ಕೃಷಿ ಸಚಿವ ಬಿಸಿ ಪಾಟೀಲ್ ವಿರುದ್ಧ ಕಿಸಾನ್ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು, ಡಿ. 03: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಹೇಳಿಕೆ ನೀಡಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ ವಿರುದ್ಧ ಕಿಸಾನ್ ಕಾಂಗ್ರೆಸ್ ವತಿಯಿಂದ ಶುಕ್ರವಾರ (ನ. 04) ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
Recommended Video
ರೈತರು ಹೇಡಿಗಳು , BC Patil ಹೇಳಿಕೆ ಖಂಡಿಸಿ ಇಂದು ಪ್ರತಿಭಟನೆ | Oneindia Kannada
ಕಾಂಗ್ರೆಸ್ ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮೀಗಾ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸಚಿವ ಬಿ.ಸಿ. ಪಾಟೀಲ್ ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು. ಕೃಷಿ ಸಚಿವ ಬಿ.ಸಿ. ಪಾಟೀಲ್ ಪ್ರತಿಕ್ರತಿ ದಹನ ಹಮ್ಮಿಕೊಳ್ಳಲು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವ ರೈತ ಹೇಡಿ ಎಂದು ಹೇಳಿರುವ ಕೃಷಿ ಸಚಿವ ಒಬ್ಬ ಗಂಡಸು ಅಲ್ಲ ಹೆಂಗಸು ಅಲ್ಲ ರೈತರ ಬಗ್ಗೆ ಕೀಳಾಗಿ ಮಾತನಾಡಿರುವ ಬಿ.ಸಿ. ಪಾಟೀಲ್ ರೈತರ ಕ್ಷಮೆ ಕೋರಬೇಕು ಇಲ್ಲದಿದ್ದರೆ ಅವರ ಮನೆ ಎದುರು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications