ಕರ್ನಾಟಕ: ವರದಿಯಿಂದ ಅಳಿವಿನಂಚಿನ 53 ಜಾತಿಗಳ ಸ್ಥಿತಿಗತಿ ಬಹಿರಂಗ
ಬೆಂಗಳೂರು, ಅಕ್ಟೋಬರ್ 26: ನ್ಯಾ.ನಾಗಮೋಹನ್ ದಾಸ್ ಅವರ ವರದಿ ಅನುಷ್ಠಾನಕ್ಕೆ ಅನುಮೋದನೆ ನೀಡುವ ಮೂಲಕ ಎಸ್ಸಿ, ಎಸ್ಟಿ ವರ್ಗದ ಮೀಸಲಾತಿ ಹೆಚ್ಚಿಸಲಾಗುತ್ತಿದೆ. ಇತ್ತ ಕರ್ನಾಟಕದಲ್ಲಿ 53 ಜಾತಿಗಳು ಅಳಿವಿನಂಚಿನಲ್ಲಿವೆ ಎಂದು ವರದಿಯೊಂದು ಬಹಿರಂಗಪಡಿಸಿದೆ.
ಉನ್ನತ ಮಟ್ಟದ ಸಮಿತಿಯೊಂದು ಈ ಮಾಹಿತಿ ಬಹಿರಂಗಪಡಿಸಿದ್ದು, ಅಳಿವಿನಂಚಿನಲ್ಲಿರುವ ಈ ಜಾತಿ ಸಮುದಾಯಗಳಿಗೆ ಸರ್ಕಾರಿ ಸವಲತ್ತುಗಳು ಸಿಗದೇ ದುಃಸ್ಥಿತಿ ತಲುಪಿವೆ. ಅತ್ಯಂತ ಕರುಣಾಜನಕ ಸ್ಥಿತಿಗಳಲ್ಲಿ ಆ ಜನರು ಬದುಕುತ್ತಿದ್ದಾರೆ. ಹೀಗೆಂದು ಹೈಕೋರ್ಟ್ ನಿವೃತ್ತ ನ್ಯಾ. ಸುಭಾಷ್ ಆಡಿ ನೇತೃತ್ವದ ಸಮಿತಿ ಅಕ್ಟೋಬರ್ 7 ರಂದು ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸುವ ಬಗ್ಗೆ ನ್ಯಾ. ಎಚ್.ಎನ್.ನಾಗಮೋಹನ್ ದಾಸ್ ಆಯೋಗದ ಶಿಫಾರಸನ್ನು ಅನುಷ್ಠಾನಗೊಳಿಸುವ ವಿಧಾನಗಳನ್ನು ಪರಿಶೀಲಿಸುವ ಕೆಲಸವನ್ನು ಉನ್ನತ ಮಟ್ಟದ ಸಮಿತಿಗೆ ವಹಿಸಲಾಗಿತ್ತು.
ಎಲ್ಲ ರಂಗಗಳಲ್ಲೂ ಹಿಂದುಳಿದ ಈ 53 ಸಮುದಾಯಗಳು ಸಂಖ್ಯೆಯಲ್ಲಿ ಅತ್ಯಂತ ಚಿಕ್ಕದಾಗಿವೆ. ಈ ಜಾತಿಗಳ ಹೆಸರುಗಳು ಸಹ ಅಗೋಚರವಾಗೇ ಉಳಿದಿವೆ. ಈ ಜಾತಿಗಳ ಜನರು ಕೇವಲ ಸಾಂಪ್ರದಾಯಿಕ ವೃತ್ತಿಗಳನ್ನು ಮಾತ್ರ ಅವಲಂಬಿಸಿದ್ದಾರೆ. ಸಮಾಜದ ಮುಖ್ಯವಾಹಿನಿಗೆ ಬಾರದೆ, ಯಾವ ಸ್ಥಾನಮಾನ ಪಡೆಯದೆ ಉಳಿದಿವೆ, ಸಮಾಜದಲ್ಲಿ ಅದೃಶ್ಯದಂತೆ ಈ ಜಾತಿ ಜನರು ಬದುಕುತ್ತಿದ್ದಾರೆ ಎಂದು ವರದಿ ಹೇಳುತ್ತದೆ.

