Get Updates
Get notified of breaking news, exclusive insights, and must-see stories!

ಲೋಕಸಭಾ ಚುನಾವಣೆ 2024 : ಮತದಾರರಲ್ಲಿ ಜಾಗೃತಿ ಕುರಿತು ಮುಖ್ಯ ಚುನಾವಣಾಧಿಕಾರಿ ಮೀನಾ ಹೇಳಿದ್ದೇನು?

ಬೆಂಗಳೂರು, ಜನವರಿ 22: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಮತದಾರರಲ್ಲಿ ಜಾಗೃತಿ ಮೂಡಿಸಲು ರಾಜ್ಯಮಟ್ಟದ ವ್ಯಂಗ್ಯ ಚಿತ್ರಕಾರರ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದರು.

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ - 2024 ರ ಅಂಗವಾಗಿ ಮತದಾರರ ಜಾಗೃತಿಗಾಗಿ ಹಮ್ಮಿಕೊಂಡಿರುವ "ರಾಜ್ಯ ಮಟ್ಟದ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನ"ಕ್ಕೆ ವಿಧಾನಸೌಧ ಪೂರ್ವ ದಿಕ್ಕಿನಲ್ಲಿರುವ ಬಸವಣ್ಣನ ಪ್ರತಿಮೆಯ ಮುಂಬಾಗ ಮುಖ್ಯ ಚುನಾವಣಾಧಿಕಾರಿಯಾದ ಮನೋಜ್ ಕುಮಾರ್ ಮೀನಾ ರವರು ಚಾಲನೆ ನೀಡಿದರು.

State Level Caricaturist Workshop And Exhibition For Voter Awareness

ಕಲಾವಿದರು ಮತದಾನದ ಕುರಿತು ಜಾಗೃತಿ ಹಾಗು ಮಹತ್ವವನ್ನು ಸಾರುವಂತಹ ಚಿತ್ರಗಳನ್ನು ರಚಿಸಿ, ಆಯ್ಕೆಯಾದ ಚಿತ್ರಗಳನ್ನು ಇಂದು ವಿಶೇಷ ಕಾರ್ಯಕ್ರಮದ ಮೂಲಕ ಪ್ರದರ್ಶನ ಮಾಡಲಾಯಿತು‌. ಜಾಗೃತಿ ಮೂಡಿಸುವ ಅತ್ಯುತ್ತಮ 25 ಚಿತ್ರಗಳನ್ನು ಮುಖ್ಯ ಚುನಾವಣಾ ಆಯೋಗದಿಂದ ಮತದಾನದ ಜಾಗೃತಿಗಾಗಿ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುವುದು. ಒಂದು ಚಿತ್ರ ಸಾವಿರ ಪದಗಳಿಗೆ ಸಮಾನ ಎಂಬ ನಾಣ್ಣುಡಿಯಂತೆ ಒಂದು ಗಂಟೆ ಭಾಷಣದಲ್ಲಿ ಹೇಳುವ ವಿಷಯವನ್ನು ವ್ಯಂಗ್ಯಚಿತ್ರಕಾರರು ಒಂದು ಚಿತ್ರದಲ್ಲಿ ಹೇಳಬಲ್ಲರು, ಇದೊಂದು ಅತ್ಯಂತ ಪರಿಣಾಮಕಾರಿ ಜಾಗೃತಿ ಮಾಧ್ಯಮವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಲೇಬೇಕು , ಎಲ್ಲರೂ ಭಾಗವಹಿಸಿದಾಗ ಮಾತ್ರ ಉತ್ತಮ ನಾಯಕರನ್ನು ಚುನಾಯಿಸಲು ಸಾಧ್ಯ. ಮತದಾನ ನಮ್ಮ ನಿಮ್ಮೇಲ್ಲರ ಹಕ್ಕು ಹಾಗು ಜವಾಬ್ದಾರಿ, ನಾವು ತಪ್ಪದೆ ಮತದಾನ ಮಾಡಬೇಕು . ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಸಾರ್ವಜನಿಕರಿಗೆ ಮತದಾನದ ಮಹತ್ವವನ್ನು ಸಾರುವ ಅಂಗವಾಗಿ ಈ ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

State Level Caricaturist Workshop And Exhibition For Voter Awareness

2024ರ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿ ಕಛೇರಿಯಿಂದ ವ್ಯಂಗ್ಯಚಿತ್ರಗಳನ್ನು ಆನ್ ಲೈನ್ ನಲ್ಲಿ ಸಹ ಆಹ್ವಾನಿಸಲಾಗಿತ್ತು. ಈಗಾಗಲೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ 30ಕ್ಕೂ ಹೆಚ್ಚು ಕಲಾವಿದರು ತಮ್ಮ ವ್ಯಂಗ್ಯಚಿತ್ರಗಳನ್ನು ಇಮೇಲ್ ಮೂಲಕ ಕಳುಹಿಸಿಕೊಟ್ಟಿದ್ದಾರೆ, ಅಂತಹುಗಳಲ್ಲಿ ಆಯ್ದ ಕೆಲವು ಚಿತ್ರಗಳನ್ನು ಮುದ್ರಿಸಿ ಇಂದು ಪ್ರದರ್ಶನಕ್ಕೆ ಇಡಲಾಗಿತ್ತು.

ಕಲಾವಿದರು ಮತದಾನದ ಕುರಿತು ಜಾಗೃತಿ ಹಾಗು ಮಹತ್ವವನ್ನು ಸಾರುವಂತಹ ನೂರಾರು ಚಿತ್ರಗಳನ್ನು ರಚಿಸಿದರು. ಸ್ಥಳದಲ್ಲಿ ವಿಡಿಸಿದ ಚಿತ್ರಗಳನ್ನು ಇಂದಿನ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲಾಯಿತು‌. ಈ ಕಾರ್ಯಾಗಾರದಲ್ಲಿ ಉತ್ತಮ ಜಾಗೃತಿ ಮೂಡಿಸುವ ಅತ್ಯುತ್ತಮ 25 ಚಿತ್ರಗಳನ್ನು ಚುನಾವಣಾ ಆಯೋಗದಿಂದ ಮತದಾನದ ಜಾಗೃತಿಗಾಗಿ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುವುದು.

ಈ ಸಂದರ್ಭದಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮರಾವ್, ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್, ಸ್ವೀಪ್ ನೋಡಲ್ ಅಧಿಕಾರಿಯಾದ ಪಿ.ಎನ್ ವಸ್ತ್ರದ್, ಮಾಹಿತಿ ತಂತ್ರಜ್ಞಾನ ಹಾಗೂ ಮಾಧ್ಯಮ ವಿಶೇಷ ಅಧಿಕಾರಿಯಾದ ಸೂರ್ಯ ಸೇನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+