಾರಿ ಮಾಡಿದೆ ಎಂದು ಹೇಳಿದರು.

ಇನ್ನೂ ಅನುಷ್ಠಾನಕ್ಕಾಗಿ ಎಷ್ಟೇ ಹೊರೆ ಯಾಗಿದ್ದರೂ 21ಸಾವಿರ ಕೋಟಿ ಮಂಜೂರಾತಿ ನೀಡಿದೆ. ಅಲ್ಲದೆ ಸಂಕಷ್ಟದಲ್ಲಿದ್ದ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮೂಲಕ ನೇರವಾಗಿ ವಿಮಾ ಹಣ ಚಿಕಿತ್ಸೆಗೆಂದು ಮಂಜೂರಾಗುವಂತೆ ಮಾಡಿ ನೌಕರರ ಬಗ್ಗೆ ತನಗಿರುವ ತನ್ನ ಬದ್ಧತೆ ಪ್ರದರ್ಶಿಸಿದೆ. ನೌಕರರು ಮನಸ್ಸು ಮಾಡಿದರೆ ಸರ್ಕಾರವನ್ನೂ ಎದುರು ಹಾಕಿಕೊಂಡು ತೀರ್ಮಾನ ಕೈಗೊಳ್ಳಬಲ್ಲರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉದಾಹರಣೆಯಾಗಿದ್ದಾರೆ ಎಂದು ತಿಳಿಸಿದರು.
ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ನಿಮ್ಮ ಕ್ರಿಯಾಶೀಲತೆಯಿಂದಲೇ ಸರ್ಕಾರಗಳು ಒಳ್ಳೆಯ ಅಥವಾ ಕೆಟ್ಟ ಹೆಸರು ಗಳಿಸುವಂತಾಗುತ್ತದೆ. ಆದ್ದರಿಂದ ನೌಕರರ ಸಂಘ ಎಲ್ಲರಿಗೂ ಸಮಾನ ನ್ಯಾಯ ಒದಗಿಸಲು ಸ್ಫೂರ್ತಿದಾಯಕವಾಗಿ ಶ್ರಮಿಸಬೇಕು. ನಿಮ್ಮ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಸುವುದು ಅವರಲ್ಲಿ ಆತ್ಮ ಸ್ಥೈರ್ಯ ತುಂಬುವ ಕಾರ್ಯಕ್ರಮವಾಗಲಿ ಎಂದು ಹೇಳಿ ಶುಭ ಹಾರೈಸಿದರು. ಉಪನ್ಯಾಸ ನೀಡಿದ ಅಜ್ಜಂಪುರ ಶೆಟ್ರು ಸಿದ್ದಪ್ಪ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎನ್.ಈ.ಶಿವಕುಮಾರ್, ತ್ಯಾಗ, ಛಲ ಮತ್ತು ಪ್ರೇರಣೆಗಳು ಸಾಧನೆಗೆ ದಾರಿಯಾಗಿದ್ದು ಪೋಷಕರೇ ಮಕ್ಕಳಿಗೆ ಸ್ಫೂರ್ತಿಯಾಗಬೇಕು. ಸಾಧನೆ ಮತ್ತು ಪ್ರತಿಭೆಗಳು ಗುರುತಿಸಿದರೆ ಮಾತ್ರ ಬೆಳಕಿಗೆ ಬರುತ್ತವೆ ಎಂದರು.
ನಮ್ಮ ಮಕ್ಕಳು ಸುಟ್ಟಿರದ ಮಡಕೆಯಾಗಿದ್ದು, ಶಿಕ್ಷಕರು ಮಕ್ಕಳನ್ನು ಬಾಳಿಕೆ ಬರುವ ಮಡಕೆಯಾಗಿ ರೂಪಿಸಬೇಕು. ನಮ್ಮ ಮಕ್ಕಳ ಮುಂದೆ ಸವಾಲು, ಪೈಪೋಟಿ ಇದ್ದು ಅವುಗಳನ್ನು ನಿಭಾಯಿಸಿ ಆಶಾಜೀವಿಯಾಗಿ ಬದುಕುವಂತೆ ಮತ್ತು ರಾಷ್ಟ್ರದ ಭವಿಷ್ಯ ಶಾಲಾ ಕೊಠಡಿಗಳಲ್ಲಿ ನಿರ್ಮಾಣವಾಗುತ್ತವೆ ಎನ್ನುವ ನುಡಿಗೆ ತಕ್ಕಂತೆ ಬಾಳಬೇಕು ಎಂದು ಕರೆ ನೀಡಿದರು.
ಇನ್ನೂ ಕಡೂರು ಬಿಇಒ ಎಂ.ಎಚ್.ತಿಮ್ಮಯ್ಯ ಮಾತನಾಡಿ, ಸರ್ಕಾರಿ ನೌಕರರು ತಲ್ಲಣಗಳ ನಡುವೆ ಕೆಲಸ ನಿರ್ವಹಿಸುವಂತಾದರೆ ಮಾನಸಿಕ ಒತ್ತಡ ಹೆಚ್ಚುತ್ತದೆ. ಆದ್ದರಿಂದ ನಮ್ಮ ವೃತ್ತಿ ಇಷ್ಟಪಟ್ಟು, ಪ್ರೀತಿಸಿ ನಿರ್ವಹಿಸಿದರೆ ನಮಗೆ ಶ್ರಮವೂ ಆಗದು, ನಮ್ಮ ಆರೋಗ್ಯವೂ ಸುಸ್ಥಿತಿಯಲ್ಲಿರುತ್ತದೆ. ಇತ್ತೀಚಿನ ದಿನಗಳಲ್ಲಿ ನಮ್ಮ ಮಕ್ಕಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕಡಿಮೆ ಯಾಗುತ್ತಿದೆ. ಏಕೆಂದರೆ ಅವರಿಗೆ ಪೋಷಕರು ಎದುರಿಸುವ ಸಮಸ್ಯೆಗಳ ಅರಿವಿಲ್ಲ. ಅವರ ವೈಫಲ್ಯ ತಡೆಗಟ್ಟಲು ಬಾಂಧವ್ಯ ಗಟ್ಟಿಗೊಳಿಸುವ, ಮೌಲ್ಯ ಬೆಳೆಸುವ ಮೂಲಕ ಪೋಷಕರು ಅವರಿಗೆ ಕುಟುಂಬದ ಎಲ್ಲ ವಿಷಯಗಳ ಅರಿವು ಇರುವಂತೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ












Click it and Unblock the Notifications