53 ಜಾತಿಗಳ ಜನಸಂಖ್ಯೆ ತೀರಾ ಕಡಿಮೆ
ವರದಿ ಪ್ರಕಾರ, 53 ಜಾತಿಗಳ ಪೈಕಿ 47 ಸಮುದಾಯಗಳ ಒಟ್ಟು ಜನಸಂಖ್ಯೆಯು ಒಂದು ಲಕ್ಷದಷ್ಟು ಇಲ್ಲ. ಮುಂದುವರಿದು ಹೇಳುವುದಾದರೆ ಡಕ್ಕಲಿಗರ ಜಾತಿ ಸಮುದಾಯದವರರ ಜನಸಂಖ್ಯೆ, ಸಾಂಪ್ರದಾಯಿಕ ಜಾನಪದ ಹಾಡು ಹಾಡಿ ಭಿಕ್ಷೆ ಬೇಡುವವರ ಸಂಕ್ಯೆ1,000 ಸಹ ದಾಟಲ್ಲ. ದಾಸರಿ ಸಮುದಾಯದವರು 500 ಕ್ಕಿಂತ ಕಡಿಮೆ ಇದ್ದರೆ, ಪಂಬದ ಜಾತಿಯ ಜನಸಂಖ್ಯೆ 614 ಇದ್ದು, ಬಂಡಿ ಸಮುದಾಯವು 608 ಮತ್ತು ಆದಿಯರು ಕೇವಲ 811 ರಷ್ಟಿದ್ದು ಇವರು ಕೃಷಿಯನ್ನೇ ಅವಲಂಬಿಸಿದ್ದಾರೆ.
ಇದೇ ರೀತಿ ಇನ್ನಿತರ ಜಾತಿ ಸಮುದಾಯದವರು ಜನ ಸಂಖ್ಯೆ 200 ಸಹ ದಾಟುವುದಿಲ್ಲ. ಶೇ.74 ರಷ್ಟು ಅಲೆಮಾರಿ ಹಾಗೂ ಅರೆ ಅಲೆಮಾರಿ ಬುಡಕಟ್ಟು ಸಮುದಾಯದ ಜನರು ಅಗೋಚರವಾಗಿ ಉಳಿದಿದ್ದಾರೆ. ಅವರ ಜನಸಂಖ್ಯೆ 10,000 ಕ್ಕಿಂತ ಕಡಿಮೆ ಇದೆ. ಇನ್ನೂ ಅವರ ಸಾಕ್ಷರತೆ ಮಟ್ಟ ಕೇವಲ ಶೇ 3 ರಷ್ಟಿದ್ದರೆ ಹೆಚ್ಚು. ಆಧುನಿಕ ಕಾಲದಲ್ಲೂ ಸಹ ರಾಜ್ಯದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ವಂಚಿತ ವರ್ಗದವರಿಗೆ ಈ ವರೆಗೆ ಮೀಸಲಾತಿಯ ಪ್ರಯೋಜನ ದೊರೆತಿಲ್ಲ. 101 ಎಸ್ಸಿ ಜಾತಿಗಳಲ್ಲಿ ಮೀಸಲಾತಿ ಎಂಬುದು ಕೆಲವೇ ಉಪ ಜಾತಿಗಳಿಗೆ ಮಾತ್ರ ಸೀಮಿತವಾಗಿದೆ.
ಇದಲ್ಲದೇ ನಗರ ಪ್ರದೇಶಗಳಲ್ಲಿ ಸ್ಲಂ/ಕೊಳೆಗೇರಿ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳು ಹಾಗೂ ಬುಡಕಟ್ಟು ಮಹಿಳೆಯರ ತೃಪ್ತಿದಾಯಕವಾದ ಜೀನವ ನಡೆಸುತ್ತಿಲ್ಲ. ದೇವದಾಸಿಗಳು, ಸಫಾಯಿ ಕರ್ಮಚಾರಿಗಳ ಸಮುದಾಯಗಳು ಶೈಕ್ಷಣಿಕ ಮಟ್ಟದಲ್ಲಿ ತೀರಾ ಹಿಂದುಳಿವೆ. ಸ್ವಾತಂತ್ರ್ಯ ಬಂದ ಇಷ್ಟು ವರ್ಷವಾದರೂ ಈ ಸಮುದಾಯಗಳಿಗೆ ಸರ್ಕಾರಿ ಉದ್ಯೋಗ, ಉನ್ನತ ಶಿಕ್ಷಣ, ಮೀಸಲಾತಿಯ ಪ್ರಯೋಜನ ಮರೀಚಿಕೆಯಾಗೇ ಉಳಿದಿವೆ ಎಂದು ವರದಿ ತಿಳಿಸಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು?











Click it and Unblock the Notifications