ಅಕ್ರಮದ ವಾಸನೆ:ವಿವಿ ಅಧ್ಯಾಪಕರ ನೇಮಕಾತಿ ತಡೆ ಹಿಡಿದ ಸರ್ಕಾರ
ಬೆಂಗಳೂರು, ನವೆಂಬರ್ 7: ಅಕ್ರಮದ ಸುಳಿವು ದೊರೆತ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಗಳ ಅಧ್ಯಾಪಕರ ನೇರ ನೇಮಕಾತಿಗೆ ಸರ್ಕಾರ ತಡೆ ಹಿಡಿದಿದೆ.
ಮುಂದಿನ ಆದೇಶದ ವರೆಗೆ ಬೋಧಕ ಸಿಬ್ಬಂದಿಯನ್ನು ನೇರ ನೇಮಕಾತಿ ಮಾಡಿಕೊಳ್ಳದಂತೆ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ವಿವಿಗಳಲ್ಲಿ ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿತ್ತು. ಆದರೆ, ಬೋಧಕರ ನೇಮಕಾತಿಗಳು ಯುಜಿಸಿಯ ಮಾನದಂಡಗಳಿಗೆ ವ್ಯತಿರಿಕ್ತವಾಗಿವೆ ಎಂದು ಅಭ್ಯರ್ಥಿಗಳು ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ಮುಂದಿನ ಆದೇಶದವರೆಗೆ ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ವಿ ಬ್ರಹ್ಮಾಚಾರಿ ಆದೇಶ ಹೊರಡಿಸಿದ್ದಾರೆ. ಸಧ್ಯಕ್ಷೆ ಯಾವುದೇ ಪ್ರಕ್ರಿಯೆಗಳು ನಡೆಯುವುದು ಅನುಮಾನವಾಗಿದೆ.

100 ಅಂಕಗಳಿಗೆ ಪರೀಕ್ಷೆ ನಡೆಸಲು ಅವಕಾಶವಿಲ್ಲ
ಯುಜಿಸಿ 2010ರಲ್ಲಿ ಜಾರಿಗೆ ತಂದಿರುವ ನಿಯಮಗಳ ಪ್ರಕಾರ ಬೋಧಕರ ನೇಮಕಾತಿಗೆ ಸಂಬಂಧಿಸಿದಂತೆ 100 ಅಂಕಗಳಿಗೆ ಲಿಖಿತ ಪರೀಕ್ಷೆಗೆ ಅವಕಾಶವಿರುವುದಿಲ್ಲ, ಯುಜಿಸಿ ನಿಯಮಗಳ ಪ್ರಕಾರ ಅರ್ಹ ಎಲ್ಲಾ ಅಭ್ಯರ್ಥಿಗಳು ಸಂಶದರ್ಶನಕ್ಕೆ ಹಾಜರಾಗಲು ಅವಕಾಶವಿದೆ.

ನಿಯಮವನ್ನು ಗಾಳಿಗೆ ತೂರಲಾಗಿದೆ
100 ಅಂಕಗಳ ಲಿಖಿತ ಪರೀಕ್ಷೆಗೆ ಅವಕಾಶವಿಲ್ಲದಿದ್ದರೂ ಲಿಖಿತ ಪರೀಕ್ಷೆಯ 1:3 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಇದರಿಂದ ಅರ್ಹರು ನೇಮಕಾತಿ ಅವಕಾಶದಿಂದ ವಂಚಿತರಾಗಬೇಕಾಗುತ್ತದೆ.

ಸಹಪ್ರಾಧ್ಯಾಪಕರಿಗೆ 8 ವರ್ಷ ಕನಿಷ್ಠ ಅನುಭವ
ಸಹ ಪ್ರಾಧ್ಯಾಪಕರ ಹುದ್ದೆಯ ನೇರ ನೇಮಕಾತಿಗೆ ಕನಿಷ್ಠ 8 ವರ್ಷಗಳ ಬೋಧನೆ ಅಥವಾ ಸಂಶೋಧನಾ ಅನುಭವ ಅಥವಾ ಸಂಶೋಧನಾ ಅನುಭವ 2010ರ ನಿಯಮಗಳ ಅನ್ವಯ ಕಡ್ಡಾಯವಾಗಿರುತ್ತದೆ. ಆದರೆ ಇದಕ್ಕೆ ವಿರುದ್ಧವಾಗಿ ಸುತ್ತೋಲೆಯಲ್ಲಿ ಕನಿಷ್ಠ 5 ವರ್ಷಗಳ ಬೋಧನೆ ಅಥವಾ ಸಂಶೋಧನಾ ಅನುಭವ ಅಗತ್ಯತೆಗಳನ್ನು ಗೊತ್ತು ಪಡಿಸಿಸಲಾಗಿದೆ.

ಬೋಧಕರ ನೇರ ನೇಮಕಾತಿಯಲ್ಲಿ ಪಾರದರ್ಶಕತೆ ಇಲ್ಲ
ವಿಶ್ವವಿದ್ಯಾಲಯಗಳಲ್ಲಿ ಬೋಧಕರ ನೇರ ನೇಮಕಾತಿ ಮಾಡಿಕೊಂಡಲ್ಲಿ ಪಾರದರ್ಶಕತೆ ಕಾಪಾಡಲು ಆಗುವುದಿಲ್ಲ, ಇದು ದ್ವಜನ ಪಕ್ಷಪಾತಕ್ಕೆ ಎಡೆ ಮಾಡಿಕೊಡುತ್ತದೆ. ಮತ್ತು ಬೋಧಕರ ಹುದ್ದೆಯ ನೇಮಕಾತಿಗಾಗಿ ಕೆಲವು ವಿಶ್ವವಿದ್ಯಾಲಯಗಳು ಆರಂಭಿಸಿರುವ ಪ್ರಕ್ರಿಯೆ ಹಾಗೂ ನಡೆಸಿರುವ ಲಿಖಿತ ಪರೀಕ್ಷೆಗಳು ಪಾರದರ್ಶಕವಾಗಿಲ್ಲ ಎಂದು ಅಭ್ಯರ್ಥಿಗಳು ಆರೋಪಿಸಿದ್ದರು.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications