ರಾಜ್ಯದಲ್ಲಿ ನೈಟ್ ಕರ್ಫ್ಯೂ ಹಿಂಪಡೆದ ಸರ್ಕಾರ; ಕುದುರೆ ರೇಸ್ಗೂ ಅನುಮತಿ
ಬೆಂಗಳೂರು, ನವೆಂಬರ್ 5: ಕರ್ನಾಟಕ ರಾಜ್ಯಾದ್ಯಂತ ವಿಧಿಸಿದ್ದ ರಾತ್ರಿ ಕರ್ಫ್ಯೂ ಹಿಂಪಡೆದು ರಾಜ್ಯ ಸರ್ಕಾರ ಇಂದು (ನವೆಂಬರ್ 5) ಆದೇಶ ಹೊರಡಿಸಿದೆ.
ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಿದ್ದ ಆದೇಶ ವಾಪಸ್ ಪಡೆಯಲಾಗಿದೆ. ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಹಾಗೂ ದೇಶಾದ್ಯಂತ ಇಳಿಮುಖವಾಗಿ ಸಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಆದೇಶ ವಾಪಸ್ ಪಡೆಯಲಾಗಿದೆ.
ಅದರಂತೆ ಕೊರೊನಾ ಸೋಂಕು ಹಿನ್ನೆಲೆ ಜಾರಿಯಲ್ಲಿದ್ದ ನೈಟ್ ಕರ್ಫ್ಯೂ ಇಂದಿನಿಂದ (ಶುಕ್ರವಾರ) ಇರುವುದಿಲ್ಲ. ಗುರುವಾರ (ನವೆಂಬರ್ 4) ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಭೌತಿಕವಾಗಿ ನಡೆಸುವುದಕ್ಕೆ ಕರ್ನಾಟಕ ಸರ್ಕಾರ ಅನುಮತಿ ನೀಡಿತ್ತು. ಅದರಂತೆ ನವೆಂಬರ್ 8 ರಿಂದ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭವಾಗಲಿವೆ.

ಇದಕ್ಕೂ ಮೊದಲು ಅಕ್ಟೋಬರ್ 25ರಂದು ಶಾಲೆ ಪುನಾರಂಭಿಸುವಂತೆ ಆದೇಶ ನೀಡಲಾಗಿತ್ತು. ಈಗಾಗಲೇ ಶಾಲೆ ಕಾಲೇಜುಗಳು ಆಫ್ಲೈನ್ ವಿಧಾನದಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿವೆ. ಸಿನಿಮಾ ಹಾಲ್, ಈಜುಕೊಳಗಳಿಗೂ ಅನುಮತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಿಧಿಸಿದ್ದ ನೈಟ್ ಕರ್ಫ್ಯೂ ಆದೇಶವನ್ನು ಇಂದು ಹಿಂಪಡೆಯಲಾಗಿದೆ.
ಕುದುರೆ ರೇಸ್ಗೆ ಅನುಮತಿ ನೀಡಿ ಕರ್ನಾಟಕ ಸರ್ಕಾರ
ಕುದುರೆ ರೇಸ್ಗೆ ಅನುಮತಿ ನೀಡಿ ಕರ್ನಾಟಕ ಸರ್ಕಾರ ಇಂದು (ನವೆಂಬರ್ 5) ಆದೇಶ ಹೊರಡಿಸಿದೆ. ಕೋವಿಡ್-19 ಕಾರ್ಯವಿಧಾನ ಪಾಲಿಸುವಂತೆ ಸರ್ಕಾರ ಷರತ್ತು ಹಾಕಿದೆ. ರೇಸ್ ಕೋರ್ಸ್ಗೆ ಪ್ರವೇಶಿಸುವವರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಸ್ಥಳಾವಕಾಶದ ಸಾಮರ್ಥ್ಯ ಆಧರಿಸಿ ಜನರು ರೇಸ್ನಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.

Recommended Video
ಕೊರೊನಾ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಚಟುವಟಿಕೆಗಳು ನಿಂತು ಹೋಗಿದ್ದವು. ಇದೀಗ, ಮತ್ತೆ ಜನಜೀವನ ಯಥಾಸ್ಥಿತಿಗೆ ಮರಳಲು ಆರಂಭಿಸಿದೆ. ಶಾಲಾ ಕಾಲೇಜುಗಳು ಆರಂಭವಾಗಿವೆ.












Click it and Unblock the Notifications