ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಳೆಯಿಂದ ಹಾನಿ: ತುರ್ತು ಪರಿಹಾರಕ್ಕೆ 200 ಕೋಟಿ ಬಿಡುಗಡೆ

|
Google Oneindia Kannada News

ಬೆಂಗಳೂರು, ಆಗಸ್ಟ್‌ 28: ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳು ತೊಂದರೆಗೀಡಾಗಿದ್ದು, ತುರ್ತು ಪರಿಹಾರ ಕಾಮಗಾರಿಗಾಗಿ ರಾಜ್ಯ ಸರ್ಕಾರವು 82 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ, ಇದು ತುರ್ತು ಕಾಮಗಾರಿಗೆಂದು ಬಿಡುಗಡೆ ಮಾಡಿರುವ ಮೊತ್ತವಾಗಿದ್ದು, ಹಾನಿ ಸಮೀಕ್ಷೆ ಅಂತಿಮವಾದ ಬಳಿಕ ಒಟ್ಟು ಪರಿಹಾರ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ.

State government released 200 crore for emergency relief for rain affected districts

ಮಳೆಯಿಂದ ಅತಿ ಹೆಚ್ಚು ಹಾನಿಗೊಳಗಾಗಿರುವ ಕೊಡಗಿಗೆ ಹೆಚ್ಚಿನ ಮೊತ್ತ ನೀಡಲಾಗಿದ್ದು, ಕೊಡಗಿಗೆ 85 ಕೋಟಿ ಮೀಸಲಿಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 20.88 ಕೋಟಿ, ಉಡುಪಿಗೆ 14.54 ಕೋಟಿ, ಚಿಕ್ಕಮಗಳೂರಿಗೆ 25.13 ಕೋಟಿ, ಹಾಸನಕ್ಕೆ 27.13 ಕೋಟಿ, ಉತ್ತರ ಕನ್ನಡಕ್ಕೆ 11.51 ಕೋಟಿ, ಶಿವಮೊಗ್ಗಕ್ಕೆ 15 ಕೋಟಿ ನೀಡಲಾಗಿದೆ.

ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?

ಕೊಡಗಿನಲ್ಲಿ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಭಾರಿ ಹಾನಿ ಸಂಭವಿಸಿದೆ. ಗುರುವಾರದಿಂದ ನಷ್ಟದ ಸಮೀಕ್ಷೆ ನಡೆಯಲಿದ್ದು, ಗುರುವಾರ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ನೆರವಿಗೆ ಮನವಿ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಕೊಡಗಿಗೆ ನೆರವು ಕೇಳಲು ಆಗಸ್ಟ್‌ 30ಕ್ಕೆ ದೆಹಲಿಗೆ ಹಾರಲಿದ್ದಾರೆ ಎಚ್‌ಡಿಕೆಕೊಡಗಿಗೆ ನೆರವು ಕೇಳಲು ಆಗಸ್ಟ್‌ 30ಕ್ಕೆ ದೆಹಲಿಗೆ ಹಾರಲಿದ್ದಾರೆ ಎಚ್‌ಡಿಕೆ

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಈ ಮೊತ್ತವು ಕೇವಲ ತುರ್ತು ಪರಿಹಾರ ಕಾರ್ಯಕ್ಕೆ ಮಾತ್ರವೇ ಆಗಿದ್ದು, ನಷ್ಟ ಪರಿಹಾರ ಅಲ್ಲ. ಮನೆ ಹಾನಿ, ಬೆಳೆ ಹಾನಿ, ಜೀವ ಹಾನಿ ಆದವರಿಗೆ ಇನ್ನಷ್ಟೆ ಪರಿಹಾರ ಘೋಷಿಸಬೇಕಿದೆ.

English summary
State Government released 200 crore rupees for emergency relief in rain affected districts. revenue minister RV Deshpande today said that CM will going to Delhi on August 30 to ask help from center.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X