11,513 ಕೋಟಿ ಮೌಲ್ಯದ 10 ಯೋಜನೆ ಗುತ್ತಿಗೆಗೆ ಸರ್ಕಾರದಿಂದ ಒಪ್ಪಿಗೆ
ಬೆಂಗಳೂರು, ಏಪ್ರಿಲ್ 18: ಕರ್ನಾಟಕದಲ್ಲಿ 46,984 ಉದ್ಯೋಗಗಳ ಸೃಜನೆಯ ನಿರೀಕ್ಷೆ ಹುಟ್ಟಿಕೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58ನೇ ಸಭೆಯಲ್ಲಿ ಒಟ್ಟು 11,513 ಕೋಟಿ ರೂಪಾಯಿಗಳ 10 ಯೋಜನೆಗಳಿಗೆ ಅನುಮತಿ ನೀಡಲಾಗಿದೆ.
ಸೋಮವಾರ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪಗುತ್ತಿಗೆ ಮತ್ತು ಗುತ್ತಿಗೆಯ ಅವಧಿಯನ್ನು ಮಿತಿಮೀರಿ ವಿಸ್ತರಿಸಬಾರದು. ಈ ಬಗ್ಗೆ ಸ್ಪಷ್ಟ ನಿಯಮಗಳನ್ನು ರೂಪಿಸುವಂತೆ ಸೂಚನೆ ನೀಡಿದರು.
ವಿದ್ಯುತ್ ಹಾಗೂ ಸ್ಟೀಲ್ ಯೋಜನೆಗಳಿಗೆ ಸಂಬಂಧಿಸಿದ ಕೈಗಾರಿಕೆಗಳಲ್ಲಿ ನೀರಿನ ಬಳಕೆಯ ಪ್ರಮಾಣ ಹೆಚ್ಚಿರುತ್ತದೆ. ಕೈಗಾರಿಕೆಗಳಲ್ಲಿ ನೀರಿನ ಬಳಕೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕೈಗಾರಿಕೆಗಳಿಗೆ ನೀಡಿದ ಜಮೀನು ಕುರಿತು ಚರ್ಚೆ:
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58ನೇ ಸಭೆಯಲ್ಲಿ ಕೈಗಾರಿಕೆಗಳಿಗೆ ನೀಡಲಾಗಿರುವ ಜಮೀನು ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. 10 ರಿಂದ 20 ವರ್ಷಗಳ ಹಿಂದೆ ಸ್ಥಳ ಮಂಜೂರಾತಿ ಮಾಡಿಸಿಕೊಂಡಿದ್ದರೂ ಯೋಜನೆಗೆ ಬಳಕೆಯಾಗದೆ ಉಳಿದುಕೊಂಡಿರುವ ಕೈಗಾರಿಕೆಗಳಿವೆ. ಇದನ್ನು ಬೇರೆಯವರಿಗೆ ಕೊಡುವುದಕ್ಕೂ ಸಾಧ್ಯವಿಲ್ಲದ ಸ್ಥಿತಿಯಿದೆ. ಈ ಬಗ್ಗೆ ಕೂಡಲೇ ಪರಿಶೀಲಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಮಾರ್ಗದರ್ಶನ:
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಪರಿಶೀಲನೆಗಾಗಿ ಪ್ರತ್ಯೇಕವಾಗಿ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು. ನವೆಂಬರ್ 2 ಮತ್ತು 3ರಂದು ನಡೆಯಲಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಈ ಯೋಜನೆಗಳು ಪೂರಕವಾಗಲಿವೆ. ಭೂಮಿ, ನೀರು, ವಿದ್ಯುತ್ ಮೂಲಭೂತ ಸೌಕರ್ಯ, ವಿನಾಯತಿ ನೀಡುವುದು, ಹೊಸ ಕೈಗಾರಿಕಾ ನೀತಿ 2025ರ ಅಡಿಯಲ್ಲಿ ಯಾವ ರೀತಿ ಸೌಲಭ್ಯಗಳನ್ನು ನೀಡಬಹುದು ಎಂಬ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.

ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58ನೇ ಸಭೆಯಲ್ಲಿ ಗಣ್ಯರು:
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ವಸತಿ ಸಚಿವ ವಿ.ಸೋಮಣ್ಣ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್ಎನ್ ಪ್ರಸಾದ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಐ.ಟಿ. ಬಿ.ಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications