ಸರ್ಕಾರಿ ಕಟ್ಟಡಗಳಲ್ಲಿ ಮಳೆಕೊಯ್ಲು ಅಳವಡಿಕೆ ಕಡ್ಡಾಯಕ್ಕೆ ಚಿಂತನೆ
ಬೆಂಗಳೂರು, ಮೇ 18: ಯಾವುದೇ ಸರ್ಕಾರಿ ಕಟ್ಟಡಗಳ ನಿರ್ಮಾಣ ಸಮಯದಲ್ಲಿ ಮಳೆ ಕೊಯ್ಲು ಪದ್ಧತಿ ಅಳವಡಿಕೆ ಮತ್ತು ಗಿಡ ನೆಡುವುದನ್ನು ಕಡ್ಡಾಯ ಮಾಡುವ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಕೃಷ್ಣಬೈರೇಗೌಡ ಅವರು ಇಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಕಟ್ಟಡ ನಿರ್ಮಾಣದ ಅಂದಾಜು ವೆಚ್ಚ ತಯಾರಿಸುವ ಸಮಯದಲ್ಲಿಯೇ ಮಳೆ ಕೊಯ್ಲು ಪದ್ಧತಿ ಮತ್ತು ಗಿಡ ನೆಡುವವುದನ್ನು ಸೇರಿಸಿ ಕಾರ್ಯಯೋಜನೆ ಪಟ್ಟಿ ತಯಾರಿಸಲು ಸೂಚಿಸಲಾಗುವುದು ಎಂದು ಹೇಳಿದರು.
ಜಲಾಮೃತ, ಜಲವರ್ಷ ಅಭಿಯಾನದ ಅಡಿಯಲ್ಲಿ ಜೂನ್ 11ರಂದು ಒಂದೇ ದಿನ ಕನಿಷ್ಟ 30 ಲಕ್ಷ ಸಸಿಗಳನ್ನು ಸರ್ಕಾರದ ವತಿಯಿಂದ ನೆಡಲಾಗುವುದು ಎಂದು ಕೃಷ್ಣಬೈರೇಗೌಡ ಹೇಳಿದರು.

ಜಲಾಮೃತ, ಜಲವರ್ಷ ಅಭಿಯಾನದಡಿ, ಜಲಸಾಕ್ಷರತೆ, ಜಲಸಂರಕ್ಷಣೆ, ಜಲಪ್ರಜ್ಞಾವಂತ ಬಳಕೆ, ಹಸಿರೀಕರಣ, ಆದ್ಯತೆಯಾಗಿದ್ದು ಜೂನ್ 11ರಂದು ಸಾರ್ವಜನಿಕರು ಶಾಲಾ ಮಕ್ಕಳು, ಗ್ರಾಮ ಪಂಚಾಯಿತಿ ಸದಸ್ಯರನ್ನು ಸೇರಿಸಿ ರಾಜ್ಯಾದ್ಯಂತ ಕನಿಷ್ಟ 30 ಲಕ್ಷ ಸಸಿ ನೆಡಲು ತೀರ್ಮಾನಿಸಲಾಗಿದೆ ಎಂದರು.
ಎಲ್ಲಾ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಮೂಲಕ ಸುಮಾರು 2ಕೋಟಿ ಸಸಿಗಳನ್ನು ನೆಡಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುಮಾರು 500ಕೋಟಿ ರೂ. ವೆಚ್ಚದಲ್ಲಿ 20ಸಾವಿರ ಚೆಕ್ ಡ್ಯಾಂ, 14 ಸಾವಿರ ಸಣ್ಣಪುಟ್ಟ ಜಲತಾಣಗಳನ್ನು ಪುರುಜ್ಜೀವನಗೊಳಿಸಲು ಉದ್ದೇಶಿಸಲಾಗಿದೆ. ರಸ್ತೆ ಬದಿಗಳಲ್ಲಿ ಗಿಡ ನೆಡುವುದು ಕಡ್ಡಾಯವಾಗಿ ಅಂದಾಜು ಪಟ್ಟಿಯಲ್ಲಿ ಅಳವಡಿಸಿ ಅನುಷ್ಟಾನಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Bengaluru Water: ಬೆಂಗಳೂರು ಕೆಸಿ, ಎಚ್ ಎನ್ ವ್ಯಾಲಿ ನೀರಿನಿಂದ ಅಪಾಯವಿಲ್ಲ: ಸಚಿವ ಭೋಸರಾಜು -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು











Click it and Unblock the Notifications