ಪರಿಶಿಷ್ಟರ ಪಟ್ಟಿಗೆ ಬಾಂಗ್ಲಾ ವಲಸಿಗರು, ಸಂಪುಟ ಸಭೆ ನಿರ್ಧಾರ
1971ರ ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಇವರೆಲ್ಲಾ ಭಾರತಕ್ಕೆ ವಲಸೆ ಬಂದವರಾಗಿದ್ದಾರೆ. ಇವರನ್ನೆಲ್ಲಾ ಇವತ್ತಿಗೂ ಮೇಲ್ವರ್ಗದವರು ಅಸ್ಪೃಷ್ಯರಂತೆ ಕಾಣುತ್ತಿದ್ದಾರೆ. ಜತೆಗೆ ಸಾಮಾಜಿಕವಾಗಿಯೂ ತೀರಾ ಹಿಂದುಳಿದಿದ್ದಾರೆ.
ಬೆಂಗಳೂರು, ಮೇ 18: ಬಾಂಗ್ಲಾದೇಶದಿಂದ ವಲಸೆ ಬಂದು ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನೆಲೆಸಿರುವವರನ್ನು ಪರಿಶಿಷ್ಟ ಜಾತಿಗೆ ಸೇರಿಸಲು ರಾಜ್ಯ ಸರಕಾರ ಮುಂದಾಗಿದೆ.
ಸಿಂಧನೂರಿನಲ್ಲಿ ನೆಲೆ ನಿಂತು ನಾಮಶೂದ್ರ, ಪೊಡ್ ಅಥವಾ ಪೌಂಡ್ರ ಹಾಗೂ ರಾಜಬುಶಿ ಜಾತಿಗಳ ಬಾಂಗ್ಲಾ ನಿವಾಸಿಗಳು ಭಾರತೀಯ ಪೌರತ್ವವನ್ನು ಪಡೆದಿದ್ದಾರೆ. ಇವರನ್ನು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕೋರಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಬುಧವಾರ ನಡೆಸ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.[5 ಸಾವಿರ ಡಿ ಗ್ರೂಪ್ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್]

ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ, ಈ ಪ್ರದೇಶದಲ್ಲಿ ನಾಮಶೂದ್ರರ ಜನಸಂಖ್ಯೆ 8024, ಪೊಡ್ ಅಥವಾ ಪೌಂಡ್ರರ ಜನಸಂಖ್ಯೆ 118 ಹಾಗೂ ರಾಜಬುಶಿ ಜನಸಂಖ್ಯೆ 102 ಇದೆ.
1971ರ ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಇವರೆಲ್ಲಾ ಭಾರತಕ್ಕೆ ವಲಸೆ ಬಂದವರಾಗಿದ್ದಾರೆ. ಕಳೆದ ನಾಲ್ಕು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಈ ಸಮುದಾಯಕ್ಕೆ ಕೊಡುಗೆ ನೀಡಲು ರಾಜ್ಯ ಸರಕಾರ ಮುಂದಾಗಿದೆ.[ಜೂನ್ 5ರಿಂದ 16, ಜಿಎಸ್ಟಿಗಾಗಿ ಮುಂದುವರಿದ ಬಜೆಟ್ ಅಧಿವೇಶನ]
ಇವರನ್ನೆಲ್ಲಾ ಇವತ್ತಿಗೂ ಮೇಲ್ವರ್ಗದವರು ಅಸ್ಪೃಷ್ಯರಂತೆ ಕಾಣುತ್ತಿದ್ದಾರೆ. ಜತೆಗೆ ಸಾಮಾಜಿಕವಾಗಿಯೂ ತೀರಾ ಹಿಂದುಳಿದಿದ್ದಾರೆ. ಈ ಕಾರಣಕ್ಕೆ ಇವರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ರಾಜ್ಯ ಸರಕಾರ ನಿರ್ಧರಿಸಿದೆ.
ಸದ್ಯ ಇವರಿಗೆಲ್ಲಾ ತಲಾ 5 ಎಕರೆ ಜಮೀನು ನೀಡಲಾಗಿದ್ದು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಅವರನ್ನು ಸಾಮಾನ್ಯ ವರ್ಷದಂತೆ ನೋಡಲಾಗುತ್ತಿರುವುದರಿಂದ ಪರಿಶಿಷ್ಟರಿಗೆ ನೀಇಡಲಾಗುತ್ತಿರುವ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಸಿಂಧನೂರು ಶಾಸಕ ಬಾದರ್ಲಿ ಹಂಪನ ಗೌಡ ಟೈಮ್ಸ್ ಆಫ್ ಇಂಡಿಯಾಗೆ ಪ್ರತಿಕ್ರಿಯೆ ನೀಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications