ಕಂಬಳಕ್ಕೆ ಪ್ರತ್ಯೇಕ ಕಾನೂನಿಗೆ ರಾಜ್ಯ ಸರ್ಕಾರ ಚಿಂತನೆ -ಜಯಚಂದ್ರ
ಕಂಬಳ ಉಳಿಸಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯ ಸರಕಾರ ಕಂಬಳಕ್ಕಾಗಿ ಪ್ರತ್ಯೇಕ ಕಾನೂನು ಜಾರಿಗೆ ಚಿಂತನೆ ನಡೆಸಿದೆ.
ಬೆಂಗಳೂರು, ಜನವರಿ 25: 'ಕಂಬಳ ಉಳಿಸಿ' ಪ್ರತಿಭಟನೆ ಜೋರಾದ ಬೆನ್ನಿಗೆ ಕರ್ನಾಟಕ ರಾಜ್ಯ ಸರಕಾರ ಪರ್ತಯೇಕ ಕಾನೂನು ರಚನೆಗೆ ಚಿಂತನೆ ನಡೆಸಿದೆ. "ಫೆಬ್ರವರಿ 6ರಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆಯೆಂದು," ಕಾನೂನು ಸಚಿವ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.
ನಿಷೇಧಿತ ಕಂಬಳ ಆಚರಣೆಯನ್ನು ಕಾನೂನು ಬದ್ಧಗೊಳಿಸುವ ಸಂಬಂಧ ಬುಧವಾರ ಮಹತ್ವದ ಸಭೆ ನಡೆಯಿತು. ಸಭೆಯ ನಂತರ ಮಾತನಾಡಿದ ಸಚಿವರು "ಕಂಬಳ ಅಧಿಕೃತಗೊಳಿಸುವ ಕಾನೂನನ್ನು ಜಾರಿಗೆ ತರುವ ಸಂಬಂಧ ಪಶುಸಂಗೋಪನಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಈ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲು ಕ್ರಮಕೈಗೊಳ್ಳಲಾಗುವುದು," ಎಂದರು.

"ಕಂಬಳ ಗ್ರಾಮೀಣ ಕ್ರೀಡೆಯಾಗಿದ್ದು ಇದರಲ್ಲಿ ಪ್ರಾಣಿ ಹಿಂಸೆ ಇರುವುದಿಲ್ಲ, ಸಾಮಾಜಿಕ ಮತ್ತು ಧಾರ್ಮಿಕ ಭಾವನೆಗಳು ಈ ಕ್ರೀಡೆ ಜೊತೆ ತಳುಕು ಹಾಕಿಕೊಂಡಿವೆ. ಜತೆಗೆ ಪ್ರಾಣಿಗಳಿಗೆ ತೊಂದರೆಯಾಗದಂತೆ ಕಂಬಳ ನಡೆಸಲು ಸರ್ಕಾರ ಈ ಹಿಂದೆಯೇ ಅನುಮತಿ ನೀಡಿತ್ತು," ಎಂದು ಸಚಿವರು ತಿಳಿಸಿದರು.
ಕಂಬಳಕ್ಕೆ ಮಾನ್ಯತೆ ನೀಡುವ ಕಾನೂನು ತರಲು ಸರ್ಕಾರ ನಿರ್ಧರಿಸಿದ್ದು, ಪ್ರಾಣಿ ಹಿಂಸೆ ತಡೆ ಕಾನೂನು ಅಡಿ ತಿದ್ದುಪಡಿ ತರುವ ಮೂಲಕ ಕಂಬಳದ ಜೊತೆ ಎತ್ತಿನ ಗಾಡಿ ಸ್ಪರ್ಧೆಗೂ ಅವಕಾಶ ಕಲ್ಪಿಸಲು ಚಿಂತನೆ ನಡೆಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಸಭೆಯಲ್ಲಿ ಕಾನೂನು ಇಲಾಖೆಯ ತಜ್ಞರು, ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೇರಿದಂತೆ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications