ಸರಕಾರಕ್ಕೆ 'ಪದ್ಮಾವತಿ' ಬಿಡುಗಡೆ ತಡೆಯುವ ಅಧಿಕಾರವಿಲ್ಲ: ರಾಮಲಿಂಗಾ ರೆಡ್ಡಿ
ಬೆಳಗಾವಿ, ನವೆಂಬರ್ 17: ಹಿಂದಿ ಸಿನಿಮಾ ಪದ್ಮಾವತಿ ಬಿಡುಗಡೆಯಾಗದಂತೆ ತಡೆಯುವ ಅಧಿಕಾರ ರಾಜ್ಯ ಸರಕಾರಕ್ಕೆ ಇಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಮೂಗು ಕತ್ತರಿಸಬೇಕು, ತಲೆ ಕಡಿಯಬೇಕು ಅಂದರೆ ಅಸಹಿಷ್ಣುತೆ ಅಲ್ಲವೆ?: ರೈ
ಸಿನಿಮಾ ಬಿಡುಗಡೆಯನ್ನು ತಡೆಯುವ ಹಕ್ಕು ಸೆನ್ಸಾರ್ ಮಂಡಳಿಗೆ ಮಾತ್ರ ಇದೆ ಎಂದು ಅವರು ಹೇಳಿದ್ದಾರೆ. ಇದೇ ನವೆಂಬರ್ 30ರಂದು ಸಿನಿಮಾ ಬಿಡುಗಡೆಯಾಗಲಿದೆ.
ಗುರುವಾರ ವಿಧಾನ ಪರಿಷತ್ ನಲ್ಲಿ ಬಿಜೆಪಿ ಎಂಎಲ್ಸಿ ಲೆಹರ್ ಸಿಂಗ್ ಪ್ರಶ್ನೆಗೆ ಉತ್ತರಿಸಿದ ರೆಡ್ಡಿ, ಪದ್ಮಾವತಿ ನಿರ್ದೇಶಕರು ಇತಿಹಾಸವನ್ನು ತಿರುಚಿದ್ದಾರೆ ಎನ್ನಲು ನಾನು ಸಿನಿಮಾ ನೋಡಿಲ್ಲ ಎಂದು ಹೇಳಿದ್ದಾರೆ.
'ಶೂರ್ಪನಕಿ ಮೂಗು ಕತ್ತರಿಸಿದ ಹಾಗೆ ದೀಪಿಕಾಳ ಮೂಗು ಕತ್ತರಿಸುತ್ತೇವೆ'
ಸಿನಿಮಾ ಬಿಡುಗಡೆಗೆ ರಜಪೂತರು ಭಾರೀ ವಿರೋಧ ವ್ಯಕ್ತಪಡಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಆದರೆ ಸಿನಿಮಾ ಬಿಡುಗಡೆಗೆ ಸೆನ್ಸಾರ್ ಮಂಡಳಿ ಅನುಮೋದನೆ ನೀಡಿರುವುದರಿಂದ ಬಿಡುಗಡೆ ತಡೆಯಲು ಸರಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.