ದಸರಾ ಕೊಡುಗೆ: ಸರ್ಕಾರಿ ನೌಕರರ ಬಾಯಿಗೆ ಪಾಯಸ

ಜುಲೈ 1 ರಿಂದಲೇ ಪೂರ್ವಾನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ನಿರೀಕ್ಷಿತ ಪ್ರಮಾಣದಲ್ಲಿ ಅಂದರೆ ಶೇ. 6ರಷ್ಟು ಹೆಚ್ಚಳ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ಕಳೆದ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಮೂಲವೇತನದ ಶೇ.6ರಷ್ಟು ತುಟ್ಟಿಭತ್ಯೆಯನ್ನು ಘೋಷಿಸಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಸರ್ಕಾರದ ಆದೇಶದ ಮೇರೆಗೆ ತುಟ್ಟಿ ಭತ್ಯೆಯನ್ನು ನಗದಾಗಿ ಪಾವತಿ ಮಾಡಲಾಗುವುದೇ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ದಸರಾ ಕೊಡುಗೆ ನೀಡಿರುವ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಸಮಸ್ತ ಸರ್ಕಾರಿ ನೌಕರರ ಪರವಾಗಿ ಸಂಘವು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಲಿದೆ ಎಂದು ಸಂಘದ ಅಧ್ಯಕ್ಷ ಎಲ್.ಭೈರಪ್ಪ ತಿಳಿಸಿದ್ದಾರೆ.
ಇತ್ತೀಚೆಗೆ ಕೇಂದ್ರ ಸರ್ಕಾರದ 80 ಲಕ್ಷಕ್ಕೂ ಅಧಿಕ ಉದ್ಯೋಗಿಗಳಿಗೆ ಡಿಎ ಹೆಚ್ಚಳ ಮಾಡಲಾಗಿತ್ತು. ಇದರಿಂದ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 30 ಲಕ್ಷ ಪಿಂಚಣಿದಾರರಿಗೆ ನೆರವಾಗಿದೆ.ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ನಿರೀಕ್ಷಿತ ಪ್ರಮಾಣದಲ್ಲಿ ಅಂದರೆ ಶೇ. 10ರಷ್ಟು ಹೆಚ್ಚಳ ಮಾಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಶುಕ್ರವಾರ(ಸೆ.20) ಒಪ್ಪಿಗೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ತುಟ್ಟಿ ಭತ್ಯೆ(dearness allowance): ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕವಾಗಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ. ಕೈಗಾರಿಕಾ ಕಾರ್ಮಿಕರಿಗೆ ಸಂಬಂಧಿಸಿದ ಅಖಿಲ ಭಾರತ ಗ್ರಾಹಕ ದರ ಸೂಚ್ಯಂಕ(ಸಿಪಿಐ-ಐಡಬ್ಲ್ಯೂ) ಆಧಾರದಲ್ಲಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗುತ್ತದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications