ಕೊರೊನಾ ಆರ್ಥಿಕ ಸಂಕಷ್ಟ ಜನರಿಗೆ ಮಾತ್ರ, ಸಚಿವರ ಹೊಸ ಕಾರು ಖರೀದಿಗೆ ಸರ್ಕಾರದ ಕೋಟಿ ಕೋಟಿ ಹಣ!
ಬೆಂಗಳೂರು, ಫೆ. 24: ಕೊರೊನಾದಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅನೇಕ ಮೂಲಭೂತ ಅಭಿವೃದ್ಧಿ ಕಾರ್ಯಗಳಿಗೂ ಕೂಡ ಅನುದಾನವನ್ನು ಕಡಿತಗೊಳಿಸಲಾಗಿದೆ. ಆದರೆ ನಮ್ಮ ಜನಪ್ರತಿನಿಧಿಗಳ ದುಂದುವೆಚ್ಚಕ್ಕೆ ಮಾತ್ರ ಕಡಿವಾಣ ಬಿದ್ದಿಲ್ಲ. ಕೊರೊನಾ ವೈರಸ್ ಆರ್ಥಿಕ ಸಂಕಷ್ಟದ ಮಧ್ಯೆ ರಾಜ್ಯದ ಸಚಿವರು ಹಾಗೂ ಸಂಸದರು ಐಷಾರಾಮಿ ಹೊಸ ಕಾರು ಕೊಳ್ಳಲು ಖರೀದಿಯ ಮೊತ್ತವನ್ನು ಹೆಚ್ಚಳ ಮಾಡಿ ಸರ್ಕಾರ ಆದೇಶ ಮಾಡಿದೆ. ಆ ಮೂಲಕ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದರೂ, ಜನ ಸಾಮಾನ್ಯರ ಕಷ್ಟ ನಮಗೇನು ಸಂಬಂಧವೇ ಇಲ್ಲ ಎಂಬಂತೆ ಸರ್ಕಾರ ಹೊಸ ಆದೇಶ ಮಾಡಿದೆ.
ಸಚಿವರು ಹಾಗೂ ರಾಜ್ಯದ ಎಲ್ಲ ಸಂಸದರು ಹೊಸ ಕಾರು ಖರೀದಿ ಮಾಡಲು 23 ಲಕ್ಷ ರೂಪಾಯಿ ನೀಡಲು ಸರ್ಕಾರ ಸಮ್ಮತಿಸಿದೆ. ಹೀಗಾಗಿ ರಾಜ್ಯದ ಎಲ್ಲಾ ಸಚಿವರು, ಸಂಸದರು ಕಾರು ಖರೀದಿ ಮಾಡಲು ಇನ್ಮುಂದೆ ಸರ್ಕಾರದಿಂದ 23 ಲಕ್ಷ ರೂ. ಗಳನ್ನು ಪಡೆಯಲು ಅವಕಾಶವಿದೆ. ಈ ಹಿಂದೆ ಕಾರು ಖರೀದಿಗೆ ನೀಡುತ್ತಿದ್ದ ಮೊತ್ತವನ್ನು ಹೆಚ್ಚಳ ಮಾಡಲು ಸಚಿವರು ಹಾಗೂ ಸಂಸದರಿಂದ ಒತ್ತಡ ಬಂದಿತ್ತು. ಅವರ ಒತ್ತಡಕ್ಕೆ ಮಣಿದ ಸರ್ಕಾರ ಹೊಸ ಕಾರು ಖರೀದಿಗೆ 23 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲು ಒಪ್ಪಿಕೊಂಡಿದೆ. ಈ ಮೊದಲು ಹೊಸ ಕಾರು ಖರೀದಿಗೆ 22 ಲಕ್ಷ ರೂ. ಗಳನ್ನು ರಾಜ್ಯ ಸರ್ಕಾರ ನೀಡುತ್ತಿತ್ತು.

ಇದೀಗ ರಾಜ್ಯದ 33 ಸಚಿವರು (ಸಿಎಂ ಹೊರತು ಪಡಿಸಿ) ಹಾಗೂ 28 ಸಂಸದರು ಹೊಸ ಐಷಾರಾಮಿ ಕಾರುಗಳನ್ನು ಕೊಳ್ಳಬಹುದಾಗಿದೆ. ಅದಕ್ಕೆ ಸರ್ಕಾರ ತಲಾ 23 ಲಕ್ಷ ರೂಪಾತಿಗಳನ್ನು ಒದಗಿಸಲಿದೆ. ಒಮ್ಮೆಲೆ ಎಲ್ಲ ಸಚಿವರು ಹಾಗೂ ಸಂಸದರು ಐಶಾರಾಮಿ ಕಾರುಗಳನ್ನು ಖರೀದಿ ಮಾಡಿದಲ್ಲಿ ಸುಮಾರು 14 ಕೋಟಿ ರೂಪಾಯಿಗಳಿಗೂ ಅಧಿಕ ಹಣವನ್ನು ವ್ಯಯಿಸಲಬೇಕಾಗುತ್ತದೆ.

Recommended Video
ಮೊದಲೇ ಕೊರೊನಾ ವೈರಸ್ ಸಂಕಷ್ಟದಿಂದ ಮಕ್ಕಳ ಶಾಲಾ ಶುಲ್ಕವನ್ನು ಕಟ್ಟಲು ಜನರು ಪರದಾಡುತ್ತಿದ್ದಾರೆ. ಆದರೆ ನಮ್ಮ ಜನಪ್ರತಿನಿಧಿಗಳು ಮಾತ್ರ ತಮ್ಮ ಐಷಾರಾಮಿ ಬದುಕಿನಿಂದ ಹೊರಗೆ ಬರಲು ಒಪ್ಪಿಲ್ಲ. ಒಂದು ವರ್ಷದ ಮಟ್ಟಿಗೆ ಕಾರು ಖರೀದಿ ಮುಂದಕ್ಕೆ ಹಾಕಿದ್ದರೆ ಏನೂ ಆಗುತ್ತಿರಲಿಲ್ಲ ಎಂಬುದು ಜನರ ಹೇಳಿಕೆಯಾಗಿದೆ. ಆದರೆ ಅದನ್ನು ಕೇಳಿಸಕೊಳ್ಳುವವರು ಯಾರು?
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications