Government Employees: ರಾಜ್ಯ ಸರ್ಕಾರಿ ನೌಕರರಿಗೆ 15 ದಿನಗಳ ಗಳಿಕೆ ರಜೆ: ರಾಜ್ಯ ಸರ್ಕಾರ ಮಹತ್ವದ ಆದೇಶ
ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರವು 2026ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯಮಿತಗೊಳಿಸಿ ಆದೇಶಿಸಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 17.1.2025ರ ಸರ್ಕಾರಿ ಆದೇಶದಲ್ಲಿ 2025ನೇ ಸಾಲಿನ ಬ್ಲಾಕ್ ಅವಧಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i)ರನ್ವಯ ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು ದಿನಾಂಕ:31.12.2025 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2026 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನಗಳ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ನಗದೀಕರಣ ಪಡೆಯುವ ಅವಕಾಶವನ್ನು ಸರ್ಕಾರಿ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿಸಿದ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ತೀರ್ಮಾನಿಸಿದೆ. ಅದರಂತೆ ಈ ಆದೇಶಿಸಲಾಗಿದೆ.

2026 ನೇ ಸಾಲಿನ ಬ್ಲಾಕ್ ಅವಧಿಗೆ ಎಲ್ಲಾ ವೃಂದದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i)ರನ್ವಯ ಗರಿಷ್ಟ 15 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.
ಈ ಸೌಲಭ್ಯವು ದಿನಾಂಕ:1.1.2026 ರಿಂದ 31.12.2026ರ ಅವಧಿಯವರೆಗೆ ಜಾರಿಯಲ್ಲಿರುತ್ತದೆ. ಈ ಸೌಲಭ್ಯವನ್ನು ಎಲ್ಲಾ ವೃಂದದ ಅರ್ಹ ಸರ್ಕಾರಿ ಅಧಿಕಾರಿ/ನೌಕರರು ಒಂದು ತಿಂಗಳ ಮುಂಚಿತವಾಗಿ ಮನವಿ ನೀಡಿ ಅವರ ಇಚ್ಛೆಯ ಯಾವುದೇ ತಿಂಗಳಿನಲ್ಲಿ 15 ದಿನಗಳ ಗಳಿಕೆ ರಜೆ ನಗದೀಕರಣ ಸೌಲಭ್ಯ ಪಡೆಯಬಹುದಾಗಿದೆ.
ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್ ಅವಧಿಯಲ್ಲಿ ಹೊರಡಿಸಲು ಸಾಧ್ಯವಾಗದಿದ್ದರೆ ಸಂಬಂಧಿತ ಪ್ರಾಧಿಕಾರವು ಅಂತಹ ಆದೇಶವನ್ನು ಬ್ಲಾಕ್ ಅವಧಿ ಮುಕ್ತಾಯಗೊಂಡ ನಂತರವೂ ಹೊರಡಿಸಬಹುದು. ಆದರೆ, ಗಳಿಕೆ ರಜೆ ನಗದೀಕರಣದ ಆರ್ಥಿಕ ಪ್ರಯೋಜನವನ್ನು ಸಂಬಂಧಿತ ಆರ್ಥಿಕ ವರ್ಷವು ಅಂತ್ಯಗೊಳ್ಳುವ ಮುನ್ನ ಪಡೆಯತಕ್ಕದ್ದು.
ಗೆಜೆಟೆಡ್ ಅಧಿಕಾರಿಗಳ ಗಳಿಕೆ ರಜೆ ನಗದೀಕರಣಕ್ಕೆ ಸಂಬಂಧಿಸಿದಂತೆ, 2026 ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಹೆಚ್ಆರ್ಎಂಎಸ್ನಲ್ಲಿ ಲಭ್ಯವಿರುವಂತೆ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮವಹಿಸತಕ್ಕದ್ದು ಮತ್ತು ಮಹಾಲೇಖಪಾಲರು ಲೆಕ್ಕಾಚಾರದ ಬಗ್ಗೆ ಯಾವುದೇ ವ್ಯತ್ಯಾಸವನ್ನು ತಿಳಿಸಿದಲ್ಲಿ ಅದನ್ನು ಸರಿಪಡಿಸುವ ಮತ್ತು ಅದರನ್ವಯದ ಆರ್ಥಿಕ ಸೌಲಭ್ಯಗಳಿಗೆ ಮಾತ್ರ ಅರ್ಹವಾಗುವ ಷರತ್ತಿಗೊಳಪಡಿಸಿ ಮಂಜೂರು ಮಾಡತಕ್ಕದ್ದು ಎಂದು ತಿಳಿಸಿದ್ದಾರೆ.
ಮುಂದುವರೆದು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ 118 ರಲ್ಲಿ ನಿಗದಿಪಡಿಸಿರುವ ಗಳಿಕೆ ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಇತರೆ ಷರತ್ತುಗಳು ಅನ್ವಯವಾಗುತ್ತವೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications