ನೆರೆಯಲ್ಲಿ ಮನೆ ಕಳೆದುಕೊಂಡವರಿಗೆ ಬರೆ ಕೊಟ್ಟ ರಾಜ್ಯ ಸರ್ಕಾರ!
ಬೆಂಗಳೂರು, ಜನವರಿ 21: ಕಳೆದ ವರ್ಷ ಕರ್ನಾಟಕದಲ್ಲಿ ಸಂಭವಿಸಿದ್ದ ಜಲ ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಆಘಾತ ನೀಡಿದೆ.
ಭೀಕರ ನೆರೆಗೆ ತುತ್ತಾಗಿ ಮನೆ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಮನೆ ಕಟ್ಟಿಕೊಳ್ಳಲು 5 ಲಕ್ಷ ರುಪಾಯಿ ನೆರವು ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ, ಇದೀಗ ರಾಜ್ಯ ಸರ್ಕಾರ, ನೆರವು ಪಡೆಯಲು ಹೊರಡಿಸಿದ್ದ ಆದೇಶದಲ್ಲಿ ಮಾರ್ಪಾಡು ಮಾಡಿ ಹೊಸ ಆದೇಶ ಹೊರಡಿಸಿದೆ.
ಸಂಪೂರ್ಣ ಮನೆ ಕಳೆದುಕೊಂಡವರಿಗೆ ಹಂತ ಹಂತವಾಗಿ 5 ಲಕ್ಷ ರುಪಾಯಿ ಕೊಡಲಾಗುತ್ತದೆ. ಆದರೆ, ಭಾಗಶಃ ಮನೆ ಕಳೆದುಕೊಂಡು, ಅದಷ್ಟೇ ಮನೆ ಕಟ್ಟಿಕೊಳ್ಳುವವರಿಗೆ 5 ಲಕ್ಷದ ಬದಲಾಗಿ 3 ಲಕ್ಷ ರುಪಾಯಿಯನ್ನು ಹಂತ ಹಂತವಾಗಿ ಕೊಡಲಾಗುತ್ತದೆ ಎಂದು ಸರ್ಕಾರದ ಹೊಸ ಆದೇಶ ಹೇಳಿದೆ.

ನೆರೆಗೆ ತುತ್ತಾಗಿ ಬಿದ್ದು/ಹಾಳಾಗಿ ಹೋಗಿದ್ದ ಮನೆಗಳನ್ನು 'ಎ' 'ಬಿ' 'ಸಿ' ಕೆಟಗರಿಗಳಾಗಿ ವಿಂಗಡಿಸಲಾಗಿತ್ತು. 'ಎ' ಕೆಟಗರಿಯಲ್ಲಿನ ಮನೆಗಳಿಗೆ ಸಂಪೂರ್ಣ 5 ಲಕ್ಷ ರುಪಾಯಿಯನ್ನು ಹಂತ ಹಂತವಾಗಿ ಕೊಡಲಾಗುತ್ತದೆ. ನಂತರ ಸಂತ್ರಸ್ತರ ಒತ್ತಾಯಕ್ಕೆ ಮಣಿದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು 'ಬಿ' ಕೆಟಗರಿಯಲ್ಲಿನ ಎಲ್ಲ ಮನೆಗಳಿಗೂ 5 ಲಕ್ಷ ರುಪಾಯಿ ಕೊಡುವುದಾಗಿ ಘೋಷಿಸಿದ್ದರು. ಈಗ 'ಬಿ' ಕೆಟಗರಿಯಲ್ಲಿ ಭಾಗಶಃ ಮನೆಗಳನ್ನು ನಿರ್ಮಿಸಿಕೊಳ್ಳುವವರಿಗೆ 3 ಲಕ್ಷ ರುಪಾಯಿ ಮಾತ್ರ ನೀಡಲಾಗುವುದು ಎಂದು ಅದೇಶ ತಿಳಿಸಿದೆ.

2019 ರಲ್ಲಿ ಆಗಷ್ಟ್ ಹಾಗೂ ಸೆಪ್ಟೆಂಬರ ತಿಂಗಳಿನಲ್ಲಿ ಉತ್ತರ ಕರ್ನಾಟಕ ಹಾಗೂ ಕರಾವಳಿ ಕರ್ನಾಟಕದಲ್ಲಿ ಸಂಭವಿಸಿದ್ದ ಭೀಕರ ನೆರೆಗೆ 11 ಲಕ್ಷ ಹೆಕ್ಟೆರ್ ಬೆಳೆ ನಷ್ಟವಾಗಿತ್ತು. 5.6 ಲಕ್ಷ ಮನೆಗಳು ನೆಲಸಮವಾಗಿದ್ದವು. 190 ಜನ ಸಾವನ್ನಪ್ಪಿದ್ದರು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications