ಜಿಲ್ಲೆಗಳ ವಿಮಾನ ನಿಲ್ದಾಣ ಮೇಲ್ದರ್ಜೆ ಯೋಜನೆ ನೆನೆಗುದಿಗೆ
ಸುಮಾರು 50ರಿಂದ 100 ಕೋಟಿ ರು. ವೆಚ್ಚದಲ್ಲಿ ಚಿಕ್ಕಮಗಳೂರು, ಕೊಡಗು, ಕಾರವಾರ ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿತ್ತು. ಆದರೆ, ಈ ಯೋಜನೆಗೆ ಕೇಂದ್ರ ಸಮ್ಮತಿಸಿಲ್ಲ.
ಬೆಂಗಳೂರು, ಮೇ 24: ಪ್ರಮುಖ ಜಿಲ್ಲೆಗಳಲ್ಲಿರುವ ರನ್ ವೇಗಳನ್ನು ಮಧ್ಯಮ ಸೌಲಭ್ಯಗಳ ವಿಮಾನ ನಿಲ್ದಾಣಗಳನ್ನಾಗಿ ಅಭಿವೃದ್ಧಿಗೊಳಿಸಲು ಆಲೋಚಿಸಿದ್ದ ರಾಜ್ಯ ಸರ್ಕಾರದ ಯೋಜನೆ ನೆನೆಗುದಿಗೆ ಬಿದ್ದಿದೆ.
ಯೋಜನೆಯ ಮೊದಲ ಹೆಜ್ಜೆಯಾಗಿ, ಕಾರವಾರ, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿರುವ ರನ್ ವೇಗಳನ್ನು ಅಭಿವೃದ್ಧಿಪಡಿಸುವುದಾಗಿ 2017-18ರ ರಾಜ್ಯ ಬಜೆಟ್ ನಲ್ಲಿ ಹಣಕಾಸು ಇಲಾಖೆಯನ್ನೂ ತಮ್ಮಲ್ಲೇ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಈ ನಗರಗಳಲ್ಲಿನ ಅಲ್ಪ ಉಪಯೋಗದ ಈ ರನ್ ವೇಗಳನ್ನು 50ರಿಂದ 100 ಕೋಟಿ ರು. ವೆಚ್ಛದಲ್ಲಿ ಮೇಲ್ದರ್ಜೆಗೆ ಏರಿಸುವುದಾಗಿ ಹೇಳಿದ್ದರು.
ಆದರೆ, ಈ ಯೋಜನೆಯು ಕೇಂದ್ರ ಸರ್ಕಾರದ ಹೂಡಿಕೆಯ ಜತೆಗೆ ಅನುಷ್ಠಾನಗೊಳ್ಳುವುದಾಗಿ ಸಿಎಂ ತಿಳಿಸಿದ್ದರು. ಆದರೆ, ಈ ಹೂಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ.

ಇದಕ್ಕೆ ಕಾರಣ, ಅಲ್ಪ ಖರ್ಚಿನಲ್ಲಿ ರನ್ ವೇಗಳ ಅಭಿವೃದ್ಧಿ ಯೋಜನೆಗೆ ಕೇಂದ್ರ ಸರ್ಕಾರ ಹಿಂದೇಟು ಹಾಕಿದೆ. ಹಾಗಾಗಿ, ಹೂಡಿಕೆಯ ಬಗ್ಗೆಯೂ ಕೇಂದ್ರ ಸರ್ಕಾರ ಆಸಕ್ತಿ ತೋರುತ್ತಿಲ್ಲ. ಈ ಕಾರಣಕ್ಕಾಗಿಯೇ ಯೋಜನೆಯ ಫೈಲುಗಳು ಧೂಳು ತಿನ್ನುವಂತಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications