Get Updates
Get notified of breaking news, exclusive insights, and must-see stories!

ಶಾಮನೂರು ಶಿವಶಂಕರಪ್ಪ ಹೇಳಿಕೆ: ಸರ್ಕಾರ ಗೊಂದಲದ ಗೂಡಾಗಿದೆ: ಬಸವರಾಜ ಬೊಮ್ಮಾಯಿ

ಹಾವೇರಿ, ಅಕ್ಟೋಬರ್ 01: ಶಾಮನೂರು ಶಿವಶಂಕರಪ್ಪ ಹೇಳಿಕೆ ಗಂಭೀರವಾಗಿದೆ.ಈ ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ. ಸಚಿವರ ನಡುವೆ ಹೊಂದಾಣಿಕೆಯಿಲ್ಲ. ಸರ್ಕಾರ ಗೊಂದಲದ ಗೂಡಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲೆಯ ಶಿಗ್ಗಾವಿ ಕ್ಷೇತ್ರದ ಸವಣೂರು ತಾಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪ್ರತಿದಿನ ಈ ಸರ್ಕಾರದ ಮಂತ್ರಿಗಳು ಒಂದಿಲ್ಲೊಂದು ಗೊಂದಲದ ಹೇಳಿಕೆ ಕೊಡುವುದನ್ನು ನೋಡಿದರೆ, ಈ ಸರ್ಕಾರದ ಒಳಗಡೆ ಯಾವದೂ ಸರಿ ಇಲ್ಲ. ಸರ್ಕಾರದಲ್ಲಿ ಗೊಂದಲದ ಗೂಡಾಗಿದೆ.

State Govt Has Confusion After Shamanur Shivashankarappa Statement, Says Basavaraj Bommai

ಸಚಿವರ ನಡುವೆ ಒಬ್ಬರಿಗೊಬ್ಬರ ಸಹಕಾರ ಇಲ್ಲ. ಸಂಪುಟದಲ್ಲಿ ಒಕ್ಕಟ್ಟಿಲ್ಲ ಈ ಬಗ್ಗೆ ಕಾಂಗ್ರೆಸ್ ಶಾಸಕರಲ್ಲಿ ಆಕ್ರೋಶ ಇದೆ. ಕರ್ನಾಟಕದ ಜನರಿಗೆ ಈ ಸರ್ಕಾರದ ಇದೆ ಎಂಬ ಭಾವನೆ ಇಲ್ಲ ಎಂದು ಅವರು ದೂರಿದರು.

ರಾಜ್ಯದಲ್ಲಿ ಬರಗಾಲ ಎದುರಾದರೆ ಸರ್ಕಾರದಿಂದ ನೆರವಿಲ್ಲ. ಕಾವೇರಿ ವಿಚಾರದಲ್ಲಿ ಸರ್ಕಾರ ನೆರವಾಗುತ್ತಿಲ್ಲ. ನಾಲ್ಕು ತಿಂಗಳಲ್ಲಿ ಈ ಸರ್ಕಾರ ಜನರ ಪ್ರೀತಿಯನ್ನು ಕಳೆದು ಕೊಂಡಿದೆ. ಸಚಿವರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿಯಂತ್ರಣ ಇಲ್ಲ ಎಂದರು.

ಕಾವೇರಿ ವಿಚಾರದಲ್ಲಿ ಗೊಂದಲ

ಕಾವೇರಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿಗಳು ನ್ಯಾಯಮೂರ್ತಿಗಳ ಸಭೆಯಲ್ಲಿ ಒಂದು ಹೇಳುತ್ತಾರೆ ಹೊರಗೊಂದು ಹೇಳುತ್ತಾರೆ‌. ನಿನ್ನೆ ನ್ಯಾಯಮೂರ್ತಿಗಳ ಮಿಟಿಂಗನಲ್ಲಿ ನಾವು ಅಪೀಲ್ ಹೊಗುತ್ತೇವೆ. ನೀರು ನಿಲ್ಲಿಸುತ್ತೇವೆ ಅಂತಾ ಸಭೆಯಲ್ಲಿ ಹೇಳಿದ್ದರು. ಆದರೆ, ಹೊರಗಡೆ ಬಂದು ಅಪೀಲ್ ಹೊಗುತ್ತೇವೆ ಆದರೆ, ನೀರು ನಿಲ್ಲಿಸಲು ಆಗುವುದಿಲ್ಲ ಅಂತ ಹೇಳಿದ್ದಾರೆ.‌ ಯಾಕೇ ನಿಲ್ಲಿಸಲು ಆಗುವುದಿಲ್ಲ ಎಂದು ಅವರು ಪ್ರಶ್ನೆ ಮಾಡಿದರು.

State Govt Has Confusion After Shamanur Shivashankarappa Statement, Says Basavaraj Bommai

ನೀರು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆಗುತ್ತದೆ‌. ಸರ್ಕಾರ ವಜಾ ಆಗುತ್ತೆ, ಡ್ಯಾಂ ವಶಪಡಿಸಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಗಳು ಹೇಳುತ್ತಾರೆ. ನೀವು ಇನ್ನೂ ಸುಪ್ರಿಂ ಕೊರ್ಟ್ ಗೆ ಹೊಗುವುದು ಬಾಕಿ ಇದೆ. ಅಲ್ಲಿಗೆ ಹೋಗುವ ಮುನ್ನ ಹೇದರಿಕೊಂಡು ಈ ತರಹ ಹೇಳಿಕೆ ಕೊಟ್ಟರೆ, ನೀರು ಬಿಡುವಂತೆ ಕೊರ್ಟ್ ಹೇಳುತ್ತದೆ. ಮುಖ್ಯಮಂತ್ರಿಗಳಿಗೆ ಅಷ್ಟಾದರೂ ವ್ಯವಧಾನ ಬೇಡವೇ? ಈ ಸರ್ಕಾರ ಈ ತರಹ ದ್ವಂದ್ವ ನೀತಿ ನಡೆದುಕೊಂಡು ಬಂದಿದೆ. ರಾಜ್ಯದ ನೆಲ ಜಲ ಉಳಿಸಲು ಈ ಸರ್ಕಾರದಿಂದ ಸಾಧ್ಯ ಇಲ್ಲ ಎನ್ನುವುದು ರಾಜ್ಯದ ಜನರಿಗೆ ಗೊತ್ತಿದೆ.

ಶಾಮನೂರು ಶಿವಶಂಕರಪ್ಪ ಹೇಳಿಕೆ ಗಂಭೀರ

ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು. ಅಖಿಲ ಭಾರತ ವಿರಶೈವ ಮಹಾಸಭಾದ ಅಧ್ಯಕ್ಷರು ಅವರ ಹೇಳಿಕೆಯನ್ನು ಜನ ಗಂಭೀರವಾಗಿ ಪರಿಗಣನೆ ಮಾಡುತ್ತಾರೆ.

ಮುಖ್ಯಮಂತ್ರಿಗಳು ಅವರಿಗೆ ಸ್ಪಷ್ಟವಾದ ಉತ್ತರ ಕೊಡಬೇಕು. ಮುಖ್ಯಮಂತ್ರಿಗಳ ಹೇಳಿಕೆ ಬಳಿಕವೂ ನಮ್ಮ ಹೇಳಿಕೆ ಬದ್ದ ಅನ್ನುವುದನ್ನು ನೋಡಿದರೆ ಶಾಮನೂರು ಶಿವಶಂಕರಪ್ಪ ಹೇಳಿಕೆ ಬಹಳ ಗಂಭಿರವಾಗಿದೆ ಎಂದು ಅರ್ಥವಾಗುತ್ತದೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+