ಮೀಸಲಾತಿ ಬೇಡಿಕೆ ಪರಿಶೀಲನೆಗೆ ತ್ರಿಸದಸ್ಯ ಉನ್ನತ ಸಮಿತಿ ರಚನೆ
ಬೆಂಗಳೂರು, ಮಾರ್ಚ್ 11: ಮೀಸಲಾತಿಗಾಗಿ ಅನೇಕ ಸಮುದಾಯಗಳು ಬೇಡಿಕೆ ಇರಿಸಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಪರಿಶೀಲನೆ ನಡೆಸಿ, ಮೀಸಲಾತಿ ಹೆಚ್ಚಳ, ಒಳ ಮೀಸಲಾತಿ, ಹೊಸ ಮೀಸಲಾತಿಗಳ ಬೇಡಿಕೆಗಳನ್ನು ಪರಿಗಣಿಸುವ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದಲ್ಲಿ ತ್ರಿಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ವಿವಿಧ ಸಮುದಾಯಗಳು ಮುಂದಿರಿಸಿರುವ ಮೀಸಲಾತಿ ಬೇಡಿಕೆ ಸಂಬಂಧ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿರುವಂತೆ ಸುಭಾಷ್ ಅಡಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಮತ್ತು ಮಹಾರಾಣಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಬಿ.ವಿ. ವಸಂತ್ ಕುಮಾರ್ ಈ ಸಮಿತಿಯ ಸದಸ್ಯರಾಗಿರಲಿದ್ದಾರೆ.
ಪಂಚಮಸಾಲಿ ಸಮುದಾಯವು 2 ಎ ಪ್ರವರ್ಗದಲ್ಲಿ ಮೀಸಲಾತಿ ಕೋರಿದ್ದು, ಅದರ ಕುರಿತು ಪರಿಶೀಲಿಸುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದೆ. ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳದ ಕುರಿತು ಪರಿಶೀಲಿಸಿ ನ್ಯಾ. ನಾಗಮೋಹನದಾಸ್ ವರದಿ ನೀಡಿದ್ದಾರೆ.

ಕುರುಬ ಸಮುದಾಯವು ಎಸ್ಟ ಪ್ರವರ್ಗಕ್ಕೆ ಸೇರಿಸುವಂತೆ ಮನವಿ ಮಾಡಿದ್ದಾರೆ. ವೀರಶೈವ ಲಿಂಗಾಯತರು ಮತ್ತು ಒಕ್ಕಲಿಗ ಸಮುದಾಯದವರು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಸೇರಿಸುವಂತೆ ಕೋರಿದ್ದಾರೆ. ಹಾಗೆಯೇ ಇತರೆ ಕೆಲವು ಸಮುದಾಯಗಳು ಸಹ ಮೀಸಲಾತಿಯ ವಿವಿಧ ಬೇಡಿಕೆಗಳನ್ನು ಇರಿಸಿವೆ. ಹೀಗಾಗಿ ಇವುಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ತ್ರಿಸದಸ್ಯ ಸಮಿತಿ ರಚಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಈ ಸಮಿತಿಗೆ ಮೀಸಲಾತಿ ಅಧ್ಯಯನ ನಡೆಸಿ ವರದಿ ನೀಡಲು ಸಮಯ ಗಡುವು ನಿಗದಿ ಮಾಡಿಲ್ಲ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications