ಲೋಕಸಭಾ ಚುನಾವಣೆ 2024 : ಮತದಾರರಲ್ಲಿ ಜಾಗೃತಿ ಕುರಿತು ಮುಖ್ಯ ಚುನಾವಣಾಧಿಕಾರಿ ಮೀನಾ ಹೇಳಿದ್ದೇನು?
ಬೆಂಗಳೂರು, ಜನವರಿ 22: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಮತದಾರರಲ್ಲಿ ಜಾಗೃತಿ ಮೂಡಿಸಲು ರಾಜ್ಯಮಟ್ಟದ ವ್ಯಂಗ್ಯ ಚಿತ್ರಕಾರರ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದರು.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ - 2024 ರ ಅಂಗವಾಗಿ ಮತದಾರರ ಜಾಗೃತಿಗಾಗಿ ಹಮ್ಮಿಕೊಂಡಿರುವ "ರಾಜ್ಯ ಮಟ್ಟದ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನ"ಕ್ಕೆ ವಿಧಾನಸೌಧ ಪೂರ್ವ ದಿಕ್ಕಿನಲ್ಲಿರುವ ಬಸವಣ್ಣನ ಪ್ರತಿಮೆಯ ಮುಂಬಾಗ ಮುಖ್ಯ ಚುನಾವಣಾಧಿಕಾರಿಯಾದ ಮನೋಜ್ ಕುಮಾರ್ ಮೀನಾ ರವರು ಚಾಲನೆ ನೀಡಿದರು.

ಕಲಾವಿದರು ಮತದಾನದ ಕುರಿತು ಜಾಗೃತಿ ಹಾಗು ಮಹತ್ವವನ್ನು ಸಾರುವಂತಹ ಚಿತ್ರಗಳನ್ನು ರಚಿಸಿ, ಆಯ್ಕೆಯಾದ ಚಿತ್ರಗಳನ್ನು ಇಂದು ವಿಶೇಷ ಕಾರ್ಯಕ್ರಮದ ಮೂಲಕ ಪ್ರದರ್ಶನ ಮಾಡಲಾಯಿತು. ಜಾಗೃತಿ ಮೂಡಿಸುವ ಅತ್ಯುತ್ತಮ 25 ಚಿತ್ರಗಳನ್ನು ಮುಖ್ಯ ಚುನಾವಣಾ ಆಯೋಗದಿಂದ ಮತದಾನದ ಜಾಗೃತಿಗಾಗಿ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುವುದು. ಒಂದು ಚಿತ್ರ ಸಾವಿರ ಪದಗಳಿಗೆ ಸಮಾನ ಎಂಬ ನಾಣ್ಣುಡಿಯಂತೆ ಒಂದು ಗಂಟೆ ಭಾಷಣದಲ್ಲಿ ಹೇಳುವ ವಿಷಯವನ್ನು ವ್ಯಂಗ್ಯಚಿತ್ರಕಾರರು ಒಂದು ಚಿತ್ರದಲ್ಲಿ ಹೇಳಬಲ್ಲರು, ಇದೊಂದು ಅತ್ಯಂತ ಪರಿಣಾಮಕಾರಿ ಜಾಗೃತಿ ಮಾಧ್ಯಮವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಲೇಬೇಕು , ಎಲ್ಲರೂ ಭಾಗವಹಿಸಿದಾಗ ಮಾತ್ರ ಉತ್ತಮ ನಾಯಕರನ್ನು ಚುನಾಯಿಸಲು ಸಾಧ್ಯ. ಮತದಾನ ನಮ್ಮ ನಿಮ್ಮೇಲ್ಲರ ಹಕ್ಕು ಹಾಗು ಜವಾಬ್ದಾರಿ, ನಾವು ತಪ್ಪದೆ ಮತದಾನ ಮಾಡಬೇಕು . ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಸಾರ್ವಜನಿಕರಿಗೆ ಮತದಾನದ ಮಹತ್ವವನ್ನು ಸಾರುವ ಅಂಗವಾಗಿ ಈ ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

2024ರ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿ ಕಛೇರಿಯಿಂದ ವ್ಯಂಗ್ಯಚಿತ್ರಗಳನ್ನು ಆನ್ ಲೈನ್ ನಲ್ಲಿ ಸಹ ಆಹ್ವಾನಿಸಲಾಗಿತ್ತು. ಈಗಾಗಲೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ 30ಕ್ಕೂ ಹೆಚ್ಚು ಕಲಾವಿದರು ತಮ್ಮ ವ್ಯಂಗ್ಯಚಿತ್ರಗಳನ್ನು ಇಮೇಲ್ ಮೂಲಕ ಕಳುಹಿಸಿಕೊಟ್ಟಿದ್ದಾರೆ, ಅಂತಹುಗಳಲ್ಲಿ ಆಯ್ದ ಕೆಲವು ಚಿತ್ರಗಳನ್ನು ಮುದ್ರಿಸಿ ಇಂದು ಪ್ರದರ್ಶನಕ್ಕೆ ಇಡಲಾಗಿತ್ತು.
ಕಲಾವಿದರು ಮತದಾನದ ಕುರಿತು ಜಾಗೃತಿ ಹಾಗು ಮಹತ್ವವನ್ನು ಸಾರುವಂತಹ ನೂರಾರು ಚಿತ್ರಗಳನ್ನು ರಚಿಸಿದರು. ಸ್ಥಳದಲ್ಲಿ ವಿಡಿಸಿದ ಚಿತ್ರಗಳನ್ನು ಇಂದಿನ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲಾಯಿತು. ಈ ಕಾರ್ಯಾಗಾರದಲ್ಲಿ ಉತ್ತಮ ಜಾಗೃತಿ ಮೂಡಿಸುವ ಅತ್ಯುತ್ತಮ 25 ಚಿತ್ರಗಳನ್ನು ಚುನಾವಣಾ ಆಯೋಗದಿಂದ ಮತದಾನದ ಜಾಗೃತಿಗಾಗಿ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುವುದು.
ಈ ಸಂದರ್ಭದಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮರಾವ್, ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್, ಸ್ವೀಪ್ ನೋಡಲ್ ಅಧಿಕಾರಿಯಾದ ಪಿ.ಎನ್ ವಸ್ತ್ರದ್, ಮಾಹಿತಿ ತಂತ್ರಜ್ಞಾನ ಹಾಗೂ ಮಾಧ್ಯಮ ವಿಶೇಷ ಅಧಿಕಾರಿಯಾದ ಸೂರ್ಯ ಸೇನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
-
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral











Click it and Unblock the Notifications