Get Updates
Get notified of breaking news, exclusive insights, and must-see stories!

ಜಿಲ್ಲೆಗಳ ವಿಮಾನ ನಿಲ್ದಾಣ ಮೇಲ್ದರ್ಜೆ ಯೋಜನೆ ನೆನೆಗುದಿಗೆ

ಸುಮಾರು 50ರಿಂದ 100 ಕೋಟಿ ರು. ವೆಚ್ಚದಲ್ಲಿ ಚಿಕ್ಕಮಗಳೂರು, ಕೊಡಗು, ಕಾರವಾರ ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿತ್ತು. ಆದರೆ, ಈ ಯೋಜನೆಗೆ ಕೇಂದ್ರ ಸಮ್ಮತಿಸಿಲ್ಲ.

ಬೆಂಗಳೂರು, ಮೇ 24: ಪ್ರಮುಖ ಜಿಲ್ಲೆಗಳಲ್ಲಿರುವ ರನ್ ವೇಗಳನ್ನು ಮಧ್ಯಮ ಸೌಲಭ್ಯಗಳ ವಿಮಾನ ನಿಲ್ದಾಣಗಳನ್ನಾಗಿ ಅಭಿವೃದ್ಧಿಗೊಳಿಸಲು ಆಲೋಚಿಸಿದ್ದ ರಾಜ್ಯ ಸರ್ಕಾರದ ಯೋಜನೆ ನೆನೆಗುದಿಗೆ ಬಿದ್ದಿದೆ.

ಯೋಜನೆಯ ಮೊದಲ ಹೆಜ್ಜೆಯಾಗಿ, ಕಾರವಾರ, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿರುವ ರನ್ ವೇಗಳನ್ನು ಅಭಿವೃದ್ಧಿಪಡಿಸುವುದಾಗಿ 2017-18ರ ರಾಜ್ಯ ಬಜೆಟ್ ನಲ್ಲಿ ಹಣಕಾಸು ಇಲಾಖೆಯನ್ನೂ ತಮ್ಮಲ್ಲೇ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಈ ನಗರಗಳಲ್ಲಿನ ಅಲ್ಪ ಉಪಯೋಗದ ಈ ರನ್ ವೇಗಳನ್ನು 50ರಿಂದ 100 ಕೋಟಿ ರು. ವೆಚ್ಛದಲ್ಲಿ ಮೇಲ್ದರ್ಜೆಗೆ ಏರಿಸುವುದಾಗಿ ಹೇಳಿದ್ದರು.

ಆದರೆ, ಈ ಯೋಜನೆಯು ಕೇಂದ್ರ ಸರ್ಕಾರದ ಹೂಡಿಕೆಯ ಜತೆಗೆ ಅನುಷ್ಠಾನಗೊಳ್ಳುವುದಾಗಿ ಸಿಎಂ ತಿಳಿಸಿದ್ದರು. ಆದರೆ, ಈ ಹೂಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ.

State government's proposal to develop regional airports fails to take off

ಇದಕ್ಕೆ ಕಾರಣ, ಅಲ್ಪ ಖರ್ಚಿನಲ್ಲಿ ರನ್ ವೇಗಳ ಅಭಿವೃದ್ಧಿ ಯೋಜನೆಗೆ ಕೇಂದ್ರ ಸರ್ಕಾರ ಹಿಂದೇಟು ಹಾಕಿದೆ. ಹಾಗಾಗಿ, ಹೂಡಿಕೆಯ ಬಗ್ಗೆಯೂ ಕೇಂದ್ರ ಸರ್ಕಾರ ಆಸಕ್ತಿ ತೋರುತ್ತಿಲ್ಲ. ಈ ಕಾರಣಕ್ಕಾಗಿಯೇ ಯೋಜನೆಯ ಫೈಲುಗಳು ಧೂಳು ತಿನ್ನುವಂತಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+