ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರು ತಿಂಗಳಿಂದ ನಿಂತೇ ಹೋಗಿದ್ದ ರೇಷನ್ ಕಾರ್ಡ್ ವಿತರಣೆಗೆ ಮರುಜೀವ

|
Google Oneindia Kannada News

Recommended Video

ರೇಷನ್ ಕಾರ್ಡ್ ವಿತರಣೆಗೆ ಬಂತು ಮರುಜೀವ | Oneindia Kannada

ಬೆಂಗಳೂರು, ಸೆಪ್ಟೆಂಬರ್ 24: ರಾಜ್ಯದ ಜನತೆಗೊಂದು ಸಿಹಿಸುದ್ದಿ. ಕಳೆದ ಆರು ತಿಂಗಳಿನಿಂದ ನಿಂತೇ ಹೋಗಿದ್ದ ಪಡಿತರ ಚೀಟಿ ವಿತರಣೆ ಪ್ರಕ್ರಿಯೆಗೆ ಮರು ಜೀವ ಬಂದಿದೆ.

ರಾಜ್ಯದಲ್ಲಿ ಆನ್‌ಲೈನ್ : ಮೂಲಕ ಪಡಿತರ ಚೀಟಿಗಾಗಿ ಸಲ್ಲಿಕೆಯಾಗಿರುವ ಸರಿಸುಮಾರು 8.29 ಲಕ್ಷ ಅರ್ಜಿಗಳ ವಿಲೇವಾರಿ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೆ ಚಾಲನೆ ನೀಡಿದೆ. ಇದೇ ವೇಳೆ ಹೊಸ ಅರ್ಜಿಗಳ ಸಲ್ಲಿಕೆಗೆ ಅವಕಾಶವನ್ನೂ ನೀಡಲಾಗಿದೆ.

ಆಧಾರ್ ನೊಂದಿಗೆ ರೇಶನ್ ಕಾರ್ಡ್ ಜೋಡಿಸದ ತಪ್ಪಿಗೆ ಮುಗ್ಧ ಬಾಲಕಿ ಬಲಿ! ಆಧಾರ್ ನೊಂದಿಗೆ ರೇಶನ್ ಕಾರ್ಡ್ ಜೋಡಿಸದ ತಪ್ಪಿಗೆ ಮುಗ್ಧ ಬಾಲಕಿ ಬಲಿ!

2017ರಲ್ಲಿ ರಾಜ್ಯ ಸರ್ಕಾರ ಆನ್‌ಲೈನ್ ಮೂಲಕ ಪಡಿತರ ಚೀಟಿಗಾಗಿ ಅರ್ಜಿ ಆಹ್ವಾನಿಸಿ, ಪಡಿತರ ಚೀಟಿ ವಿತರಣೆ ಕಾರ್ಯ ಆರಂಭಿಸಿತ್ತು. ಆದರೆ 2018ರ ಮಾರ್ಚ್ 27ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆಯಲ್ಲಿ ಅರ್ಜಿಗಳ ವಿಲೇವಾರಿ ಸ್ಥಗಿತಗೊಂಡಿತ್ತು.

State govt to issue pending 8.29 lakhs ration card for beneficiaries

ಈ ಹಿನ್ನೆಲೆಯಲ್ಲಿ 2017ರಿಂದ ಬಾಕಿ ಇರುವ ಆನ್‌ಲೈನ್ ಹೊಸ ಪಡಿತರ ಚೀಟಿ ಅರ್ಜಿಗಳ ವಿಲೇವಾರಿಗೆ ಚಾಲನೆ ನೀಡಲು ಸುತ್ತೋಲೆ ಹೊರಡಿಸಲಾಗಿದ್ದು, ಕುಟುಂಬದ ಮುಖ್ಯಸ್ಥರ ಆದಾಯ ದೃಢೀಕರಣ ಪ್ರಮಾಣಪತ್ರ ಪಡೆದು, ಅದರ ಪರಿಶೀಲನೆ ನಡೆಸಿ, ಸ್ಥಳ ತನಿಖೆ ನಡೆಸಿ, ನಿಯಮಾನುಸಾರ ಅರ್ಜಿ ಮೇಲೆ ಕ್ರಮಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಅರ್ಜಿ 80 ಸಾವಿರ, ಕೊಟ್ಟಿದ್ದು ಮಾತ್ರ 646 ಪಡಿತರ ಚೀಟಿ ! ಅರ್ಜಿ 80 ಸಾವಿರ, ಕೊಟ್ಟಿದ್ದು ಮಾತ್ರ 646 ಪಡಿತರ ಚೀಟಿ !

ಇದೇ ವೇಳೆ ಆನ್‌ಲೈನ್ ಮೂಲಕ ಹೊಸ ಅರ್ಜಿಗಳ ಸ್ವೀಕಾರ, ಚಾಲ್ತಿಯಲ್ಲಿರುವ ಪಡಿತರ ಚೀಟಿಗಳ ಮಾರ್ಪಾಟು, ಸೇರ್ಪಡೆ, ರದ್ದುಗೊಳಿಸುವಿಕೆ, ವಿಳಾಸ ಬದಲಾವಣೆ ಇತ್ಯಾದಿ ಪ್ರಕ್ರಿಯೆಗಳಿಗೂ ಚಾಲನೆ ನೀಡಲು ಇಲಾಖೆ ಆದೇಶಿಸಿದೆ.

English summary
Food and civil supplies department has issued a circular to issue ration cards to more than 8.29 lakhs beneficiaries who have applied through online which process was held due to model code of conduct during state assembly elections six months back.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X