ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು, ಏಪ್ರಿಲ್ 1: ರಾಜ್ಯಾದ್ಯಂತ ಟ್ಯಾಕ್ಸಿ ದರ ಪರಿಷ್ಕರಣೆ ಮಾಡಿ ಗುರುವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ ಮಾಡುವಂತೆ ಟ್ಯಾಕ್ಸಿ ಮಾಲೀಕರು ಈಚೆಗೆ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದರು.
ಈ ಬೇಡಿಕೆಯನ್ನು ಪರಿಗಣಿಸಿರುವ ಸರ್ಕಾರ ಟ್ಯಾಕ್ಸಿ ಪ್ರಯಾಣ ದರ ಏರಿಕೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದೆ.
ಲಾಕ್ಡೌನ್ ನಂತರ ಬಾಡಿಗೆ ದರ ಕಡಿಮೆಯಿದ್ದು, ಟ್ಯಾಕ್ಸಿ ಹಾಗೂ ಕ್ಯಾಬ್ಗಳಿಗೆ ಪ್ರಸ್ತುತ ಒಂದು ಕಿ.ಮೀ.ಗೆ 24 ರೂ. ದರ ನಿಗದಿ ಮಾಡಬೇಕು ಎಂದು ಬುಧವಾರವಷ್ಟೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಒತ್ತಾಯಿಸಿದ್ದರು.
ಟ್ಯಾಕ್ಸಿ ಚಾಲಕರೊಬ್ಬರು ಏರ್ಪೋರ್ಟ್ ಸಮೀಪ ಟ್ಯಾಕ್ಸಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದರು. ಆನಂತರ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಟ್ಯಾಕ್ಸಿಗಳನ್ನು ಓಡಿಸದೇ ಇರಲು ಚಾಲಕರ ಸಂಘ ನಿರ್ಧಾರ ಮಾಡಿ, ಒಂದು ಕಿ.ಮೀಗೆ 24 ರೂ. ನಿಗದಿಪಡಿಸಿ ಚಾಲಕರ ಜೀವ ಉಳಿಸಿ ಎಂದು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಬೆನ್ನಲ್ಲೇ ಟ್ಯಾಕ್ಸಿ ಪ್ರಯಾಣ ದರ ಏರಿಸಲಾಗಿದೆ.
ವಿವಿಧ ಸ್ವರೂಪದ ಟ್ಯಾಕ್ಸಿಗಳ ಪ್ರಯಾಣ ದರ ಏರಿಕೆ ಮಾಡಿದ್ದು, ಈಗಾಗಲೇ ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಟ್ಯಾಕ್ಸಿ ದರವೂ ದುಬಾರಿಯಾಗಲಿದೆ. ಎ, ಬಿ, ಸಿ ಹಾಗೂ ಡಿ ಎಂದು ವಿಭಾಗಗಳನ್ನು ಮಾಡಿ ದರ ಪರಿಷ್ಕರಣೆ ಮಾಡಲಾಗಿದೆ. ಈ ಕುರಿತ ವಿವರ ಮುಂದಿದೆ...

ಎ ವರ್ಗ (15 ಲಕ್ಷ ರೂ ಮೇಲ್ಪಟ್ಟ ವಾಹನ)- ಕನಿಷ್ಠ 27 ರೂ ಹಾಗೂ ಗರಿಷ್ಠ 54ರೂ ದರ ಪರಿಷ್ಕರಣೆ. ನಿಗದಿತ ಪ್ರಯಾಣ ದರ 150 ರೂ
ಬಿ ವರ್ಗ (10-16 ಲಕ್ಷ ರೂ ವಾಹನ)- ಕನಿಷ್ಠ 24 ರೂ ಹಾಗೂ ಗರಿಷ್ಠ 48 ರೂ
ಸಿ ವರ್ಗ (5 ಲಕ್ಷದಿಂದ 10 ಲಕ್ಷ ರೂ ವಾಹನ) -ಕನಿಷ್ಠ 21 ರೂ ಹಾಗೂ ಗರಿಷ್ಠ 42 ರೂ
ಡಿ ವರ್ಗ (5 ಲಕ್ಷದ ವಾಹನ) -ಕನಿಷ್ಠ 18 ರೂ ಹಾಗೂ ಗರಿಷ್ಠ 3 ರೂ, ನಿಗದಿತ ದರ 75 ರೂ
ಸಮಯದ ಆಧಾರದಲ್ಲಿ ಮಾಡುತ್ತಿದ್ದ ದರ ವಸೂಲಿಗೆ ಬ್ರೇಕ್ ಹಾಕಲಾಗಿದ್ದು, ಕಿ.ಮೀ. ಆಧಾರದಲ್ಲಿ ಪ್ರಯಾಣಿಕರಿಗೆ ದರ ನಿಗದಿ ಮಾಡಲಾಗುವುದು. ಕಾಯುವಿಕೆ ದರ 20 ನಿಮಿಷಗಳವರೆಗೆ ಉಚಿತವಾಗಿದ್ದು, ನಂತರ ಪ್ರತಿ 15 ನಿಮಿಷಗಳಿಗೆ 10 ರೂ ನಿಗದಿ ಮಾಡಿರುವುದಾಗಿ ತಿಳಿದುಬಂದಿದೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications