ಕಂಬಳಕ್ಕೆ ಪ್ರತ್ಯೇಕ ಕಾನೂನಿಗೆ ರಾಜ್ಯ ಸರ್ಕಾರ ಚಿಂತನೆ -ಜಯಚಂದ್ರ
ಕಂಬಳ ಉಳಿಸಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯ ಸರಕಾರ ಕಂಬಳಕ್ಕಾಗಿ ಪ್ರತ್ಯೇಕ ಕಾನೂನು ಜಾರಿಗೆ ಚಿಂತನೆ ನಡೆಸಿದೆ.
ಬೆಂಗಳೂರು, ಜನವರಿ 25: 'ಕಂಬಳ ಉಳಿಸಿ' ಪ್ರತಿಭಟನೆ ಜೋರಾದ ಬೆನ್ನಿಗೆ ಕರ್ನಾಟಕ ರಾಜ್ಯ ಸರಕಾರ ಪರ್ತಯೇಕ ಕಾನೂನು ರಚನೆಗೆ ಚಿಂತನೆ ನಡೆಸಿದೆ. "ಫೆಬ್ರವರಿ 6ರಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆಯೆಂದು," ಕಾನೂನು ಸಚಿವ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.
ನಿಷೇಧಿತ ಕಂಬಳ ಆಚರಣೆಯನ್ನು ಕಾನೂನು ಬದ್ಧಗೊಳಿಸುವ ಸಂಬಂಧ ಬುಧವಾರ ಮಹತ್ವದ ಸಭೆ ನಡೆಯಿತು. ಸಭೆಯ ನಂತರ ಮಾತನಾಡಿದ ಸಚಿವರು "ಕಂಬಳ ಅಧಿಕೃತಗೊಳಿಸುವ ಕಾನೂನನ್ನು ಜಾರಿಗೆ ತರುವ ಸಂಬಂಧ ಪಶುಸಂಗೋಪನಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಈ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲು ಕ್ರಮಕೈಗೊಳ್ಳಲಾಗುವುದು," ಎಂದರು.

"ಕಂಬಳ ಗ್ರಾಮೀಣ ಕ್ರೀಡೆಯಾಗಿದ್ದು ಇದರಲ್ಲಿ ಪ್ರಾಣಿ ಹಿಂಸೆ ಇರುವುದಿಲ್ಲ, ಸಾಮಾಜಿಕ ಮತ್ತು ಧಾರ್ಮಿಕ ಭಾವನೆಗಳು ಈ ಕ್ರೀಡೆ ಜೊತೆ ತಳುಕು ಹಾಕಿಕೊಂಡಿವೆ. ಜತೆಗೆ ಪ್ರಾಣಿಗಳಿಗೆ ತೊಂದರೆಯಾಗದಂತೆ ಕಂಬಳ ನಡೆಸಲು ಸರ್ಕಾರ ಈ ಹಿಂದೆಯೇ ಅನುಮತಿ ನೀಡಿತ್ತು," ಎಂದು ಸಚಿವರು ತಿಳಿಸಿದರು.
ಕಂಬಳಕ್ಕೆ ಮಾನ್ಯತೆ ನೀಡುವ ಕಾನೂನು ತರಲು ಸರ್ಕಾರ ನಿರ್ಧರಿಸಿದ್ದು, ಪ್ರಾಣಿ ಹಿಂಸೆ ತಡೆ ಕಾನೂನು ಅಡಿ ತಿದ್ದುಪಡಿ ತರುವ ಮೂಲಕ ಕಂಬಳದ ಜೊತೆ ಎತ್ತಿನ ಗಾಡಿ ಸ್ಪರ್ಧೆಗೂ ಅವಕಾಶ ಕಲ್ಪಿಸಲು ಚಿಂತನೆ ನಡೆಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಸಭೆಯಲ್ಲಿ ಕಾನೂನು ಇಲಾಖೆಯ ತಜ್ಞರು, ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೇರಿದಂತೆ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications